ಫೋಟೋ:28-ಎಂ.ಬಿ.ಎಲ್01ಎ ಮುದ್ದೇಬಿಹಾಳ ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಣಜಿಗ ಸಮಾಜದ ಕಾರ್ಯಕ್ರಮದಲ್ಲಿ ಶಾಸಕ ಸಿ.ಎಸ್.ನಾಡಗೌಡ ಮಾತನಾಡಿದರು.ಮಾಜಿ ಸಿಎಂ ಜಗದೀಶ ಶೆಟ್ಟರ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಇದ್ದರು.
‘ಸಮಾಜದವರ ಸ್ವಾಭಿಮಾನಕ್ಕೆ ಧಕ್ಕೆ ತಂದವರು ಯಾರೇ ಇದ್ದರೂ ಅವರ ನಡೆಯನ್ನು ಖಂಡಿಸುತ್ತೇನೆ. ಸಮಾಜದಲ್ಲಿನ ಉಳ್ಳವರು ಬಡವರಿಗೆ ನೆರವಾಗಬೇಕು
ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾಜಿ ಸಚಿವ
ಧರ್ಮ ಕಾಲಂ
ಭಿನ್ನ ಹೇಳಿಕೆ ಸಂಸದ ಜಗದೀಶ ಶೆಟ್ಟರ್ ಅವರು ಮಾತನಾಡುವಾಗ ‘ವೀರಶೈವ ಲಿಂಗಾಯತ ಸಮಾಜಕ್ಕೆ ಅಧಿಕೃತವಾಗಿ ಧರ್ಮದ ಮಾನ್ಯತೆ ಇನ್ನೂ ದೊರಕಿಲ್ಲ. ಹಾಗಾಗಿ ಸಮಾಜದವರು ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ಬರೆಯಿಸಬೇಕು’ ಎಂದರು. ಅದಕ್ಕೆ ಅಪ್ಪು ಪಟ್ಟಣಶೆಟ್ಟಿ ನಡಹಳ್ಳಿ ಸಮ್ಮತಿಸಿದರು. ಆದರೆ ಶಾಸಕ ಸಿ.ಎಸ್. ನಾಡಗೌಡ ಮಾತನಾಡುವಾಗ ‘ನಮ್ಮ ದಾಖಲೆಗಳಲ್ಲಿ ಲಿಂಗಾಯತ ಧರ್ಮ ಎಂದೇ ಇದೆ. ನಾವೆಲ್ಲ ಬಸವಣ್ಣನವರ ಅನುಯಾಯಿಗಳಾಗಿರುವ ಕಾರಣ ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದೇ ಬರೆಯಿಸಬೇಕು’ ಎಂದರು.