<p><strong>ಮುದ್ದೇಬಿಹಾಳ</strong>: ದಿ ಕರ್ನಾಟಕ ಕೋ–ಆಪ್ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬ್ಯಾಂಕಿನ ನೇಮಕಾತಿ ಸಮಿತಿ ಮತ್ತು ಪ್ರಧಾನ ವ್ಯವಸ್ಥಾಪಕರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕನಗೌಡ ಪಾಟೀಲ ಅವರು ಮಂಗಳವಾರ ಮನವಿ ಸಲ್ಲಿಸಿದರು.</p>.<p>‘2025ರ ನವೆಂಬರ್ 30ರಂದು ನಡೆದಿದ್ದ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಈಚೆಗೆ ಪ್ರಕಟಿಸಲಾಗಿದೆ. ಫಲಿತಾಂಶವು ಪಾರದರ್ಶಕವಾಗಿ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಪರೀಕ್ಷೆ ಬರೆದ ನಾಲ್ಕು ಅಭ್ಯರ್ಥಿಗಳು ಮಾತ್ರ ಕ್ರಮವಾಗಿ 164, 165, 166, 167 ಅಂಕ ಪಡೆದಿರುವುದು ಸಂಶಯಕ್ಕೆ ಕಾರಣವಾಗಿದೆ’ ಎಂದರು.</p>.<p>‘ಉದ್ದೇಶಪೂರ್ವಕವಾಗಿ ತಮಗೆ ಬೇಕಾದವರಿಗೆ ನಕಲು ಮಾಡಿಸಿ, ಆಯ್ಕೆ ಮಾಡಿರುವ ಶಂಕೆ ಇದೆ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಪರೀಕ್ಷೆ ಸಂದರ್ಭದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಪರಿಶೀಲಿಸಬೇಕು. ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.</p>.<p>‘ಈ ಕುರಿತು ಬೆಂಗಳೂರಿನ ಸಿ.ಎಂ.ಆರ್. ವಿಶ್ವವಿದ್ಯಾಲಯದ ಕುಲಸಚಿವರು, ಸಿಬ್ಬಂದಿ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ, ಸಹಕಾರ ಸಂಘಗಳ ಇಲಾಖೆಯ ಜಿಲ್ಲಾ ರಿಜಿಸ್ಟ್ರಾರ್, ಜಂಟಿ ನಿರ್ದೇಶಕರಿಗೂ ಮನವಿ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ</strong>: ದಿ ಕರ್ನಾಟಕ ಕೋ–ಆಪ್ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬ್ಯಾಂಕಿನ ನೇಮಕಾತಿ ಸಮಿತಿ ಮತ್ತು ಪ್ರಧಾನ ವ್ಯವಸ್ಥಾಪಕರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕನಗೌಡ ಪಾಟೀಲ ಅವರು ಮಂಗಳವಾರ ಮನವಿ ಸಲ್ಲಿಸಿದರು.</p>.<p>‘2025ರ ನವೆಂಬರ್ 30ರಂದು ನಡೆದಿದ್ದ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಈಚೆಗೆ ಪ್ರಕಟಿಸಲಾಗಿದೆ. ಫಲಿತಾಂಶವು ಪಾರದರ್ಶಕವಾಗಿ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಪರೀಕ್ಷೆ ಬರೆದ ನಾಲ್ಕು ಅಭ್ಯರ್ಥಿಗಳು ಮಾತ್ರ ಕ್ರಮವಾಗಿ 164, 165, 166, 167 ಅಂಕ ಪಡೆದಿರುವುದು ಸಂಶಯಕ್ಕೆ ಕಾರಣವಾಗಿದೆ’ ಎಂದರು.</p>.<p>‘ಉದ್ದೇಶಪೂರ್ವಕವಾಗಿ ತಮಗೆ ಬೇಕಾದವರಿಗೆ ನಕಲು ಮಾಡಿಸಿ, ಆಯ್ಕೆ ಮಾಡಿರುವ ಶಂಕೆ ಇದೆ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಪರೀಕ್ಷೆ ಸಂದರ್ಭದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಪರಿಶೀಲಿಸಬೇಕು. ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.</p>.<p>‘ಈ ಕುರಿತು ಬೆಂಗಳೂರಿನ ಸಿ.ಎಂ.ಆರ್. ವಿಶ್ವವಿದ್ಯಾಲಯದ ಕುಲಸಚಿವರು, ಸಿಬ್ಬಂದಿ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ, ಸಹಕಾರ ಸಂಘಗಳ ಇಲಾಖೆಯ ಜಿಲ್ಲಾ ರಿಜಿಸ್ಟ್ರಾರ್, ಜಂಟಿ ನಿರ್ದೇಶಕರಿಗೂ ಮನವಿ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>