<p><strong>ವಿಜಯಪುರ</strong>: ದೇಶದಲ್ಲಿ ಸಹಕಾರಿ ಕ್ಷೇತ್ರವನ್ನು ಬಲಪಡಿಸಲು ಪ್ರತ್ಯೇಕ ಸಹಕಾರಿ ಸಚಿವಾಲಯವನ್ನು ಸ್ಥಾಪಿಸಿರುವ ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವಿಜಯಪುರ ಜಿಲ್ಲಾ ನಿರ್ದೇಶಕ ಸಿದ್ರಾಮಪ್ಪ ಉಪ್ಪಿನ ಹೇಳಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರ ಭಾರತಿ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರವುಪ್ರತ್ಯೇಕ ಸಚಿವಾಲಯ ಸ್ಥಾಪಿಸಿರುವುದು ದೇಶದ ಸಹಕಾರಿ ಚಳವಳಿಯಲ್ಲಿ ಮೈಲುಗಲ್ಲಾಗಿದ್ದು, ಈ ಐತಿಹಾಸಿಕ ನಿರ್ಣಯ ಕೈಗೊಂಡ ಕೇಂದ್ರ ಸರ್ಕಾರವನ್ನು ಅಭಿನಂದಿಸುವುದಾಗಿ ಹೇಳಿದರು.</p>.<p>ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯ ರಚನೆಯಿಂದಾಗಿ ಕೇಂದ್ರದಲ್ಲಿ ನಮ್ಮ ಸಮಸ್ಯೆಗಳಿಗೆ ಸ್ಪಂದನೆ ಸಿಗಲಿದೆ. ಸಹಕಾರ ಕ್ಷೇತ್ರವನ್ನು ಆರೋಗ್ಯಕರವಾಗಿ ಮತ್ತು ಬಲಯುವಾಗಿ ಬೆಳಸಲು ಒಬ್ಬರು ಸಚಿವರು ಇರುವುದರಿಂದಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.</p>.<p>ದೇಶದಲ್ಲಿ ಸಹಕಾರಿ ಕ್ಷೇತ್ರ ಆರ್ಥಿಕ ಲಾಭಗಳಿಸುವ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ಮತ್ತು ಬಹು ರಾಜ್ಯ ಸಹಕಾರಿ ಸಂಸ್ಥೆಗಳ ಅಭಿವೃದ್ಧಿಯನ್ನು ಶಕ್ತಗೊಳಿಸಲು ಈ ಸಚಿವಾಲಯವು ಕೆಲಸ ಮಾಡುತ್ತದೆ ಎಂಬ ಆಶಾಭಾವ ಮೂಡಿದೆ ಎಂದರು.</p>.<p>ಸಹಕಾರಿ ಕ್ಷೇತ್ರ ದೇಶದ ಜನರ ಜೀವನ ಪದ್ಧತಿಯಾಗಿ ಬೆಳೆದಿದೆ. ದೇಶದ ಅರ್ಥ ವ್ಯವಸ್ಥೆಯಲ್ಲಿ ಶೇ 40ರಷ್ಟು ಪಾಲನ್ನು ಸಹಕಾರ ಕ್ಷೇತ್ರದ ಮೂಲಕವೇ ನಿರ್ವಹಿಸಲಾಗುತ್ತಿದೆ. ಸಹಕಾರಿ ಕ್ಷೇತ್ರದ ಮೂಲಕವೇ ಸರ್ಕಾರದ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದರು.</p>.<p>ರಾಷ್ಟ್ರೀಯ ಸಹಕಾರ ಭಾರತಿ ಹಾಗೂ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸತತ ಪ್ರಯತ್ನದಿಂದ ಸಹಕಾರಿ ಸಚಿವಾಲಯ ಸ್ಥಾಪನೆಯಾಗಿರುವುದು ಫಲ ಸಿಕ್ಕಂತಾಗಿದೆ ಎಂದು ಹೇಳಿದರು.</p>.<p>ಸಹಕಾರ ಭಾರತಿ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಆರ್.ನಾಯಿಕ, ಸಹಕಾರ ಭಾರತಿ ರಾಜ್ಯ ಕಾರ್ಯದರ್ಶಿ ಗುರುಶಾಂತ ನಿಡೋಣಿ, ಸಹಕಾರ ಭಾರತಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಎಂ.ಜಿ.ಪಾಟೀಲ್, ಸಹಕಾರ ಭಾರತಿ ವಿಜಯಪುರ ಜಿಲ್ಲಾ ಘಟಕದ ಉಪಾಧ್ಯಕ್ಷ ಶ್ರೀಮಂತ ಇಂಡಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ದೇಶದಲ್ಲಿ ಸಹಕಾರಿ ಕ್ಷೇತ್ರವನ್ನು ಬಲಪಡಿಸಲು ಪ್ರತ್ಯೇಕ ಸಹಕಾರಿ ಸಚಿವಾಲಯವನ್ನು ಸ್ಥಾಪಿಸಿರುವ ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವಿಜಯಪುರ ಜಿಲ್ಲಾ ನಿರ್ದೇಶಕ ಸಿದ್ರಾಮಪ್ಪ ಉಪ್ಪಿನ ಹೇಳಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರ ಭಾರತಿ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರವುಪ್ರತ್ಯೇಕ ಸಚಿವಾಲಯ ಸ್ಥಾಪಿಸಿರುವುದು ದೇಶದ ಸಹಕಾರಿ ಚಳವಳಿಯಲ್ಲಿ ಮೈಲುಗಲ್ಲಾಗಿದ್ದು, ಈ ಐತಿಹಾಸಿಕ ನಿರ್ಣಯ ಕೈಗೊಂಡ ಕೇಂದ್ರ ಸರ್ಕಾರವನ್ನು ಅಭಿನಂದಿಸುವುದಾಗಿ ಹೇಳಿದರು.</p>.<p>ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯ ರಚನೆಯಿಂದಾಗಿ ಕೇಂದ್ರದಲ್ಲಿ ನಮ್ಮ ಸಮಸ್ಯೆಗಳಿಗೆ ಸ್ಪಂದನೆ ಸಿಗಲಿದೆ. ಸಹಕಾರ ಕ್ಷೇತ್ರವನ್ನು ಆರೋಗ್ಯಕರವಾಗಿ ಮತ್ತು ಬಲಯುವಾಗಿ ಬೆಳಸಲು ಒಬ್ಬರು ಸಚಿವರು ಇರುವುದರಿಂದಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.</p>.<p>ದೇಶದಲ್ಲಿ ಸಹಕಾರಿ ಕ್ಷೇತ್ರ ಆರ್ಥಿಕ ಲಾಭಗಳಿಸುವ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ಮತ್ತು ಬಹು ರಾಜ್ಯ ಸಹಕಾರಿ ಸಂಸ್ಥೆಗಳ ಅಭಿವೃದ್ಧಿಯನ್ನು ಶಕ್ತಗೊಳಿಸಲು ಈ ಸಚಿವಾಲಯವು ಕೆಲಸ ಮಾಡುತ್ತದೆ ಎಂಬ ಆಶಾಭಾವ ಮೂಡಿದೆ ಎಂದರು.</p>.<p>ಸಹಕಾರಿ ಕ್ಷೇತ್ರ ದೇಶದ ಜನರ ಜೀವನ ಪದ್ಧತಿಯಾಗಿ ಬೆಳೆದಿದೆ. ದೇಶದ ಅರ್ಥ ವ್ಯವಸ್ಥೆಯಲ್ಲಿ ಶೇ 40ರಷ್ಟು ಪಾಲನ್ನು ಸಹಕಾರ ಕ್ಷೇತ್ರದ ಮೂಲಕವೇ ನಿರ್ವಹಿಸಲಾಗುತ್ತಿದೆ. ಸಹಕಾರಿ ಕ್ಷೇತ್ರದ ಮೂಲಕವೇ ಸರ್ಕಾರದ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದರು.</p>.<p>ರಾಷ್ಟ್ರೀಯ ಸಹಕಾರ ಭಾರತಿ ಹಾಗೂ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸತತ ಪ್ರಯತ್ನದಿಂದ ಸಹಕಾರಿ ಸಚಿವಾಲಯ ಸ್ಥಾಪನೆಯಾಗಿರುವುದು ಫಲ ಸಿಕ್ಕಂತಾಗಿದೆ ಎಂದು ಹೇಳಿದರು.</p>.<p>ಸಹಕಾರ ಭಾರತಿ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಆರ್.ನಾಯಿಕ, ಸಹಕಾರ ಭಾರತಿ ರಾಜ್ಯ ಕಾರ್ಯದರ್ಶಿ ಗುರುಶಾಂತ ನಿಡೋಣಿ, ಸಹಕಾರ ಭಾರತಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಎಂ.ಜಿ.ಪಾಟೀಲ್, ಸಹಕಾರ ಭಾರತಿ ವಿಜಯಪುರ ಜಿಲ್ಲಾ ಘಟಕದ ಉಪಾಧ್ಯಕ್ಷ ಶ್ರೀಮಂತ ಇಂಡಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>