<p><strong>ವಿಜಯಪುರ:</strong> ಜಿಲ್ಲಾ ‘ಕಾಂಗ್ರೆಸ್ ಶಕ್ತಿ ಕೇಂದ್ರ’ವಾದ ಕಾಂಗ್ರೆಸ್ ಕಚೇರಿ ಇರುವ ಹಾಗೂ ಮಹಾನಗರ ಪಾಲಿಕೆಯಿಂದ ಕೂಗಳತೆ ದೂರದಲ್ಲಿರುವ ನಗರದ ಕೋರ್ಟ್ ಸರ್ಕಲ್ನಿಂದ ರಾಮನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಇದರಿಂದ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ.</p>.<p>ಕಾಂಗ್ರೆಸ್ ಕಚೇರಿಗೆ ಜಿಲ್ಲೆಯ ಘಟನಾಘಟಿ ಸಚಿವರು, ಶಾಸಕರು, ಮಾಜಿ ಶಾಸಕರು, ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರು ಸೇರಿದಂತೆ ಪ್ರಮುಖರು ಹಾದುಹೋಗುವ ಈ ರಸ್ತೆಯ ಪರಿಸ್ಥಿತಿಯೇ ಹೀಗಾದರೆ, ನಗರದ ಇನ್ನುಳಿದ ರಸ್ತೆಗಳ ಪರಿಸ್ಥಿತಿ ಕೇಳುವವರಾರು ಎಂಬ ಪ್ರಶ್ನೆ ಮೂಡಿದೆ.</p>.<p>ಕೇವಲ 100 ಮೀಟರ್ ಉದ್ದ ಇರುವ ಈ ರಸ್ತೆಯಲ್ಲಿ ಕಳೆದ ಮಳೆಗಾಲದಲ್ಲಿ ಗುಂಡಿಗಳು ಬಿದ್ದು, ನೀರು ನಿಂತು ಹದಗೆಟ್ಟಿದೆ. ಬೈಕ್, ಆಟೊ ರಿಕ್ಷಾ, ಕಾರುಗಳು ಸಂಚರಿಸಲು ಪರದಾಡಬೇಕಾಗಿದೆ. ಇದೇ ರಸ್ತೆಯಲ್ಲಿ ವಿಜಯಪುರ ಬಸ್ ನಿಲ್ದಾಣದಿಂದ ತಾಳಿಕೋಟೆ, ಮುದ್ದೇಬಿಹಾಳ, ಬಸವನ ಬಾಗೇವಾಡಿ, ನಿಡಗುಂದಿ ಸೇರಿದಂತೆ ಪ್ರಮುಖ ಮಾರ್ಗಗಳಿಗೆ ಬಸ್ಗಳು ಪ್ರತಿದಿನ ಸಂಚರಿಸುತ್ತವೆ.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರ ಒಡೆತನದ ಸಹಕಾರ ಬ್ಯಾಂಕ್, ಖಾಸಗಿ ಕ್ಲಿನಿಕ್, ಝೆರಾಕ್ಸ್ ಅಂಗಡಿ, ಕಿರಾಣಿ ಅಂಗಡಿ ಸೇರಿದಂತೆ ಅನೇಕ ವಕೀಲರ ಕಚೇರಿಗಳು ಸಹ ಈ ಮಾರ್ಗದಲ್ಲಿವೆ. ಹತ್ತಾರು ಮನೆಗಳೂ ಇದ್ದು, ಹದಗೆಟ್ಟ ರಸ್ತೆಯಿಂದೇಳುವ ದೂಳಿನಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ.</p>.<p>‘ಗುಂಡಿಗಳ ನಡುವೆ ರಸ್ತೆ ಇದೆಯೋ ಅಥವಾ ರಸ್ತೆಯ ನಡುವೆ ಗುಂಡಿ ಇದೆಯೋ ಎಂದು ಹುಡುಕಬೇಕಾಗಿದೆ. ಪ್ರತಿ ದಿನ ಅನೇಕ ಬೈಕ್ ಸವಾರರು ಇಲ್ಲಿ ಬಿದ್ದು ಗಾಯಗೊಂಡಿದ್ದಾರೆ. ಈ ಮಾರ್ಗದಲ್ಲಿ ನಡೆದುಕೊಂಡು ಹೋಗುವವರು ಮೂಗಿ ಮುಚ್ಚಿಕೊಂಡು ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ’ ಎನ್ನುತ್ತಾರೆ ಸಾರ್ವಜನಿಕರು.</p>.<div><blockquote>ಕಾಂಗ್ರೆಸ್ ರಸ್ತೆ ಹದಗೆಟ್ಟಿರುವುದರಿಂದ ಜನರಿಗೆ ತುಂಬಾ ತೊಂದರೆ ಆಗಿದೆ. ಸ್ಥಳೀಯ ನಿವಾಸಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ </blockquote><span class="attribution">ವಿಶ್ವನಾಥ ಕುಲಕರ್ಣಿ ಸ್ಥಳೀಯ ನಿವಾಸಿ ವಿಜಯಪುರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಜಿಲ್ಲಾ ‘ಕಾಂಗ್ರೆಸ್ ಶಕ್ತಿ ಕೇಂದ್ರ’ವಾದ ಕಾಂಗ್ರೆಸ್ ಕಚೇರಿ ಇರುವ ಹಾಗೂ ಮಹಾನಗರ ಪಾಲಿಕೆಯಿಂದ ಕೂಗಳತೆ ದೂರದಲ್ಲಿರುವ ನಗರದ ಕೋರ್ಟ್ ಸರ್ಕಲ್ನಿಂದ ರಾಮನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಇದರಿಂದ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ.</p>.<p>ಕಾಂಗ್ರೆಸ್ ಕಚೇರಿಗೆ ಜಿಲ್ಲೆಯ ಘಟನಾಘಟಿ ಸಚಿವರು, ಶಾಸಕರು, ಮಾಜಿ ಶಾಸಕರು, ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರು ಸೇರಿದಂತೆ ಪ್ರಮುಖರು ಹಾದುಹೋಗುವ ಈ ರಸ್ತೆಯ ಪರಿಸ್ಥಿತಿಯೇ ಹೀಗಾದರೆ, ನಗರದ ಇನ್ನುಳಿದ ರಸ್ತೆಗಳ ಪರಿಸ್ಥಿತಿ ಕೇಳುವವರಾರು ಎಂಬ ಪ್ರಶ್ನೆ ಮೂಡಿದೆ.</p>.<p>ಕೇವಲ 100 ಮೀಟರ್ ಉದ್ದ ಇರುವ ಈ ರಸ್ತೆಯಲ್ಲಿ ಕಳೆದ ಮಳೆಗಾಲದಲ್ಲಿ ಗುಂಡಿಗಳು ಬಿದ್ದು, ನೀರು ನಿಂತು ಹದಗೆಟ್ಟಿದೆ. ಬೈಕ್, ಆಟೊ ರಿಕ್ಷಾ, ಕಾರುಗಳು ಸಂಚರಿಸಲು ಪರದಾಡಬೇಕಾಗಿದೆ. ಇದೇ ರಸ್ತೆಯಲ್ಲಿ ವಿಜಯಪುರ ಬಸ್ ನಿಲ್ದಾಣದಿಂದ ತಾಳಿಕೋಟೆ, ಮುದ್ದೇಬಿಹಾಳ, ಬಸವನ ಬಾಗೇವಾಡಿ, ನಿಡಗುಂದಿ ಸೇರಿದಂತೆ ಪ್ರಮುಖ ಮಾರ್ಗಗಳಿಗೆ ಬಸ್ಗಳು ಪ್ರತಿದಿನ ಸಂಚರಿಸುತ್ತವೆ.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರ ಒಡೆತನದ ಸಹಕಾರ ಬ್ಯಾಂಕ್, ಖಾಸಗಿ ಕ್ಲಿನಿಕ್, ಝೆರಾಕ್ಸ್ ಅಂಗಡಿ, ಕಿರಾಣಿ ಅಂಗಡಿ ಸೇರಿದಂತೆ ಅನೇಕ ವಕೀಲರ ಕಚೇರಿಗಳು ಸಹ ಈ ಮಾರ್ಗದಲ್ಲಿವೆ. ಹತ್ತಾರು ಮನೆಗಳೂ ಇದ್ದು, ಹದಗೆಟ್ಟ ರಸ್ತೆಯಿಂದೇಳುವ ದೂಳಿನಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ.</p>.<p>‘ಗುಂಡಿಗಳ ನಡುವೆ ರಸ್ತೆ ಇದೆಯೋ ಅಥವಾ ರಸ್ತೆಯ ನಡುವೆ ಗುಂಡಿ ಇದೆಯೋ ಎಂದು ಹುಡುಕಬೇಕಾಗಿದೆ. ಪ್ರತಿ ದಿನ ಅನೇಕ ಬೈಕ್ ಸವಾರರು ಇಲ್ಲಿ ಬಿದ್ದು ಗಾಯಗೊಂಡಿದ್ದಾರೆ. ಈ ಮಾರ್ಗದಲ್ಲಿ ನಡೆದುಕೊಂಡು ಹೋಗುವವರು ಮೂಗಿ ಮುಚ್ಚಿಕೊಂಡು ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ’ ಎನ್ನುತ್ತಾರೆ ಸಾರ್ವಜನಿಕರು.</p>.<div><blockquote>ಕಾಂಗ್ರೆಸ್ ರಸ್ತೆ ಹದಗೆಟ್ಟಿರುವುದರಿಂದ ಜನರಿಗೆ ತುಂಬಾ ತೊಂದರೆ ಆಗಿದೆ. ಸ್ಥಳೀಯ ನಿವಾಸಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ </blockquote><span class="attribution">ವಿಶ್ವನಾಥ ಕುಲಕರ್ಣಿ ಸ್ಥಳೀಯ ನಿವಾಸಿ ವಿಜಯಪುರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>