<p><strong>ವಿಜಯಪುರ: </strong>ಭೀಮಾ ನದಿ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಆಗ್ರಹಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ವಿಜಯಪುರ, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳು ಸೇರಿದಂತೆ ನೆರೆಯ ಮಹಾರಾಷ್ಟ್ರವೂ ಭೀಮಾ ನದಿ ಪ್ರವಾಹದಿಂದ ನಲುಗಿರುವುದರಿಂದ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಮನವಿ ಮಾಡಿದರು.</p>.<p>ಕೋವಿಡ್ನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟದಿಂದ ರಾಜ್ಯ ಸರ್ಕಾರಕ್ಕೆಕಳೆದ ಬಾರಿ ಕೃಷ್ಣಾ ತೀರದಲ್ಲಿ ಉಂಟಾದ ಪ್ರವಾಹ ಸಂತ್ರಸ್ತರಿಗೆ ಇದುವರೆಗೂ ಪರಿಹಾರ, ಪುನರ್ವಸತಿ ಕಲ್ಪಿಸಲು ಸಾಧ್ಯವಾಗಿಲ್ಲ. ಹೀಗಿರುವಾಗಭೀಮಾ ಪ್ರವಾಹ ಸಂತ್ರಸ್ತರಿಗೆ ಪರಿಹಾರ, ಪುನರ್ವಸತಿ ಕಲ್ಪಿಸಲು ಸದ್ಯದ ಮಟ್ಟಿಗೆ ರಾಜ್ಯ ಸರ್ಕಾರ ಸಶಕ್ತವಾಗಿಲ್ಲ ಎಂದರು.</p>.<p>ಪ್ರವಾಹ, ಅತಿವೃಷ್ಟಿಯಿಂದ ರೈತರಿಗೆ ಆಗಿರುವ ಹಾನಿಯನ್ನು ಯಾರಿಂದಲೂ ತುಂಬಿಕೊಡಲು ಸಾಧ್ಯವಿಲ್ಲ. ಕೇಂದ್ರ, ರಾಜ್ಯ ಸರ್ಕಾರ ಕೇವಲ ಸಾಂತ್ವಾನದ ಮಾತುಗಳಿಗೆ ಸೀಮಿತವಾಗದೇ ಅಗತ್ಯ ನೆರವು ನೀಡಬೇಕು ಎಂದು ಹೇಳಿದರು.</p>.<p class="Subhead"><strong>ರಾಷ್ಟ್ರೀಯ ನೀತಿ ರೂಪಿಸಿ:</strong>ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯದಿಂದಎಷ್ಟು ಪ್ರಮಾಣದ ನೀರನ್ನುಭೀಮಾ ನದಿಗೆ ಬಿಡಲಾಗುತ್ತಿದೆ ಎಂಬುದರ ಬಗ್ಗೆ ರಾಜ್ಯಕ್ಕೆ ಖಚಿತ ಮಾಹಿತಿ ಇಲ್ಲದೇ ಇರುವುದು ಹಾಗೂ ಎರಡು ರಾಜ್ಯಗಳ ನಡುವೆ ಜಲಾಶಯಗಳ ನಿರ್ವಹಣೆ ವಿಷಯದಲ್ಲಿ ಸಮನ್ವಯ ಇಲ್ಲದಿರುವ ಪರಿಣಾಮ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಕಾರಣ ಈ ಸಂಬಂಧ ರಾಷ್ಟ್ರೀಯ ನೀತಿ ರೂಪಿಸಬೇಕಾಗಿದೆ ಎಂದು ಮನವಿ ಮಾಡಿದರು.</p>.<p>ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯಗಳ ಅವಲೋಕನ ಸಂಬಂಧ ಪ್ರತಿ ಮಳೆಗಾಲದ ಸಂದರ್ಭದಲ್ಲಿ ನಮ್ಮ ರಾಜ್ಯದ ಪ್ರತಿನಿಧಿಯೊಬ್ಬರನ್ನು ನಿಯೋಜಿಸಬೇಕು. ಆಗ ಮಾತ್ರ ಜಲಾಶಯಗಳಿಂದ ಎಷ್ಟು ನೀರನ್ನು ನದಿಗೆ ಹರಿಬಿಡಲಾಗುತ್ತದೆ ಎಂಬುದನ್ನು ಅರಿಯಲು ಹಾಗೂ ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯ ಎಂದು ಸಲಹೆ ನೀಡಿದರು.</p>.<p class="Subhead">ಅಚಾತುರ್ಯದಿಂದ ಪ್ರವಾಹ:</p>.<p>ಕಲಬುರ್ಗಿಯ ಸೊನ್ನಾ ಬ್ಯಾರೇಜ್ ನಿರ್ವಹಣೆ ಮಾಡುತ್ತಿರುವ ಕರ್ನಾಟಕ ನೀರಾವರಿ ನಿಗಮದ ಅಚಾತುರ್ಯದಿಂದ ಪ್ರವಾಹ ಪರಿಸ್ಥಿತಿ ಕೈಮೀರಿ ಹೋಗಿದೆ.ಬ್ಯಾರೇಜ್ನಿಂದ ಭೀಮಾ ನದಿಗೆ ಗೇಟ್ ತೆರೆದು ತಕ್ಷಣ ನೀರು ಹರಿಸಿದ್ದರೆ ಪ್ರವಾಹ ಪರಿಣಾಮ ಹೆಚ್ಚಾಗುತ್ತಿರಲಿಲ್ಲ ಎಂದು ಹೇಳಿದರು.</p>.<p class="Subhead"><strong>ಪರಿಹಾರ ನೀಡಿ:</strong>ಪ್ರವಾಹ ಸಂತ್ರಸ್ತರಿಗೆ ಓಬಿರಾಯನ ಕಾಲದ ಅಲ್ಪ ಪ್ರಮಾಣದ ಪರಿಹಾರ ಮೊತ್ತದ ಬದಲು ಸಂತ್ರಸ್ತರಾದವರಿಗೆ ತಲಾ ₹ ಲಕ್ಷ ಪರಿಹಾರವನ್ನು ತಕ್ಷಣ ನೀಡಬೇಕು, ಹಾನಿಯ ವರದಿ ಬಂದ ಬಳಿಕ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ತಕ್ಷಣ ಜೋಳದ ಕಣಕಿ ಸೇರಿದಂತೆ ಮೇವು ಒದಗಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದರು.</p>.<p>ಭೀಮಾ ನದಿ ತೀರದಲ್ಲಿ ಪ್ರತಿ ಬಾರಿ ಪ್ರವಾಹಕ್ಕೆ ಒಳಗಾಗುವ ಗ್ರಾಮಗಳನ್ನು ಶಾಶ್ವತವಾಗಿ ಸ್ಥಳಾಂತರ ಮಾಡಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಪ್ರತಿ ವರ್ಷ ಡೋಣಿ ನದಿ ಪ್ರವಾಹದಿಂದ ಜಿಲ್ಲೆಯ ಜನರು ಸಮಸ್ಯೆ ಎದುರಿಸುತ್ತಿದ್ದು,ಡೋಣಿ ನದಿಯಲ್ಲಿ ತುಂಬಿರುವ ಹೂಳು ತೆಗೆಯಲು ಹಾಗೂ ಒತ್ತುವರಿ ತೆರವಿಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ವಿಜಯಪುರ ಜಿಲ್ಲೆಗೆ ಮಳೆ ಬಂದರೂ ಒಳಿತಿಲ್ಲ, ಮಳೆ ಬಾರದಿದ್ದರೂ ಒಳಿತಿಲ್ಲ. ಶಾಶ್ವತ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು ಎಂದು ಮನವಿ ಮಾಡಿದರು.</p>.<p>ಇಂಡಿ ತಾಲ್ಲೂಕಿನ 16 ಕೆರೆಗಳಿಗೆ ನೀರು ತುಂಬಿಸಲು ಕೃಷ್ಣಾ ಭಾಗ್ಯ ಜಲ ನಿಗದಮ ನಿರ್ದೇಶಕ ಮಂಡಳಿ ಒಪ್ಪಿಗೆ ನೀಡಿರುವುದಕ್ಕೆ ರಾಜ್ಯ ಸರ್ಕಾರವನ್ನು ಅಭಿನಂದಿಸುವುದಾಗಿ ಹೇಳಿದರು.</p>.<p>---<br />ಭೀಮಾ ಪ್ರವಾಹ ನಿರ್ವಹಣೆಯಲ್ಲಿ ರಾಜ್ಯದ ಅಧಿಕಾರಿಗಳು ಎಡವಿದ್ದು ಎಲ್ಲಿ ಎಂಬುದರ ಕುರಿತು ತನಿಖೆಯಾಗಬೇಕು, ತಪ್ಪಿತಸ್ಥರ ವಿರುದ್ಧ ಕ್ರಮವಾಗಬೇಕು.<br />- ಯಶವಂತರಾಯಗೌಡ ಪಾಟೀಲ,ಶಾಸಕ, ಇಂಡಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಭೀಮಾ ನದಿ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಆಗ್ರಹಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ವಿಜಯಪುರ, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳು ಸೇರಿದಂತೆ ನೆರೆಯ ಮಹಾರಾಷ್ಟ್ರವೂ ಭೀಮಾ ನದಿ ಪ್ರವಾಹದಿಂದ ನಲುಗಿರುವುದರಿಂದ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಮನವಿ ಮಾಡಿದರು.</p>.<p>ಕೋವಿಡ್ನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟದಿಂದ ರಾಜ್ಯ ಸರ್ಕಾರಕ್ಕೆಕಳೆದ ಬಾರಿ ಕೃಷ್ಣಾ ತೀರದಲ್ಲಿ ಉಂಟಾದ ಪ್ರವಾಹ ಸಂತ್ರಸ್ತರಿಗೆ ಇದುವರೆಗೂ ಪರಿಹಾರ, ಪುನರ್ವಸತಿ ಕಲ್ಪಿಸಲು ಸಾಧ್ಯವಾಗಿಲ್ಲ. ಹೀಗಿರುವಾಗಭೀಮಾ ಪ್ರವಾಹ ಸಂತ್ರಸ್ತರಿಗೆ ಪರಿಹಾರ, ಪುನರ್ವಸತಿ ಕಲ್ಪಿಸಲು ಸದ್ಯದ ಮಟ್ಟಿಗೆ ರಾಜ್ಯ ಸರ್ಕಾರ ಸಶಕ್ತವಾಗಿಲ್ಲ ಎಂದರು.</p>.<p>ಪ್ರವಾಹ, ಅತಿವೃಷ್ಟಿಯಿಂದ ರೈತರಿಗೆ ಆಗಿರುವ ಹಾನಿಯನ್ನು ಯಾರಿಂದಲೂ ತುಂಬಿಕೊಡಲು ಸಾಧ್ಯವಿಲ್ಲ. ಕೇಂದ್ರ, ರಾಜ್ಯ ಸರ್ಕಾರ ಕೇವಲ ಸಾಂತ್ವಾನದ ಮಾತುಗಳಿಗೆ ಸೀಮಿತವಾಗದೇ ಅಗತ್ಯ ನೆರವು ನೀಡಬೇಕು ಎಂದು ಹೇಳಿದರು.</p>.<p class="Subhead"><strong>ರಾಷ್ಟ್ರೀಯ ನೀತಿ ರೂಪಿಸಿ:</strong>ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯದಿಂದಎಷ್ಟು ಪ್ರಮಾಣದ ನೀರನ್ನುಭೀಮಾ ನದಿಗೆ ಬಿಡಲಾಗುತ್ತಿದೆ ಎಂಬುದರ ಬಗ್ಗೆ ರಾಜ್ಯಕ್ಕೆ ಖಚಿತ ಮಾಹಿತಿ ಇಲ್ಲದೇ ಇರುವುದು ಹಾಗೂ ಎರಡು ರಾಜ್ಯಗಳ ನಡುವೆ ಜಲಾಶಯಗಳ ನಿರ್ವಹಣೆ ವಿಷಯದಲ್ಲಿ ಸಮನ್ವಯ ಇಲ್ಲದಿರುವ ಪರಿಣಾಮ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಕಾರಣ ಈ ಸಂಬಂಧ ರಾಷ್ಟ್ರೀಯ ನೀತಿ ರೂಪಿಸಬೇಕಾಗಿದೆ ಎಂದು ಮನವಿ ಮಾಡಿದರು.</p>.<p>ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯಗಳ ಅವಲೋಕನ ಸಂಬಂಧ ಪ್ರತಿ ಮಳೆಗಾಲದ ಸಂದರ್ಭದಲ್ಲಿ ನಮ್ಮ ರಾಜ್ಯದ ಪ್ರತಿನಿಧಿಯೊಬ್ಬರನ್ನು ನಿಯೋಜಿಸಬೇಕು. ಆಗ ಮಾತ್ರ ಜಲಾಶಯಗಳಿಂದ ಎಷ್ಟು ನೀರನ್ನು ನದಿಗೆ ಹರಿಬಿಡಲಾಗುತ್ತದೆ ಎಂಬುದನ್ನು ಅರಿಯಲು ಹಾಗೂ ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯ ಎಂದು ಸಲಹೆ ನೀಡಿದರು.</p>.<p class="Subhead">ಅಚಾತುರ್ಯದಿಂದ ಪ್ರವಾಹ:</p>.<p>ಕಲಬುರ್ಗಿಯ ಸೊನ್ನಾ ಬ್ಯಾರೇಜ್ ನಿರ್ವಹಣೆ ಮಾಡುತ್ತಿರುವ ಕರ್ನಾಟಕ ನೀರಾವರಿ ನಿಗಮದ ಅಚಾತುರ್ಯದಿಂದ ಪ್ರವಾಹ ಪರಿಸ್ಥಿತಿ ಕೈಮೀರಿ ಹೋಗಿದೆ.ಬ್ಯಾರೇಜ್ನಿಂದ ಭೀಮಾ ನದಿಗೆ ಗೇಟ್ ತೆರೆದು ತಕ್ಷಣ ನೀರು ಹರಿಸಿದ್ದರೆ ಪ್ರವಾಹ ಪರಿಣಾಮ ಹೆಚ್ಚಾಗುತ್ತಿರಲಿಲ್ಲ ಎಂದು ಹೇಳಿದರು.</p>.<p class="Subhead"><strong>ಪರಿಹಾರ ನೀಡಿ:</strong>ಪ್ರವಾಹ ಸಂತ್ರಸ್ತರಿಗೆ ಓಬಿರಾಯನ ಕಾಲದ ಅಲ್ಪ ಪ್ರಮಾಣದ ಪರಿಹಾರ ಮೊತ್ತದ ಬದಲು ಸಂತ್ರಸ್ತರಾದವರಿಗೆ ತಲಾ ₹ ಲಕ್ಷ ಪರಿಹಾರವನ್ನು ತಕ್ಷಣ ನೀಡಬೇಕು, ಹಾನಿಯ ವರದಿ ಬಂದ ಬಳಿಕ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ತಕ್ಷಣ ಜೋಳದ ಕಣಕಿ ಸೇರಿದಂತೆ ಮೇವು ಒದಗಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದರು.</p>.<p>ಭೀಮಾ ನದಿ ತೀರದಲ್ಲಿ ಪ್ರತಿ ಬಾರಿ ಪ್ರವಾಹಕ್ಕೆ ಒಳಗಾಗುವ ಗ್ರಾಮಗಳನ್ನು ಶಾಶ್ವತವಾಗಿ ಸ್ಥಳಾಂತರ ಮಾಡಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಪ್ರತಿ ವರ್ಷ ಡೋಣಿ ನದಿ ಪ್ರವಾಹದಿಂದ ಜಿಲ್ಲೆಯ ಜನರು ಸಮಸ್ಯೆ ಎದುರಿಸುತ್ತಿದ್ದು,ಡೋಣಿ ನದಿಯಲ್ಲಿ ತುಂಬಿರುವ ಹೂಳು ತೆಗೆಯಲು ಹಾಗೂ ಒತ್ತುವರಿ ತೆರವಿಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ವಿಜಯಪುರ ಜಿಲ್ಲೆಗೆ ಮಳೆ ಬಂದರೂ ಒಳಿತಿಲ್ಲ, ಮಳೆ ಬಾರದಿದ್ದರೂ ಒಳಿತಿಲ್ಲ. ಶಾಶ್ವತ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು ಎಂದು ಮನವಿ ಮಾಡಿದರು.</p>.<p>ಇಂಡಿ ತಾಲ್ಲೂಕಿನ 16 ಕೆರೆಗಳಿಗೆ ನೀರು ತುಂಬಿಸಲು ಕೃಷ್ಣಾ ಭಾಗ್ಯ ಜಲ ನಿಗದಮ ನಿರ್ದೇಶಕ ಮಂಡಳಿ ಒಪ್ಪಿಗೆ ನೀಡಿರುವುದಕ್ಕೆ ರಾಜ್ಯ ಸರ್ಕಾರವನ್ನು ಅಭಿನಂದಿಸುವುದಾಗಿ ಹೇಳಿದರು.</p>.<p>---<br />ಭೀಮಾ ಪ್ರವಾಹ ನಿರ್ವಹಣೆಯಲ್ಲಿ ರಾಜ್ಯದ ಅಧಿಕಾರಿಗಳು ಎಡವಿದ್ದು ಎಲ್ಲಿ ಎಂಬುದರ ಕುರಿತು ತನಿಖೆಯಾಗಬೇಕು, ತಪ್ಪಿತಸ್ಥರ ವಿರುದ್ಧ ಕ್ರಮವಾಗಬೇಕು.<br />- ಯಶವಂತರಾಯಗೌಡ ಪಾಟೀಲ,ಶಾಸಕ, ಇಂಡಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>