ವಿಜಯಪುರ: ನಗರ ಸಮೀಪದ ಭೂತನಾಳ ತಾಂಡ ಕೇಂದ್ರಿತವಾಗಿ ಶನಿವಾರ ಮಧ್ಯಾಹ್ನ 2.17ಕ್ಕೆ ಲಘು ಭೂಕಂಪನ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 3.2 ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದೆ. ಭೂಮಿಯ 10 ಕಿ.ಮೀ. ಆಳದಲ್ಲಿಭೂಕಂಪನ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣ ಕೇಂದ್ರ ಖಚಿತ ಪಡಿಸಿದೆ.
ವಿಜಯಪುರ ನಗರ ಸೇರಿದಂತೆ ಸುತ್ತಮುತ್ತಲಿನಲ್ಲಿ ಭೂಮಿ ಕಂಪಿಸಿದ ಹಾಗೂ ಭೂಮಿಯೊಳಗಿನಿಂದ ಭಾರೀ ಪ್ರಮಾಣದ ಶಬ್ಧ ಕೇಳಿಬಂದಿತು. ಜನರು ಆತಂಕಕ್ಕೆ ಒಳಗಾಗಿದ್ದರು.