<p><strong>ನಾಲತವಾಡ (ವಿಜಯಪುರ)</strong>: ‘ಮೀಸಲಾತಿ ಕೊಡುವುದಾಗಿ ಮಾತು ಕೊಟ್ಟು ತಪ್ಪಿದ್ದಕ್ಕೆ ಯಡಿಯೂರಪ್ಪ ಅಧಿಕಾರ ಕಳೆದುಕೊಂಡ. ಇನ್ನು ನಮಗೆ 2ಎ ಮೀಸಲಾತಿ ನೀಡದಿದ್ದರೆ ಬೊಮ್ಮಾಯಿ ಸರ್ಕಾರಕ್ಕೂ ಶಾಕ್ ಗ್ಯಾರಂಟಿ’ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ಪಟ್ಟಣದ ಎಪಿಎಂಸಿ ಆವರಣದಲ್ಲಿ ಕಿತ್ತೂರ ಚನ್ನಮ್ಮ ಸಾಮಾಜಿಕ ಸೇವಾ ಸಂಘದಡಿ ಗುರುವಾರ ಹಮ್ಮಿಕೊಂಡಿದ್ದ ಕಿತ್ತೂರ ಚನ್ನಮ್ಮನ 243ನೇ ಜಯಂತಿ ಹಾಗೂ 198ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಬೇಡಿಕೆಗೆ ಅನುಗುಣವಾಗಿ ಮೀಸಲಾತಿ ನೀಡದವರು ಮಣ್ಣು ಮುಕ್ಕಿದ್ದಾರೆ. ಬೊಮ್ಮಾಯಿ ಸಹ 3 ತಿಂಗಳಲ್ಲಿ ಮೀಸಲಾತಿ ಘೋಷಿಸುವ ಭರವಸೆ ನೀಡಿದ್ದಾರೆ. ಕಾದು ನೋಡೋಣ’ ಎಂದು ಹೇಳಿದರು.</p>.<p>ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿ, ‘ಮುಖ್ಯಮಂತ್ರಿ ಬೊಮ್ಮಾಯಿ ನಮ್ಮ ಸಮಾಜಕ್ಕೆ ಯಾವ ಕೊಡುಗೆ ಕೊಡುತ್ತಾರೋ ನೋಡೋಣ. ಇವರೂ ಭರವಸೆಯಲ್ಲೇ ಕಾಲ ಕಳೆದರೆ ಅಧಿಕಾರದಿಂದ ಕೆಳಗೆ ಇಳಿಸಿ ಬಿಡೋಣ’ ಎಂದರು.</p>.<p>ಕೂಡಲಸಂಗಮ ಬಸವಜಯ ಮೃತ್ಯುಂಜಯ ಶ್ರೀಗಳು ಆಶೀರ್ವಚನ ನೀಡಿ, ‘ಮೀಸಲಾತಿ ಸಿಗುವವರೆಗೂ ಹೋರಾಟ ಕೈ ಬಿಡುವ ಪ್ರಶ್ನೆಯೇ ಇಲ್ಲ. ಈ ಬಾರೀ ಸುಮಾರು 20 ಲಕ್ಷ ಮಂದಿಯನ್ನು ಸೇರಿಸಿ ಹೋರಾಟ ಮಾಡುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಲತವಾಡ (ವಿಜಯಪುರ)</strong>: ‘ಮೀಸಲಾತಿ ಕೊಡುವುದಾಗಿ ಮಾತು ಕೊಟ್ಟು ತಪ್ಪಿದ್ದಕ್ಕೆ ಯಡಿಯೂರಪ್ಪ ಅಧಿಕಾರ ಕಳೆದುಕೊಂಡ. ಇನ್ನು ನಮಗೆ 2ಎ ಮೀಸಲಾತಿ ನೀಡದಿದ್ದರೆ ಬೊಮ್ಮಾಯಿ ಸರ್ಕಾರಕ್ಕೂ ಶಾಕ್ ಗ್ಯಾರಂಟಿ’ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ಪಟ್ಟಣದ ಎಪಿಎಂಸಿ ಆವರಣದಲ್ಲಿ ಕಿತ್ತೂರ ಚನ್ನಮ್ಮ ಸಾಮಾಜಿಕ ಸೇವಾ ಸಂಘದಡಿ ಗುರುವಾರ ಹಮ್ಮಿಕೊಂಡಿದ್ದ ಕಿತ್ತೂರ ಚನ್ನಮ್ಮನ 243ನೇ ಜಯಂತಿ ಹಾಗೂ 198ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಬೇಡಿಕೆಗೆ ಅನುಗುಣವಾಗಿ ಮೀಸಲಾತಿ ನೀಡದವರು ಮಣ್ಣು ಮುಕ್ಕಿದ್ದಾರೆ. ಬೊಮ್ಮಾಯಿ ಸಹ 3 ತಿಂಗಳಲ್ಲಿ ಮೀಸಲಾತಿ ಘೋಷಿಸುವ ಭರವಸೆ ನೀಡಿದ್ದಾರೆ. ಕಾದು ನೋಡೋಣ’ ಎಂದು ಹೇಳಿದರು.</p>.<p>ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿ, ‘ಮುಖ್ಯಮಂತ್ರಿ ಬೊಮ್ಮಾಯಿ ನಮ್ಮ ಸಮಾಜಕ್ಕೆ ಯಾವ ಕೊಡುಗೆ ಕೊಡುತ್ತಾರೋ ನೋಡೋಣ. ಇವರೂ ಭರವಸೆಯಲ್ಲೇ ಕಾಲ ಕಳೆದರೆ ಅಧಿಕಾರದಿಂದ ಕೆಳಗೆ ಇಳಿಸಿ ಬಿಡೋಣ’ ಎಂದರು.</p>.<p>ಕೂಡಲಸಂಗಮ ಬಸವಜಯ ಮೃತ್ಯುಂಜಯ ಶ್ರೀಗಳು ಆಶೀರ್ವಚನ ನೀಡಿ, ‘ಮೀಸಲಾತಿ ಸಿಗುವವರೆಗೂ ಹೋರಾಟ ಕೈ ಬಿಡುವ ಪ್ರಶ್ನೆಯೇ ಇಲ್ಲ. ಈ ಬಾರೀ ಸುಮಾರು 20 ಲಕ್ಷ ಮಂದಿಯನ್ನು ಸೇರಿಸಿ ಹೋರಾಟ ಮಾಡುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>