<p><strong>ವಿಜಯಪುರ</strong>: ಬಸವಾದಿ ಪ್ರಮಥರ ವಚನಗಳು ನಮ್ಮೆಲ್ಲರ ಬದುಕಿಗೆ ದಾರಿದೀಪಗಳಾಗಿವೆ. ಬಸವ ಧರ್ಮ ವಿಶ್ವ ಧರ್ಮವಾಗಬೇಕು ಎಂದು ಶ್ರೀ ಶಾಂತವೀರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ ಎಂ.ಬಿ.ರೆಬಿನಾಳ ಹೇಳಿದರು.</p>.<p>ನಗರದ ಬಿ.ಎಲ್.ಡಿ.ಇ ಸಂಸ್ಥೆಯ, ಜೆ.ಎಸ್.ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿ. ಧರೆಪ್ಪ ಮತ್ತು ಬಸಮ್ಮ ಐಹೊಳ್ಳಿ ದಂಪತಿ ಸ್ಮಾರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸಾಂಸ್ಕೃತಿಕ ನಾಯಕ ಬಸವಣ್ಣ ಎಂದೆಂದಿಗೂ ಪ್ರಸ್ತುತ. ದಾನ, ದಾಸೋಹ, ಧರ್ಮ, ಪೂಜೆ ಇವೆಲ್ಲ ತೋರಿಕೆ ಮತ್ತು ಡಾಂಬಿಕತೆಯಿಂದ ಕೂಡಿರಬಾರದು ಎಂದರು.</p>.<p>ಬಿ.ಎಲ್.ಡಿ.ಇ. ಸಂಸ್ಥೆ, ಎಸ್. ಎಸ್. ಆವರಣದ ಆಡಳಿತಾಧಿಕಾರಿ ಪ್ರೊ ಐ.ಎಸ್. ಕಾಳಪ್ಪನವರ ಮಾತನಾಡಿ, ಹಿರಿಯರ ಮೌಲ್ಯಗಳ ಸ್ಮರಣೆಗಾಗಿ ನಡೆಸಿದ ಈ ದತ್ತಿ ಉಪನ್ಯಾಸ ಕಾರ್ಯಕ್ರಮವು ಬಹಳಷ್ಟು ಅರ್ಥಪೂರ್ಣವಾಗಿದೆ. ಈ ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಭಾರತಿ. ವೈ. ಖಾಸನೀಸ ಅವರು ದಾನ, ಧರ್ಮಕ್ಕೆ ಮಾದರಿಯಾಗಿದ್ದಾರೆ. ಇವರು ಎಸ್. ಎಸ್. ಆವರಣದ ವಿವಿಧ ಶಾಲೆಗಳಿಗೆ ದಾನ-ದತ್ತಿಗಳನ್ನು ನೀಡಿದ್ದಾರೆ. ಮಹಾವಿದ್ಯಾಲಯದ ಆವರಣದಲ್ಲಿ ಸರಸ್ವತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ. ಸಂಸ್ಥೆಯ ಸಮನ್ವಯ ಶಾಲೆಗೆ ಪೆನಲ್ ಬೋರ್ಡ್ನ್ನು ಕಾಣಿಕೆಯಾಗಿ ನೀಡಿದ್ದಾರೆ ಎಂದು ಶ್ಲಾಘಿಸಿದರು.</p>.<p>ಈ ಸಂದರ್ಭದಲ್ಲಿ ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿ ವಿ.ಡಿ. ಐಹೊಳ್ಳಿ, ಪಟವರ್ಧನ, ಸಹ ಪ್ರಾಧ್ಯಾಪಕರಾದ ಎಂ.ಬಿ. ಕೋರಿ, ಜೆ.ಎಸ್.ಪಟ್ಟಣಶೆಟ್ಟಿ, ಬಿ.ಎಸ್.ಹಿರೇಮಠ, ಎಸ್.ಎಸ್.ಪಾಟೀಲ, ಪಿ.ಡಿ.ಮುಲ್ತಾನಿ, ಎಸ್.ಪಿ.ಶೇಗುಣಸಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಬಸವಾದಿ ಪ್ರಮಥರ ವಚನಗಳು ನಮ್ಮೆಲ್ಲರ ಬದುಕಿಗೆ ದಾರಿದೀಪಗಳಾಗಿವೆ. ಬಸವ ಧರ್ಮ ವಿಶ್ವ ಧರ್ಮವಾಗಬೇಕು ಎಂದು ಶ್ರೀ ಶಾಂತವೀರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ ಎಂ.ಬಿ.ರೆಬಿನಾಳ ಹೇಳಿದರು.</p>.<p>ನಗರದ ಬಿ.ಎಲ್.ಡಿ.ಇ ಸಂಸ್ಥೆಯ, ಜೆ.ಎಸ್.ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿ. ಧರೆಪ್ಪ ಮತ್ತು ಬಸಮ್ಮ ಐಹೊಳ್ಳಿ ದಂಪತಿ ಸ್ಮಾರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸಾಂಸ್ಕೃತಿಕ ನಾಯಕ ಬಸವಣ್ಣ ಎಂದೆಂದಿಗೂ ಪ್ರಸ್ತುತ. ದಾನ, ದಾಸೋಹ, ಧರ್ಮ, ಪೂಜೆ ಇವೆಲ್ಲ ತೋರಿಕೆ ಮತ್ತು ಡಾಂಬಿಕತೆಯಿಂದ ಕೂಡಿರಬಾರದು ಎಂದರು.</p>.<p>ಬಿ.ಎಲ್.ಡಿ.ಇ. ಸಂಸ್ಥೆ, ಎಸ್. ಎಸ್. ಆವರಣದ ಆಡಳಿತಾಧಿಕಾರಿ ಪ್ರೊ ಐ.ಎಸ್. ಕಾಳಪ್ಪನವರ ಮಾತನಾಡಿ, ಹಿರಿಯರ ಮೌಲ್ಯಗಳ ಸ್ಮರಣೆಗಾಗಿ ನಡೆಸಿದ ಈ ದತ್ತಿ ಉಪನ್ಯಾಸ ಕಾರ್ಯಕ್ರಮವು ಬಹಳಷ್ಟು ಅರ್ಥಪೂರ್ಣವಾಗಿದೆ. ಈ ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಭಾರತಿ. ವೈ. ಖಾಸನೀಸ ಅವರು ದಾನ, ಧರ್ಮಕ್ಕೆ ಮಾದರಿಯಾಗಿದ್ದಾರೆ. ಇವರು ಎಸ್. ಎಸ್. ಆವರಣದ ವಿವಿಧ ಶಾಲೆಗಳಿಗೆ ದಾನ-ದತ್ತಿಗಳನ್ನು ನೀಡಿದ್ದಾರೆ. ಮಹಾವಿದ್ಯಾಲಯದ ಆವರಣದಲ್ಲಿ ಸರಸ್ವತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ. ಸಂಸ್ಥೆಯ ಸಮನ್ವಯ ಶಾಲೆಗೆ ಪೆನಲ್ ಬೋರ್ಡ್ನ್ನು ಕಾಣಿಕೆಯಾಗಿ ನೀಡಿದ್ದಾರೆ ಎಂದು ಶ್ಲಾಘಿಸಿದರು.</p>.<p>ಈ ಸಂದರ್ಭದಲ್ಲಿ ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿ ವಿ.ಡಿ. ಐಹೊಳ್ಳಿ, ಪಟವರ್ಧನ, ಸಹ ಪ್ರಾಧ್ಯಾಪಕರಾದ ಎಂ.ಬಿ. ಕೋರಿ, ಜೆ.ಎಸ್.ಪಟ್ಟಣಶೆಟ್ಟಿ, ಬಿ.ಎಸ್.ಹಿರೇಮಠ, ಎಸ್.ಎಸ್.ಪಾಟೀಲ, ಪಿ.ಡಿ.ಮುಲ್ತಾನಿ, ಎಸ್.ಪಿ.ಶೇಗುಣಸಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>