<p><strong>ವಿಜಯಪುರ:</strong> ನಗರಕ್ಕೆ 3ನೇ ಹಂತದ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಬರುವ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದರು.</p>.<p>ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘ಮಹಾನಗರ ಪಾಲಿಕೆ ವ್ಯಾಪ್ತಿ ವಿಸ್ತರಣೆಗೊಂಡಿದ್ದು, ಎಲ್ಲ ಭಾಗಕ್ಕೂ ನಿರಂತರ ಮತ್ತು ಸಮಪರ್ಕವಾಗಿ ನೀರು ಒದಗಿಸಲು 3ನೇ ಹಂತದ ಯೋಜನೆ ಅನುಷ್ಠಾನ ಅಗತ್ಯವಿದೆ’ ಎಂದರು.</p>.<p>‘ಶುದ್ಧ ಗಾಳಿ, ಅಭಿವೃದ್ಧಿ, ಗಟ್ಟಿತನ ಹೀಗೆ ಎಲ್ಲದರಲ್ಲೂ ವಿಜಯಪುರ ನಗರ ದೇಶದಲ್ಲಿ ಹೆಸರುವಾಸಿ ಆಗಿದೆ. ಮಾದರಿ ನಗರವಾಗಿ ರೂಪಗೊಂಡಿದೆ’ ಎಂದು ಹೇಳಿದರು.</p>.<p>‘₹3.25 ಕೋಟಿ ಮೊತ್ತದಲ್ಲಿ ವಾರ್ಡ್ ನಂ.22ರಲ್ಲಿ ಬರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಿಂದ ದೇವರಾಜ ಅರಸು ವೃತ್ತದ ವರೆಗೆ (ಜಲನಗರ ಮುಖ್ಯರಸ್ತೆ) ಸಿಸಿ ರಸ್ತೆ ಅಭಿವೃದ್ಧಿ, ₹20 ಲಕ್ಷ ಮೊತ್ತದಲ್ಲಿ ರಾಷ್ಟ್ರವೀರ ಶ್ರೀ ವೀರಮಹಾರಾಣ ಪ್ರತಾಪ್ ಸಿಂಹ ವೃತ್ತದ ಸುತ್ತ ಆವರಣ ಗೋಡೆ, ಕಾಬಲ್ ಪೇವಿಂಗ್ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಲಾಗಿದೆ’ ಎಂದರು.</p>.<p>‘₹1.50 ಕೋಟಿ ಮೊತ್ತದಲ್ಲಿ ವಾರ್ಡ್ ನಂ.21ರಲ್ಲಿ ಬರುವ ಸದಾಶಿವ ನಗರ ಮುಖ್ಯ ರಸ್ತೆಯಿಂದ ಈಶ್ವರ ದೇವಸ್ಥಾನದ ಮೂಲಕ ಏಳು ಮಕ್ಕಳ ತಾಯಿ ಗುಡಿವರೆಗಿನ ಪ್ರಮುಖ ಸಿಸಿ ರಸ್ತೆ ಹಾಗೂ ರೇಣುಕಾ ನಗರ ಆಂತರಿಕ ಸಿಸಿ ರಸ್ತೆ ನಿರ್ಮಾಣ, ₹1.50 ಕೋಟಿ ಮೊತ್ತದಲ್ಲಿ ಗುರುದೇವ ನಗರ ಪಶ್ಚಿಮ ಭಾಗ ಹಾಗೂ ಗುರುದೇವ ನಗರ ಪೂರ್ವ ಭಾಗದ ಒಳ ರಸ್ತೆಗಳ ಡಾಂಬರೀಕರಣ ಕಾಮಗಾರಿ, ₹2 ಕೋಟಿ ಮೊತ್ತದಲ್ಲಿ ಸಾಯಿಪಾರ್ಕ್ ಮುಖ ರಸ್ತೆಯಿಂದ ಗುರುದೇವ ನಗರದ ಮೂಲಕ ಕೊಲ್ಹಾರ ರಸ್ತೆ ಕೂಡುವ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ’ ಎಂದು ತಿಳಿಸಿದರು.</p>.<p>ಮಹಾನಗರ ಪಾಲಿಕೆ ಮೇಯರ್ ಎಂ.ಎಸ್. ಕರಡಿ, ಸದಸ್ಯರಾದ ಪ್ರೇಮಾನಂದ ಬಿರಾದಾರ, ಕುಮಾರ ಗಡಗಿ, ಗಿರೀಶ ಬಿರಾದಾರ, ಮುಖಂಡರಾದ ಶಂಕರ ಹೂಗಾರ, ಚಂದ್ರಶೇಖರ ಚೌದರಿ, ಮಡಿವಾಳ ಯಾಳವಾರ, ಸಂತೋಷ ತಲಕೇರಿ, ರಾಜಶೇಖರ ಭಜಂತ್ರಿ ಇದ್ದರು.</p>.<div><blockquote>ಧೂಳಾಪುರವಾಗಿದ್ದ ವಿಜಯಪುರ ನಗರದಲ್ಲಿ ನಿರೀಕ್ಷೆ ಮೀರಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದ ಮಾದರಿ ನಗರವಾಗಿ ನಿರ್ಮಾಣಗೊಂಡಿದೆ </blockquote><span class="attribution">ಬಸನಗೌಡ ಪಾಟೀಲ ಯತ್ನಾಳ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ನಗರಕ್ಕೆ 3ನೇ ಹಂತದ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಬರುವ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದರು.</p>.<p>ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘ಮಹಾನಗರ ಪಾಲಿಕೆ ವ್ಯಾಪ್ತಿ ವಿಸ್ತರಣೆಗೊಂಡಿದ್ದು, ಎಲ್ಲ ಭಾಗಕ್ಕೂ ನಿರಂತರ ಮತ್ತು ಸಮಪರ್ಕವಾಗಿ ನೀರು ಒದಗಿಸಲು 3ನೇ ಹಂತದ ಯೋಜನೆ ಅನುಷ್ಠಾನ ಅಗತ್ಯವಿದೆ’ ಎಂದರು.</p>.<p>‘ಶುದ್ಧ ಗಾಳಿ, ಅಭಿವೃದ್ಧಿ, ಗಟ್ಟಿತನ ಹೀಗೆ ಎಲ್ಲದರಲ್ಲೂ ವಿಜಯಪುರ ನಗರ ದೇಶದಲ್ಲಿ ಹೆಸರುವಾಸಿ ಆಗಿದೆ. ಮಾದರಿ ನಗರವಾಗಿ ರೂಪಗೊಂಡಿದೆ’ ಎಂದು ಹೇಳಿದರು.</p>.<p>‘₹3.25 ಕೋಟಿ ಮೊತ್ತದಲ್ಲಿ ವಾರ್ಡ್ ನಂ.22ರಲ್ಲಿ ಬರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಿಂದ ದೇವರಾಜ ಅರಸು ವೃತ್ತದ ವರೆಗೆ (ಜಲನಗರ ಮುಖ್ಯರಸ್ತೆ) ಸಿಸಿ ರಸ್ತೆ ಅಭಿವೃದ್ಧಿ, ₹20 ಲಕ್ಷ ಮೊತ್ತದಲ್ಲಿ ರಾಷ್ಟ್ರವೀರ ಶ್ರೀ ವೀರಮಹಾರಾಣ ಪ್ರತಾಪ್ ಸಿಂಹ ವೃತ್ತದ ಸುತ್ತ ಆವರಣ ಗೋಡೆ, ಕಾಬಲ್ ಪೇವಿಂಗ್ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಲಾಗಿದೆ’ ಎಂದರು.</p>.<p>‘₹1.50 ಕೋಟಿ ಮೊತ್ತದಲ್ಲಿ ವಾರ್ಡ್ ನಂ.21ರಲ್ಲಿ ಬರುವ ಸದಾಶಿವ ನಗರ ಮುಖ್ಯ ರಸ್ತೆಯಿಂದ ಈಶ್ವರ ದೇವಸ್ಥಾನದ ಮೂಲಕ ಏಳು ಮಕ್ಕಳ ತಾಯಿ ಗುಡಿವರೆಗಿನ ಪ್ರಮುಖ ಸಿಸಿ ರಸ್ತೆ ಹಾಗೂ ರೇಣುಕಾ ನಗರ ಆಂತರಿಕ ಸಿಸಿ ರಸ್ತೆ ನಿರ್ಮಾಣ, ₹1.50 ಕೋಟಿ ಮೊತ್ತದಲ್ಲಿ ಗುರುದೇವ ನಗರ ಪಶ್ಚಿಮ ಭಾಗ ಹಾಗೂ ಗುರುದೇವ ನಗರ ಪೂರ್ವ ಭಾಗದ ಒಳ ರಸ್ತೆಗಳ ಡಾಂಬರೀಕರಣ ಕಾಮಗಾರಿ, ₹2 ಕೋಟಿ ಮೊತ್ತದಲ್ಲಿ ಸಾಯಿಪಾರ್ಕ್ ಮುಖ ರಸ್ತೆಯಿಂದ ಗುರುದೇವ ನಗರದ ಮೂಲಕ ಕೊಲ್ಹಾರ ರಸ್ತೆ ಕೂಡುವ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ’ ಎಂದು ತಿಳಿಸಿದರು.</p>.<p>ಮಹಾನಗರ ಪಾಲಿಕೆ ಮೇಯರ್ ಎಂ.ಎಸ್. ಕರಡಿ, ಸದಸ್ಯರಾದ ಪ್ರೇಮಾನಂದ ಬಿರಾದಾರ, ಕುಮಾರ ಗಡಗಿ, ಗಿರೀಶ ಬಿರಾದಾರ, ಮುಖಂಡರಾದ ಶಂಕರ ಹೂಗಾರ, ಚಂದ್ರಶೇಖರ ಚೌದರಿ, ಮಡಿವಾಳ ಯಾಳವಾರ, ಸಂತೋಷ ತಲಕೇರಿ, ರಾಜಶೇಖರ ಭಜಂತ್ರಿ ಇದ್ದರು.</p>.<div><blockquote>ಧೂಳಾಪುರವಾಗಿದ್ದ ವಿಜಯಪುರ ನಗರದಲ್ಲಿ ನಿರೀಕ್ಷೆ ಮೀರಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದ ಮಾದರಿ ನಗರವಾಗಿ ನಿರ್ಮಾಣಗೊಂಡಿದೆ </blockquote><span class="attribution">ಬಸನಗೌಡ ಪಾಟೀಲ ಯತ್ನಾಳ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>