<p>ಬಸವನಬಾಗೇವಾಡಿ: ಸನ್ಯಾಸಿಗಳಿಗಷ್ಟೇ ಅಲ್ಲ. ಪ್ರತಿ ಮನುಷ್ಯನಿಗೂ ತಪಸ್ಸು ಮಾಡುವ ಶಕ್ತಿ ಇರುತ್ತದೆ. ಗುರುದೀಕ್ಷೆ ಪಡೆದು ಗುರು ಮಾರ್ಗದಲ್ಲಿ ಸಾಗಿದರೆ ಸಾಧನೆ ಎಂಬ ಶಿಖರವೇರಲು ಸಾಧ್ಯ ಎಂದು ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಹಿರೇಮಠದ ಲಿಂ. ಬಸವ ಶಿವಾಚಾರ್ಯ ಸ್ವಾಮೀಜಿ ಜನ್ಮ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಅಡ್ಡಪಲ್ಲಕ್ಕಿ ಉತ್ಸವ, ಶರಣಬಸವೇಶ್ವರ ಪುರಾಣ ಮಹಾಮಂಗಳೋತ್ಸವ ಹಾಗೂ ಧರ್ಮಸಭೆಯಲ್ಲಿ ಮಾತನಾಡಿದರು.</p>.<p>ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ ಮನಗೂಳಿ ಮಾತನಾಡಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಾಶಿ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ ನಡೆಯಿತು.</p>.<p>ಕೆರೂರ ಚರಂತಿಮಠದ ಶಿವಕುಮಾರ ಶಿವಾಚಾರ್ಯರು, ಬೆಂಗಳೂರು ವಿಭೂತಿಪುರ ಮಠದ ಮಹಾಂತಲಿಂಗ ಶಿವಾಚಾರ್ಯರು ಮಾತನಾಡಿದರು. ಕೊಟ್ಟೂರು-ಡೋಣೂರು ಹಿರೇಮಠದ ಸಿದ್ಥಲಿಂಗ ಶಿವಾಚಾರ್ಯರು, ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯರು, ಕರಭಂಟನಾಳದ ಶಿವಕುಮಾರ ಶ್ರೀಗಳು, ಜಿ.ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಗುರಪ್ಪ ಬೆವೂರ, ವೀರಣ್ಣ ಸಜ್ಜನ, ಸಂಗನಬಸು ಬಾಗೇವಾಡಿ, ಕೈಲಾಸ ಬಾಗೇವಾಡಿ ,ಜಗದೀಶ ಬೇವೂರ, ಶ್ರೀಶೈಲ ಚಾಂದಕವಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-26-918681120</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವನಬಾಗೇವಾಡಿ: ಸನ್ಯಾಸಿಗಳಿಗಷ್ಟೇ ಅಲ್ಲ. ಪ್ರತಿ ಮನುಷ್ಯನಿಗೂ ತಪಸ್ಸು ಮಾಡುವ ಶಕ್ತಿ ಇರುತ್ತದೆ. ಗುರುದೀಕ್ಷೆ ಪಡೆದು ಗುರು ಮಾರ್ಗದಲ್ಲಿ ಸಾಗಿದರೆ ಸಾಧನೆ ಎಂಬ ಶಿಖರವೇರಲು ಸಾಧ್ಯ ಎಂದು ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಹಿರೇಮಠದ ಲಿಂ. ಬಸವ ಶಿವಾಚಾರ್ಯ ಸ್ವಾಮೀಜಿ ಜನ್ಮ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಅಡ್ಡಪಲ್ಲಕ್ಕಿ ಉತ್ಸವ, ಶರಣಬಸವೇಶ್ವರ ಪುರಾಣ ಮಹಾಮಂಗಳೋತ್ಸವ ಹಾಗೂ ಧರ್ಮಸಭೆಯಲ್ಲಿ ಮಾತನಾಡಿದರು.</p>.<p>ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ ಮನಗೂಳಿ ಮಾತನಾಡಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಾಶಿ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ ನಡೆಯಿತು.</p>.<p>ಕೆರೂರ ಚರಂತಿಮಠದ ಶಿವಕುಮಾರ ಶಿವಾಚಾರ್ಯರು, ಬೆಂಗಳೂರು ವಿಭೂತಿಪುರ ಮಠದ ಮಹಾಂತಲಿಂಗ ಶಿವಾಚಾರ್ಯರು ಮಾತನಾಡಿದರು. ಕೊಟ್ಟೂರು-ಡೋಣೂರು ಹಿರೇಮಠದ ಸಿದ್ಥಲಿಂಗ ಶಿವಾಚಾರ್ಯರು, ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯರು, ಕರಭಂಟನಾಳದ ಶಿವಕುಮಾರ ಶ್ರೀಗಳು, ಜಿ.ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಗುರಪ್ಪ ಬೆವೂರ, ವೀರಣ್ಣ ಸಜ್ಜನ, ಸಂಗನಬಸು ಬಾಗೇವಾಡಿ, ಕೈಲಾಸ ಬಾಗೇವಾಡಿ ,ಜಗದೀಶ ಬೇವೂರ, ಶ್ರೀಶೈಲ ಚಾಂದಕವಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-26-918681120</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>