ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ವಿದೇಶ ಪ್ರವಾಸದ ಬಳಿಕ ಮುಖ್ಯಮಂತ್ರಿ ಬದಲಾವಣೆ: ಯತ್ನಾಳ

Last Updated 3 ಮೇ 2022, 14:51 IST
ಅಕ್ಷರ ಗಾತ್ರ

ವಿಜಯಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಥವಾ ಸಚಿವ ಸಂಪುಟ ಪುನರ್‌ ರಚನೆ ತೀರ್ಮಾನವು ಪ್ರಧಾನಿ ನರೇಂದ್ರ ಮೋದಿ ಅವರುವಿದೇಶ ಪ್ರವಾಸದಿಂದ ವಾಪಸ್ಸಾದ ಬಳಿಕಆಗಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೇ 10ರೊಳಗೆ ರಾಜ್ಯದ ವಿದ್ಯಾಮಾನಗಳ ಬಗ್ಗೆ ಸ್ಪಷ್ಟ ಚಿತ್ರಣ ಲಭಿಸಲಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಏನೆಲ್ಲ ಬದಲಾವಣೆ ಮಾಡಬೇಕು ಎಂಬುದರ ಕುರಿತುಈಗಾಗಲೇ ಎಲ್ಲ ಮಾಹಿತಿ ಸಂಗ್ರಹಿಸಲಾಗಿದೆ. ದೆಹಲಿಯಲ್ಲಿ ಒಂದು ಉನ್ನತ ಮಟ್ಟದ ಸಭೆ ಆಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್ ಕರ್ನಾಟಕಕ್ಕೆ ಬಂದಿದ್ದಾರೆ.ಶೀಘ್ರದಲ್ಲೇಒಳ್ಳೆಯ ನಿರ್ಣಯ ಮಾಡಲಿದ್ದಾರೆ ಎಂದರು.

ಸಾಮೂಹಿಕ ನಾಯಕತ್ವ:ಮುಂಬರುವ ವಿಧಾನ ಸಭೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲು ಪಕ್ಷದ ವರಿಷ್ಠರು ಈಗಾಗಲೇ ಸೂಚನೆ ನೀಡಿದ್ದಾರೆ. ಎಲ್ಲರೂ ಕೂಡಿಯೇ 150 ಸೀಟು ಗೆಲ್ಲಿಸಲು ತಿಳಿಸಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT