<p><strong>ಸೋಲಾಪುರ</strong>: ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳ ಅದಲು-ಬದಲು ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ಪಡೆಯುವ ಸಲುವಾಗಿ ಸರ್ಕಾರಿ ಆಸ್ಪತ್ರೆಗೆ ಮೂರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.</p>.<p>ಡಾ. ವಿದ್ಯಾ ತಿರಾಣಕರ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚಿಸಲಾಗಿದೆ. ಸಿವಿಲ್ ಆಸ್ಪತ್ರೆಯಲ್ಲಿ ಪ್ರಸವವಾದ ಶಿಶುವಿನ ಅದಲು- ಬದಲು ಕುರಿತು ಬಂಧುಗಳು ದೂರು ನೀಡಿದ್ದರು. ಈ ಘಟನೆಯ ಗಂಭೀರತೆಯನ್ನು ಗಮನದಲ್ಲಿಟ್ಟು ಪೊಲೀಸರು ಸಹ ತನಿಖೆ ಪ್ರಾರಂಭಿಸಿದ್ದಾರೆ. ಸಂಬಂಧಿತ ದಿನದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೋಷಕರು ಡಿಎನ್ಎ ಪರೀಕ್ಷೆಗಾಗಿ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ಅರ್ಜಿ ಸಲ್ಲಿಸಿದ್ದಾರೆ.</p>.<p>ಶಿಶು ಬದಲಾವಣೆ ಘಟನೆಯ ಹಿನ್ನೆಲೆಯಲ್ಲಿ ಡೀನ್ ಡಾ. ಋತ್ವಿಕ್ ಜಯ್ಕರ್ ಅವರು ‘ಬಿ’ ಬ್ಲಾಕ್ನ ಸಂಪೂರ್ಣ ತಪಾಸಣೆ ನಡೆಸಿದರು. ಈ ವೇಳೆ ಅವರು ಶೌಚಾಲಯಗಳನ್ನೂ ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಇರುವ ಅಸ್ವಚ್ಛತೆ, ರೋಗಿಗಳಿಗೆ ನೀಡಲಾಗುವ ಸೇವೆಯ ಗುಣಮಟ್ಟ ಉತ್ತಮವಾಗಿರಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಜೊತೆಗೆ, ನೀರಿನ ಸೌಲಭ್ಯ ಇರದ ಸ್ಥಳಗಳಲ್ಲಿ ಸ್ವಚ್ಛ ನೀರಿನ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದರು. </p>.<p>ತನಿಖೆ ನಿಧಾನಗತಿಯಲ್ಲಿದೆ, ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಬಂಧುಗಳು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಲಾಪುರ</strong>: ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳ ಅದಲು-ಬದಲು ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ಪಡೆಯುವ ಸಲುವಾಗಿ ಸರ್ಕಾರಿ ಆಸ್ಪತ್ರೆಗೆ ಮೂರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.</p>.<p>ಡಾ. ವಿದ್ಯಾ ತಿರಾಣಕರ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚಿಸಲಾಗಿದೆ. ಸಿವಿಲ್ ಆಸ್ಪತ್ರೆಯಲ್ಲಿ ಪ್ರಸವವಾದ ಶಿಶುವಿನ ಅದಲು- ಬದಲು ಕುರಿತು ಬಂಧುಗಳು ದೂರು ನೀಡಿದ್ದರು. ಈ ಘಟನೆಯ ಗಂಭೀರತೆಯನ್ನು ಗಮನದಲ್ಲಿಟ್ಟು ಪೊಲೀಸರು ಸಹ ತನಿಖೆ ಪ್ರಾರಂಭಿಸಿದ್ದಾರೆ. ಸಂಬಂಧಿತ ದಿನದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೋಷಕರು ಡಿಎನ್ಎ ಪರೀಕ್ಷೆಗಾಗಿ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ಅರ್ಜಿ ಸಲ್ಲಿಸಿದ್ದಾರೆ.</p>.<p>ಶಿಶು ಬದಲಾವಣೆ ಘಟನೆಯ ಹಿನ್ನೆಲೆಯಲ್ಲಿ ಡೀನ್ ಡಾ. ಋತ್ವಿಕ್ ಜಯ್ಕರ್ ಅವರು ‘ಬಿ’ ಬ್ಲಾಕ್ನ ಸಂಪೂರ್ಣ ತಪಾಸಣೆ ನಡೆಸಿದರು. ಈ ವೇಳೆ ಅವರು ಶೌಚಾಲಯಗಳನ್ನೂ ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಇರುವ ಅಸ್ವಚ್ಛತೆ, ರೋಗಿಗಳಿಗೆ ನೀಡಲಾಗುವ ಸೇವೆಯ ಗುಣಮಟ್ಟ ಉತ್ತಮವಾಗಿರಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಜೊತೆಗೆ, ನೀರಿನ ಸೌಲಭ್ಯ ಇರದ ಸ್ಥಳಗಳಲ್ಲಿ ಸ್ವಚ್ಛ ನೀರಿನ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದರು. </p>.<p>ತನಿಖೆ ನಿಧಾನಗತಿಯಲ್ಲಿದೆ, ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಬಂಧುಗಳು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>