<p><strong>ವಿಜಯಪುರ</strong>: ಮಹಾರಾಷ್ಟ್ರದ ಉಜಿನಿ ಹಾಗೂ ವೀರ ಜಲಾಶಯಗಳಿಂದ ನೀರು ಹೊರ ಬಿಟ್ಟಿರುವುದರಿಂದ ರಾಜ್ಯದ ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಹರಿಯುವ ಭೀಮಾ ನದಿ ತೀರದಲ್ಲಿ ತಲೆದೋರಬಹುದಾದ ಪ್ರವಾಹ ಪರಿಸ್ಥಿತಿ ಕುರಿತು ಎರಡು ಜಿಲ್ಲೆಗಳ ಅಧಿಕಾರಿಗಳು ಮಂಗಳವಾರ ಪರಿಶೀಲನೆ ನಡೆಸಿದರು.</p><p>ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮತ್ತು ಕಲಬುರ್ಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಗಡಿ ಭಾಗದಲ್ಲಿರುವ ಸೊನ್ನ ಬ್ಯಾರೇಜ್ಗೆ ಮಂಗಳವಾರ ಭೇಟಿ ನೀಡಿ, ಭೀಮಾ ನದಿ ಪಾತ್ರದ ಪ್ರವಾಹ ಪರಿಸ್ಥಿತಿ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.</p><p>ಮುನ್ನೆಚ್ಚರಿಕೆ ಕ್ರಮಗಳ ಕುರಿತು ನದಿ ತೀರದ ಜನರಲ್ಲಿ ಜಾಗೃತಿ ಮೂಡಿಸಬೇಕು. ನದಿ ಪಾತ್ರಕ್ಕೆ ಬಟ್ಟೆ ತೊಳೆಯಲು, ದನ, ಕರುಗಳಿಗೆ ನದಿ ಹತ್ತಿರಕ್ಕೆ ಹೋಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p><p>ಸೊನ್ನಾ ಬ್ಯಾರೇಜ್ನ ಎಲ್ಲ ಕ್ರಸ್ಟ್ ಗೆಟ್ಗಳನ್ನು ಪರಿಶೀಲನೆ ನಡೆಸಿದ ಅವರು, ಭೀಮಾ ನದಿ ತೀರದಲ್ಲಿ ಪ್ರವಾಹಕ್ಕೊಳಗಾಗುವ ಗ್ರಾಮಗಳ ಮಾಹಿತಿ ಪಡೆದರು.</p><p>ಕಲಬುರ್ಗಿ ಜಿಲ್ಲಾ ಪಂಚಾಯಿತಿ ಸಿಇಒ ಬನ್ವರ್ ಸಿಂಗ್ ಮೀನಾ, ಆಲಮೇಲ ತಹಶೀಲ್ದಾರ್ ಸುರೇಶ್ ಚಾವಲರ, ಅಫಜಲಪುರ ತಹಶೀಲ್ದಾರ್ ಸಂಜೀವಕುಮಾರ ದಾಸರ, ಸಂತೋಷ ಸಜ್ಜನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಮಹಾರಾಷ್ಟ್ರದ ಉಜಿನಿ ಹಾಗೂ ವೀರ ಜಲಾಶಯಗಳಿಂದ ನೀರು ಹೊರ ಬಿಟ್ಟಿರುವುದರಿಂದ ರಾಜ್ಯದ ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಹರಿಯುವ ಭೀಮಾ ನದಿ ತೀರದಲ್ಲಿ ತಲೆದೋರಬಹುದಾದ ಪ್ರವಾಹ ಪರಿಸ್ಥಿತಿ ಕುರಿತು ಎರಡು ಜಿಲ್ಲೆಗಳ ಅಧಿಕಾರಿಗಳು ಮಂಗಳವಾರ ಪರಿಶೀಲನೆ ನಡೆಸಿದರು.</p><p>ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮತ್ತು ಕಲಬುರ್ಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಗಡಿ ಭಾಗದಲ್ಲಿರುವ ಸೊನ್ನ ಬ್ಯಾರೇಜ್ಗೆ ಮಂಗಳವಾರ ಭೇಟಿ ನೀಡಿ, ಭೀಮಾ ನದಿ ಪಾತ್ರದ ಪ್ರವಾಹ ಪರಿಸ್ಥಿತಿ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.</p><p>ಮುನ್ನೆಚ್ಚರಿಕೆ ಕ್ರಮಗಳ ಕುರಿತು ನದಿ ತೀರದ ಜನರಲ್ಲಿ ಜಾಗೃತಿ ಮೂಡಿಸಬೇಕು. ನದಿ ಪಾತ್ರಕ್ಕೆ ಬಟ್ಟೆ ತೊಳೆಯಲು, ದನ, ಕರುಗಳಿಗೆ ನದಿ ಹತ್ತಿರಕ್ಕೆ ಹೋಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p><p>ಸೊನ್ನಾ ಬ್ಯಾರೇಜ್ನ ಎಲ್ಲ ಕ್ರಸ್ಟ್ ಗೆಟ್ಗಳನ್ನು ಪರಿಶೀಲನೆ ನಡೆಸಿದ ಅವರು, ಭೀಮಾ ನದಿ ತೀರದಲ್ಲಿ ಪ್ರವಾಹಕ್ಕೊಳಗಾಗುವ ಗ್ರಾಮಗಳ ಮಾಹಿತಿ ಪಡೆದರು.</p><p>ಕಲಬುರ್ಗಿ ಜಿಲ್ಲಾ ಪಂಚಾಯಿತಿ ಸಿಇಒ ಬನ್ವರ್ ಸಿಂಗ್ ಮೀನಾ, ಆಲಮೇಲ ತಹಶೀಲ್ದಾರ್ ಸುರೇಶ್ ಚಾವಲರ, ಅಫಜಲಪುರ ತಹಶೀಲ್ದಾರ್ ಸಂಜೀವಕುಮಾರ ದಾಸರ, ಸಂತೋಷ ಸಜ್ಜನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>