<p><strong>ವಿಜಯಪುರ</strong>: ಯಡಿಯೂರಪ್ಪ ಅವಧಿಯಲ್ಲಿ ನಡೆದ ಭ್ರಷ್ಟ್ರಾಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಪಾಲುದಾರ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.</p>.<p>ಸಿಂದಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಮೊರಟಗಿಯಲ್ಲಿ ಸೋಮವಾರ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿದ್ದಬೊಮ್ಮಾಯಿ ಕೂಡ ಲೂಟಿ ಹೊಡೆದ ಗಿರಾಕಿಯೇ ಎಂದು ಹೇಳಿದರು.</p>.<p>ಬೊಮ್ಮಾಯಿ ಜನರಿಂದ ಆಯ್ಕೆಯಾಗಿ ಬಂದವರಲ್ಲ, ಆರ್ಎಸ್ಎಸ್ನಿಂದ ನೇಮಕವಾದ ಗಿರಾಕಿ. ಹೊಸವೇಷ ಹಾಕಿಕೊಂಡು ಈಗ ಜನರ ಮುಂದೆ ಬಂದಿದ್ದಾರೆ. ರಾಜ್ಯವನ್ನು ಕೇಸರಿಕರಣ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.</p>.<p class="Subhead"><strong>ಸತ್ಯ ನಾಶ ಸರ್ಕಾರ:</strong>ಪ್ರಧಾನಿ ಮೋದಿ ಅವರದು ‘ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಸರ್ಕಾರವಲ್ಲ; ಸಬ್ ಕಾ ಸತ್ಯ ನಾಶ್ ಸರ್ಕಾರ್’ ಎಂದುರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಮೋದಿ ಸರ್ಕಾರ ಹೆಸರು ಬದಲಿಸುವ ಸರ್ಕಾರವೇ ಹೊರತು ಕೆಲಸ ಮಾಡುವ ಸರ್ಕಾರವಲ್ಲ. ಯುಪಿಎ ಅವಧಿಯಲ್ಲಿ ಜಾರಿಯಾದ ಜನಪರ ಯೋಜನೆಗಳನ್ನು ಬದಲಾವಣೆ ಮಾಡುವ, ನಾಯಕ ಹೆಸರು ಬದಲಾವಣೆಗಷ್ಟೇ ಸೀಮಿತವಾಗಿದೆ ಎಂದರು.</p>.<p>ಕರ್ನಾಟಕ, ಗೋವಾ, ಉತ್ತರಾಖಂಡ, ಮಧ್ಯಪ್ರದೇಶ, ಮಣಿಪುರದಲ್ಲಿ ರಚನೆಯಾಗಿದ್ದ ಕಾಂಗ್ರೆಸ್ನ ಸ್ಥಿರ ಸರ್ಕಾರಗಳನ್ನು ಮೋದಿ, ಅಮಿತ್ ಶಾ ಜೋಡಿ ಇಡಿ, ಸಿಬಿಐ ದುರುಪಯೋಗ ಪಡಿಸಿಕೊಂಡು ವಾಮಮಾರ್ಗದ ಮೂಲಕ ಕೆಡವಿ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಬಾಹಿರವಾಗಿ ಬಿಜೆಪಿ ಸರ್ಕಾರ ರಚನೆ ಮಾಡಿದ್ದಾರೆ ಎಂದು ಆರೋಪಿಸಿದರು.</p>.<p>ನಾಯಕರ ದಂಡು: ಸಿಂದಗಿ ಚುನಾವಣಾ ಅಖಾಡದಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ನ ಬಹುತೇಕ ರಾಜ್ಯ ನಾಯಕರು ಕ್ಷೇತ್ರದಲ್ಲೇ ಬೀಡು ಬಿಟ್ಟಿದ್ದಾರೆ. ಗ್ರಾಮ, ಗ್ರಾಮಗಳಿಗೆ ತೆರಳಿ ಅಬ್ಬರದ ಪ್ರಚಾರ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಯಡಿಯೂರಪ್ಪ ಅವಧಿಯಲ್ಲಿ ನಡೆದ ಭ್ರಷ್ಟ್ರಾಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಪಾಲುದಾರ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.</p>.<p>ಸಿಂದಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಮೊರಟಗಿಯಲ್ಲಿ ಸೋಮವಾರ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿದ್ದಬೊಮ್ಮಾಯಿ ಕೂಡ ಲೂಟಿ ಹೊಡೆದ ಗಿರಾಕಿಯೇ ಎಂದು ಹೇಳಿದರು.</p>.<p>ಬೊಮ್ಮಾಯಿ ಜನರಿಂದ ಆಯ್ಕೆಯಾಗಿ ಬಂದವರಲ್ಲ, ಆರ್ಎಸ್ಎಸ್ನಿಂದ ನೇಮಕವಾದ ಗಿರಾಕಿ. ಹೊಸವೇಷ ಹಾಕಿಕೊಂಡು ಈಗ ಜನರ ಮುಂದೆ ಬಂದಿದ್ದಾರೆ. ರಾಜ್ಯವನ್ನು ಕೇಸರಿಕರಣ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.</p>.<p class="Subhead"><strong>ಸತ್ಯ ನಾಶ ಸರ್ಕಾರ:</strong>ಪ್ರಧಾನಿ ಮೋದಿ ಅವರದು ‘ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಸರ್ಕಾರವಲ್ಲ; ಸಬ್ ಕಾ ಸತ್ಯ ನಾಶ್ ಸರ್ಕಾರ್’ ಎಂದುರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಮೋದಿ ಸರ್ಕಾರ ಹೆಸರು ಬದಲಿಸುವ ಸರ್ಕಾರವೇ ಹೊರತು ಕೆಲಸ ಮಾಡುವ ಸರ್ಕಾರವಲ್ಲ. ಯುಪಿಎ ಅವಧಿಯಲ್ಲಿ ಜಾರಿಯಾದ ಜನಪರ ಯೋಜನೆಗಳನ್ನು ಬದಲಾವಣೆ ಮಾಡುವ, ನಾಯಕ ಹೆಸರು ಬದಲಾವಣೆಗಷ್ಟೇ ಸೀಮಿತವಾಗಿದೆ ಎಂದರು.</p>.<p>ಕರ್ನಾಟಕ, ಗೋವಾ, ಉತ್ತರಾಖಂಡ, ಮಧ್ಯಪ್ರದೇಶ, ಮಣಿಪುರದಲ್ಲಿ ರಚನೆಯಾಗಿದ್ದ ಕಾಂಗ್ರೆಸ್ನ ಸ್ಥಿರ ಸರ್ಕಾರಗಳನ್ನು ಮೋದಿ, ಅಮಿತ್ ಶಾ ಜೋಡಿ ಇಡಿ, ಸಿಬಿಐ ದುರುಪಯೋಗ ಪಡಿಸಿಕೊಂಡು ವಾಮಮಾರ್ಗದ ಮೂಲಕ ಕೆಡವಿ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಬಾಹಿರವಾಗಿ ಬಿಜೆಪಿ ಸರ್ಕಾರ ರಚನೆ ಮಾಡಿದ್ದಾರೆ ಎಂದು ಆರೋಪಿಸಿದರು.</p>.<p>ನಾಯಕರ ದಂಡು: ಸಿಂದಗಿ ಚುನಾವಣಾ ಅಖಾಡದಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ನ ಬಹುತೇಕ ರಾಜ್ಯ ನಾಯಕರು ಕ್ಷೇತ್ರದಲ್ಲೇ ಬೀಡು ಬಿಟ್ಟಿದ್ದಾರೆ. ಗ್ರಾಮ, ಗ್ರಾಮಗಳಿಗೆ ತೆರಳಿ ಅಬ್ಬರದ ಪ್ರಚಾರ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>