<p><strong>ವಿಜಯಪುರ: </strong>ಹಣದ ಆಮಿಷಕ್ಕೆ ಮಹಿಳೆಯೊಬ್ಬರು ಹಸುಗೂಸನ್ನೇ ಮಾರಾಟ ಮಾಡಿದ್ದು, ಈ ಸಂಬಂಧ ಮೂವರ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಆಗಸ್ಟ್ 19 ರಂದು ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ರೇಣುಕಾ ಸದಾಶಿವ ಕಾಂಬಳೆ ಎಂಬುವವರು ಜಿಲ್ಲಾಸ್ಪತ್ರೆಯ ನರ್ಸ್ ಒಬ್ಬರ ಮಧ್ಯಸ್ಥಿಕೆಯಲ್ಲಿ ₹ 5 ಸಾವಿರಕ್ಕೆ ಮಗುವನ್ನು ವ್ಯಕ್ತಿಯೊಬ್ಬರಿಗೆ ಆಗಸ್ಟ್ 26ರಂದು ಮಾರಾಟ ಮಾಡಿ, ಊರಿಗೆ ಮರಳಿದ್ದಾರೆ. ಬಳಿಕ ಮತ್ತೆ ಮಗು ಬೇಕು ಎಂದು ಜಿಲ್ಲಾಸ್ಪತ್ರೆಗೆ ಬಂದು ವಿಚಾರಿಸಿದ್ದಾರೆ. ಈ ವಿಷಯ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಧ್ಯ ಪ್ರವೇಶಿಸಿ, ದೂರು ದಾಖಲಿಸಿದ್ದಾರೆ.</p>.<p>ಮಗುವಿನ ಮಾರಾಟಕ್ಕೆ ಸಹಕರಿಸಿದ ವಿಜಯಪುರ ಜಿಲ್ಲಾಸ್ಪತ್ರೆಯ ನರ್ಸ್ ಕಸ್ತೂರಿ ಹಾಗೂ ಕಸ್ತೂರಿ ಪತಿ ಮಂಜುನಾಥ ಪಡಸಲಗಿ ಹಾಗೂ ಮಗುವನ್ನು ಖರೀದಿಸಿದ ವ್ಯಕ್ತಿ(ಹೆಸರು ತಿಳಿದುಬಂದಿಲ್ಲ) ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಪ್ರಕರಣದ ಹಿನ್ನೆಲೆಯಲ್ಲಿ ನರ್ಸ್ ಕಸ್ತೂರಿ ಅವರನ್ನು ಜಿಲ್ಲಾಸ್ಪತ್ರೆ ಸರ್ಜನ್ ಅವರು ಕೆಲಸದಿಂದ ಅಮಾನತು ಮಾಡಿದ್ದಾರೆ. ಪ್ರಕರಣ ತನಿಖೆಯ ಹಂತದಲ್ಲಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಹಣದ ಆಮಿಷಕ್ಕೆ ಮಹಿಳೆಯೊಬ್ಬರು ಹಸುಗೂಸನ್ನೇ ಮಾರಾಟ ಮಾಡಿದ್ದು, ಈ ಸಂಬಂಧ ಮೂವರ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಆಗಸ್ಟ್ 19 ರಂದು ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ರೇಣುಕಾ ಸದಾಶಿವ ಕಾಂಬಳೆ ಎಂಬುವವರು ಜಿಲ್ಲಾಸ್ಪತ್ರೆಯ ನರ್ಸ್ ಒಬ್ಬರ ಮಧ್ಯಸ್ಥಿಕೆಯಲ್ಲಿ ₹ 5 ಸಾವಿರಕ್ಕೆ ಮಗುವನ್ನು ವ್ಯಕ್ತಿಯೊಬ್ಬರಿಗೆ ಆಗಸ್ಟ್ 26ರಂದು ಮಾರಾಟ ಮಾಡಿ, ಊರಿಗೆ ಮರಳಿದ್ದಾರೆ. ಬಳಿಕ ಮತ್ತೆ ಮಗು ಬೇಕು ಎಂದು ಜಿಲ್ಲಾಸ್ಪತ್ರೆಗೆ ಬಂದು ವಿಚಾರಿಸಿದ್ದಾರೆ. ಈ ವಿಷಯ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಧ್ಯ ಪ್ರವೇಶಿಸಿ, ದೂರು ದಾಖಲಿಸಿದ್ದಾರೆ.</p>.<p>ಮಗುವಿನ ಮಾರಾಟಕ್ಕೆ ಸಹಕರಿಸಿದ ವಿಜಯಪುರ ಜಿಲ್ಲಾಸ್ಪತ್ರೆಯ ನರ್ಸ್ ಕಸ್ತೂರಿ ಹಾಗೂ ಕಸ್ತೂರಿ ಪತಿ ಮಂಜುನಾಥ ಪಡಸಲಗಿ ಹಾಗೂ ಮಗುವನ್ನು ಖರೀದಿಸಿದ ವ್ಯಕ್ತಿ(ಹೆಸರು ತಿಳಿದುಬಂದಿಲ್ಲ) ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಪ್ರಕರಣದ ಹಿನ್ನೆಲೆಯಲ್ಲಿ ನರ್ಸ್ ಕಸ್ತೂರಿ ಅವರನ್ನು ಜಿಲ್ಲಾಸ್ಪತ್ರೆ ಸರ್ಜನ್ ಅವರು ಕೆಲಸದಿಂದ ಅಮಾನತು ಮಾಡಿದ್ದಾರೆ. ಪ್ರಕರಣ ತನಿಖೆಯ ಹಂತದಲ್ಲಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>