<p><strong>ತಿಕೋಟಾ</strong>: ಶತಮಾನದ ಸಂತ, ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ 85ನೇ ಜಯಂತ್ಯುತ್ಸವವನ್ನು ಅ.22ರ ದೀಪಾವಳಿ ಪಾಡ್ಯದಂದು ಪೂಜ್ಯರ ಜನ್ಮಸ್ಥಳ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲಾವರಣದಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ಸಿದ್ದೇಶ್ವರ ಶ್ರೀಗಳ ಜಯಂತ್ಯುತ್ಸವದ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ಪೂಜ್ಯರ ಪೂರ್ವಾಶ್ರಮದ ಮನೆಯಿಂದ ಕನ್ನಡ ಗಂಡು ಮಕ್ಕಳ ಶಾಲೆಯವರೆಗೆ ಪೂಜ್ಯರ ಚಿತ್ರವುಳ್ಳ ಎತ್ತಿನ ಬಂಡಿ ಮೆರವಣಿಗೆಯು ವಾದ್ಯ ಮೇಳ ಹಾಗೂ ಊರಿನ ಭಕ್ತ ಜನರೊಂದಿಗೆ ಒಡಗೂಡಿ ಸಾಗಲಿದೆ. ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ರಕ್ತದಾನ ಹಾಗೂ ಉಚಿತ ಚಿಕಿತ್ಸಾ ಶಿಬಿರವು ಪ್ರಾಥಮಿಕ ಅರೋಗ್ಯ ಕೇಂದ್ರ ಕನಮಡಿ ಹಾಗೂ ಜ್ಞಾನಯೋಗ ಲಯನ್ಸ್ ಕ್ಲಬ್ ಬೆಂಗಳೂರು ಸಹಯೋಗದಲ್ಲಿ ಜರುಗಲಿದೆ.</p>.<p>ಸಂಜೆ 4 ಗಂಟೆಗೆ ವೇದಿಕೆ ಕಾರ್ಯಕ್ರಮವು ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ, ತಿಕೋಟಾ ವಿರಕ್ತಮಠದ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಕೃಷ್ಣಾ ಕಿತ್ತೂರು ಗುರುದೇವಾಶ್ರಮದ ಬಸವೇಶ್ವರ ಸ್ವಾಮೀಜಿ,<br /> ಡಾ.ಶ್ರದ್ಧಾನಂದ ಸ್ವಾಮೀಜಿ, ಯತೀಶ್ವರಾನಂದ ಸ್ವಾಮೀಜಿ, ಬೀಳೂರು ವಿರಕ್ತಮಠದ ಚನ್ನಬಸವ ಗುರುಬಸವ ಸ್ವಾಮೀಜಿ ಹಾಗೂ ಕಾಖಂಡಕಿ ಗುರುದೇವಾಶ್ರಮದ ಶಿವಯೋಗೇಶ್ವರ ಸ್ವಾಮೀಜಿ ಮುಂತಾದ ಗುರುಗಳ ಸಾನಿಧ್ಯದಲ್ಲಿ ಜರಗುವುದು. 2025-26ನೇ ಸಾಲಿನಲ್ಲಿ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಕೋಟಾ</strong>: ಶತಮಾನದ ಸಂತ, ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ 85ನೇ ಜಯಂತ್ಯುತ್ಸವವನ್ನು ಅ.22ರ ದೀಪಾವಳಿ ಪಾಡ್ಯದಂದು ಪೂಜ್ಯರ ಜನ್ಮಸ್ಥಳ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲಾವರಣದಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ಸಿದ್ದೇಶ್ವರ ಶ್ರೀಗಳ ಜಯಂತ್ಯುತ್ಸವದ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ಪೂಜ್ಯರ ಪೂರ್ವಾಶ್ರಮದ ಮನೆಯಿಂದ ಕನ್ನಡ ಗಂಡು ಮಕ್ಕಳ ಶಾಲೆಯವರೆಗೆ ಪೂಜ್ಯರ ಚಿತ್ರವುಳ್ಳ ಎತ್ತಿನ ಬಂಡಿ ಮೆರವಣಿಗೆಯು ವಾದ್ಯ ಮೇಳ ಹಾಗೂ ಊರಿನ ಭಕ್ತ ಜನರೊಂದಿಗೆ ಒಡಗೂಡಿ ಸಾಗಲಿದೆ. ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ರಕ್ತದಾನ ಹಾಗೂ ಉಚಿತ ಚಿಕಿತ್ಸಾ ಶಿಬಿರವು ಪ್ರಾಥಮಿಕ ಅರೋಗ್ಯ ಕೇಂದ್ರ ಕನಮಡಿ ಹಾಗೂ ಜ್ಞಾನಯೋಗ ಲಯನ್ಸ್ ಕ್ಲಬ್ ಬೆಂಗಳೂರು ಸಹಯೋಗದಲ್ಲಿ ಜರುಗಲಿದೆ.</p>.<p>ಸಂಜೆ 4 ಗಂಟೆಗೆ ವೇದಿಕೆ ಕಾರ್ಯಕ್ರಮವು ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ, ತಿಕೋಟಾ ವಿರಕ್ತಮಠದ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಕೃಷ್ಣಾ ಕಿತ್ತೂರು ಗುರುದೇವಾಶ್ರಮದ ಬಸವೇಶ್ವರ ಸ್ವಾಮೀಜಿ,<br /> ಡಾ.ಶ್ರದ್ಧಾನಂದ ಸ್ವಾಮೀಜಿ, ಯತೀಶ್ವರಾನಂದ ಸ್ವಾಮೀಜಿ, ಬೀಳೂರು ವಿರಕ್ತಮಠದ ಚನ್ನಬಸವ ಗುರುಬಸವ ಸ್ವಾಮೀಜಿ ಹಾಗೂ ಕಾಖಂಡಕಿ ಗುರುದೇವಾಶ್ರಮದ ಶಿವಯೋಗೇಶ್ವರ ಸ್ವಾಮೀಜಿ ಮುಂತಾದ ಗುರುಗಳ ಸಾನಿಧ್ಯದಲ್ಲಿ ಜರಗುವುದು. 2025-26ನೇ ಸಾಲಿನಲ್ಲಿ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>