<p><strong>ವಿಜಯಪುರ:</strong> ಬಸವನಾಡಿನಲ್ಲಿ ಜನರು ಜಾತಿಯ ಬದಲು ನೀತಿಯನ್ನು ನೋಡುತ್ತಾರೆ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ವಿದ್ಯಾನಗರ ಚಿನ್ಮೂಲಾದ್ರಿ ಶಿಲಾಪುರಿ ಮಹಾಸಂಸ್ಥಾನ ಭಗೀರಥ ಪೀಠದ ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಹೇಳಿದರು.</p>.<p>ಶನಿವಾರ ಬಬಲೇಶ್ವರ ತಾಲ್ಲೂಕಿನ ಕಾಖಂಡಕಿ ಗ್ರಾಮದಲ್ಲಿ ಉಪ್ಪಾರ ಸಮಾಜ ಸೇವಾ ಸಂಘ ಆಯೋಜಿಸಿದ್ದ ಶ್ರೀ ರಾಜಋಷಿ ಭಗೀರಥರ ಕಂಚಿನ ಮೂರ್ತಿ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸ್ವಾಮೀಜಿಗಳಿಂದ ಜ್ಞಾನ ಸವಿಯುತ್ತಾರೆ. ಫಲಾಪೇಕ್ಷೆಯಿಲ್ಲದೇ ಗುರುಗಳನ್ನು ಗೌರವಿಸುತ್ತಾರೆ. ಶಿಕ್ಷಣ, ಸಂಘಟನೆ, ಸಂಸ್ಕಾರದ ಮೂಲಕ ಅಭಿವೃದ್ಧಿ ಹೊಂದಬೇಕು ಎಂದು ಸ್ವಾಮೀಜಿ ಕರೆ ನೀಡಿದರು.</p>.<p>ಎಲ್ಲರೂ ಮುಖ್ಯವಾಹಿನಿಗೆ ಬರಬೇಕು ಎಂಬುದು ಬಸವಾದಿ ಶರಣರ ಆಶಯವಾಗಿತ್ತು. ಅನುಭವ ಮಂಟಪದ ಮೂಲಕ ಸಮಾನತೆಗೆ ಅವಕಾಶ ಕಲ್ಪಿಸಲಾಗಿತ್ತು. ಸಚಿವ ಎಂ.ಬಿ.ಪಾಟೀಲ ಈ ತತ್ವಗಳಡಿ ಕಾಯಕ ಮಾಡುತ್ತಿದ್ದಾರೆ. ಅವರು ಇನ್ನೂ ಉನ್ನತ ಸ್ಥಾನಕ್ಕೇರಿ ಚುಕ್ಕಾಣಿ ಹಿಡಿಯಲಿ ಎಂದರು.</p>.<p>ಸಚಿವ ಎಂ.ಬಿ. ಪಾಟೀಲ ಮಾತನಾಡಿ, ಜಲಮೂಲಗಳ ಬಳಿ ನಾಗರಿಕತೆಗಳು ಪ್ರಾರಂಭವಾಗಿವೆ. ಆದರೆ, ಭಗೀರಥ ಮಹರ್ಷಿಗಳು ಗಂಗೆಯನ್ನು ಜಲದ ರೂಪದಲ್ಲಿ ಭೂಲೋಕಕ್ಕೆ ತಂದ ರಾಜಋಷಿಯಾಗಿದ್ದಾರೆ ಎಂದು ಹೇಳಿದರು.</p>.<p>ನೀರಾವರಿಯಿಂದಾಗಿ ಜಿಲ್ಲೆಯಲ್ಲಿ ಈ ಹಿಂದೆ ಮಳೆಯಾಶ್ರಿತ ಬೇಸಾಯ ಮಾಡುತ್ತಿದ್ದ ರೈತರು ಸುಸ್ಥಿರ ಕೃಷಿ ಮಾಡಲು ಅನುಕೂಲವಾಗಿದೆ. ಕಾಖಂಡಕಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರಾಗಿದೆ. ಈಗ ಇಲ್ಲಿಗೆ ಜಲದ ರೂಪದಲ್ಲಿ ಲಕ್ಷ್ಮಿ ಬಂದಿದ್ದಾಳೆ. ಇನ್ನು ಮುಂದೆ ಸರಸ್ವತಿಯೂ ನೆಲೆಸಲಿದ್ದಾಳೆ. ಈ ಸಮುದಾಯ ಈಗ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.<br /><br /> ಕಾಖಂಡಕಿ ಗುರುದೇವಾಶ್ರಮದ ಶ್ರೀ ಶಿವಯೋಗೇಶ್ವರ ಮಹಾಸ್ವಾಮಿಗಳು ಕಾಖಂಡಕಿ ಶ್ರೀ ನಿಜಲಿಂಗಯ್ಯ ಮಹಾಸ್ವಾಮಿಗಳು, ಚಿಕ್ಕಾಲಗುಂಡಿಯ ಶಿವಶರಣಾನಂದ ಸ್ವಾಮೀಜಿ, ಉಪ್ಪಾರ ಅಭಿವೃದ್ಧಿ ನಿಗಮ ಅಧ್ಯಕ್ಷ ಭರಮಣ್ಣ ಉಪ್ಪಾರ, ಶಿಕ್ಷಕ ಲಕ್ಷ್ಮಣಗೌಡ ವಿ. ಪಾಟೀಲ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಬಸವನಾಡಿನಲ್ಲಿ ಜನರು ಜಾತಿಯ ಬದಲು ನೀತಿಯನ್ನು ನೋಡುತ್ತಾರೆ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ವಿದ್ಯಾನಗರ ಚಿನ್ಮೂಲಾದ್ರಿ ಶಿಲಾಪುರಿ ಮಹಾಸಂಸ್ಥಾನ ಭಗೀರಥ ಪೀಠದ ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಹೇಳಿದರು.</p>.<p>ಶನಿವಾರ ಬಬಲೇಶ್ವರ ತಾಲ್ಲೂಕಿನ ಕಾಖಂಡಕಿ ಗ್ರಾಮದಲ್ಲಿ ಉಪ್ಪಾರ ಸಮಾಜ ಸೇವಾ ಸಂಘ ಆಯೋಜಿಸಿದ್ದ ಶ್ರೀ ರಾಜಋಷಿ ಭಗೀರಥರ ಕಂಚಿನ ಮೂರ್ತಿ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸ್ವಾಮೀಜಿಗಳಿಂದ ಜ್ಞಾನ ಸವಿಯುತ್ತಾರೆ. ಫಲಾಪೇಕ್ಷೆಯಿಲ್ಲದೇ ಗುರುಗಳನ್ನು ಗೌರವಿಸುತ್ತಾರೆ. ಶಿಕ್ಷಣ, ಸಂಘಟನೆ, ಸಂಸ್ಕಾರದ ಮೂಲಕ ಅಭಿವೃದ್ಧಿ ಹೊಂದಬೇಕು ಎಂದು ಸ್ವಾಮೀಜಿ ಕರೆ ನೀಡಿದರು.</p>.<p>ಎಲ್ಲರೂ ಮುಖ್ಯವಾಹಿನಿಗೆ ಬರಬೇಕು ಎಂಬುದು ಬಸವಾದಿ ಶರಣರ ಆಶಯವಾಗಿತ್ತು. ಅನುಭವ ಮಂಟಪದ ಮೂಲಕ ಸಮಾನತೆಗೆ ಅವಕಾಶ ಕಲ್ಪಿಸಲಾಗಿತ್ತು. ಸಚಿವ ಎಂ.ಬಿ.ಪಾಟೀಲ ಈ ತತ್ವಗಳಡಿ ಕಾಯಕ ಮಾಡುತ್ತಿದ್ದಾರೆ. ಅವರು ಇನ್ನೂ ಉನ್ನತ ಸ್ಥಾನಕ್ಕೇರಿ ಚುಕ್ಕಾಣಿ ಹಿಡಿಯಲಿ ಎಂದರು.</p>.<p>ಸಚಿವ ಎಂ.ಬಿ. ಪಾಟೀಲ ಮಾತನಾಡಿ, ಜಲಮೂಲಗಳ ಬಳಿ ನಾಗರಿಕತೆಗಳು ಪ್ರಾರಂಭವಾಗಿವೆ. ಆದರೆ, ಭಗೀರಥ ಮಹರ್ಷಿಗಳು ಗಂಗೆಯನ್ನು ಜಲದ ರೂಪದಲ್ಲಿ ಭೂಲೋಕಕ್ಕೆ ತಂದ ರಾಜಋಷಿಯಾಗಿದ್ದಾರೆ ಎಂದು ಹೇಳಿದರು.</p>.<p>ನೀರಾವರಿಯಿಂದಾಗಿ ಜಿಲ್ಲೆಯಲ್ಲಿ ಈ ಹಿಂದೆ ಮಳೆಯಾಶ್ರಿತ ಬೇಸಾಯ ಮಾಡುತ್ತಿದ್ದ ರೈತರು ಸುಸ್ಥಿರ ಕೃಷಿ ಮಾಡಲು ಅನುಕೂಲವಾಗಿದೆ. ಕಾಖಂಡಕಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರಾಗಿದೆ. ಈಗ ಇಲ್ಲಿಗೆ ಜಲದ ರೂಪದಲ್ಲಿ ಲಕ್ಷ್ಮಿ ಬಂದಿದ್ದಾಳೆ. ಇನ್ನು ಮುಂದೆ ಸರಸ್ವತಿಯೂ ನೆಲೆಸಲಿದ್ದಾಳೆ. ಈ ಸಮುದಾಯ ಈಗ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.<br /><br /> ಕಾಖಂಡಕಿ ಗುರುದೇವಾಶ್ರಮದ ಶ್ರೀ ಶಿವಯೋಗೇಶ್ವರ ಮಹಾಸ್ವಾಮಿಗಳು ಕಾಖಂಡಕಿ ಶ್ರೀ ನಿಜಲಿಂಗಯ್ಯ ಮಹಾಸ್ವಾಮಿಗಳು, ಚಿಕ್ಕಾಲಗುಂಡಿಯ ಶಿವಶರಣಾನಂದ ಸ್ವಾಮೀಜಿ, ಉಪ್ಪಾರ ಅಭಿವೃದ್ಧಿ ನಿಗಮ ಅಧ್ಯಕ್ಷ ಭರಮಣ್ಣ ಉಪ್ಪಾರ, ಶಿಕ್ಷಕ ಲಕ್ಷ್ಮಣಗೌಡ ವಿ. ಪಾಟೀಲ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>