ಕುಡಿಯುವ ನೀರಿನ ತಾಪತ್ರಯ, ಜಾನುವಾರುಗಳಿಗೆ ನೀರು ಇಲ್ಲದಂತಾಗಿದೆ. ಗ್ರಾಮದಿಂದ ಎರಡು ಕಿ.ಲೋ ಮೀಟರ್ ಅಂತರದಲ್ಲಿರುವ ಈ ಕಾಲುವೆಯಿಂದ ಗ್ರಾಮದ ಬಾಂದಾರಕ್ಕೆ ನೀರು ಬಿಟ್ಟರೆ ಗ್ರಾಮದಲ್ಲಿ ಅಂತರ್ಜಲ ವೃದ್ಧಿಯಾಗುತ್ತದೆ. ಕಾಲುವೆಯಿಂದ ನೀರು ಬಿಡಬೇಕೆಂದು ಆಗ್ರಹಿಸಿ ಪಟ್ಟಣದ ರಾಜ್ಯ ಬಿಜ್ಜಳ ಹೆದ್ದಾರಿಯಲ್ಲಿ ಗ್ರಾಮಸ್ಥರು ಶನಿವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ್ದರು. ಈ ಕಾಲುವೆಯಿಂದ 10 ಇಂಚು ಪೈಪ್ ಮೂಲಕ ನೀರು ಬಿಡುವ ಬಗ್ಗೆ ಅಧಿಕಾರಿಗಳು ಭರವಸೆ ನೀಡಿದ್ದರಿಂದ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದುಕೊಂಡಿದ್ದರು.