<p><strong>ವಿಜಯಪುರ:</strong> ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಗ್ಗಿದ್ದು, ಬಿಜೆಪಿಯವರು ಈಗ ಪ್ರವಾಸ ಕೈಗೊಂಡು ಏನು ವೀಕ್ಷಣೆ ಮಾಡುತ್ತಾರೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳು ವೈಮಾನಿಕ ಸಮೀಕ್ಷೆ ನಡೆಸಿದ ದಿನವೇ ಪರಿಹಾರವನ್ನೂ ಘೋಷಿಸಲಾಗಿದೆ. ಎನ್ ಡಿಆರ್ ಎಫ್ ಮಾರ್ಗಸೂಚಿಗಿಂತ ಹೆಚ್ಚುವರಿ ಪರಿಹಾರ ಸೇರಿ ಒಂದು ಹೆಕ್ಟೇರ್ಗೆ ಸುಮಾರು ₹17 ಸಾವಿರ ಪರಿಹಾರವನ್ನು ಘೋಷಿಸಲಾಗಿದೆ ಎಂದರು.</p>.<p>ಆಯಾ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಸಹ ಪರಿಸ್ಥಿತಿ ಅವಲೋಕಿಸಿದ್ದಾರೆ. ಈಗ ಪ್ರವಾಹ ತಗ್ಗಿದ್ದು, ಬಿಜೆಪಿಯವರು ಏನು ವೀಕ್ಷಣೆ ಮಾಡುತ್ತಾರೆ? ಇದು ರೈಲು ಹೋದ ನಂತರ ಟಿಕೆಟ್ ತೆಗೆಯಲು ಬರುವಂತಿದೆ ಎಂದು ವ್ಯಂಗ್ಯವಾಡಿದರು.</p>.<p>ಬಿಜೆಪಿಯಲ್ಲಿ ಆರ್.ಅಶೋಕ, ಬಿ.ವೈ.ವಿಜಯೇಂದ್ರ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ ಸೇರಿದಂತೆ 20 ಬಣಗಳು ಇವೆ. ಬಿಜೆಪಿಗೆ ಒಂದಲ್ಲ, ನೂರು ಬಾಗಿಲುಗಳು ಇವೆ. ನೆರೆ ಪ್ರದೇಶಗಳಿಗೆ ಯಾವ ಬಾಗಿಲಿನ ಬಿಜೆಪಿಯವರು ಬರುತ್ತಿದ್ದಾರೆ ಗೊತ್ತಿಲ್ಲ ಎಂದರು.</p>.<p>ಕೇಂದ್ರ ಸರ್ಕಾರದಿಂದ 14, 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಸುಮಾರು ₹60 ರಿಂದ ₹ 70 ಸಾವಿರ ಕೋಟಿ ಅನ್ಯಾಯವಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹5,800 ಕೋಟಿ ಅನುದಾನ ಘೋಷಿಸಿದ್ದರೂ ಇನ್ನೂ ಒಂದು ರೂಪಾಯಿ ಸಹ ಬಿಡುಗಡೆ ಮಾಡಿಲ್ಲ. ಹೀಗಾಗಿ ಬಿಜೆಪಿಯವರು ಮೊದಲು ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಿಸಲಿ ಎಂದರು.</p>.<p>ಎನ್ ಡಿಆರ್ ಎಫ್ ಮಾರ್ಗಸೂಚಿ ಪ್ರಕಾರ ಬೆಳೆ ಹಾನಿ ಪರಿಹಾರ ಬಹಳ ಕಡಿಮೆ ಇದೆ. ಒಣಬೇಸಾಯಕ್ಕೆ ಕೇವಲ ₹8,500 ನಿಗದಿಯಾಗಿದ್ದು, ಇದನ್ನು ₹20 ಸಾವಿರಕ್ಕೆ ಪರಿಷ್ಕರಣೆ ಮಾಡಿಸಲಿ. ಈ ನಿಟ್ಟಿನಲ್ಲಿ ಬಿಜೆಪಿಯವರು ದೆಹಲಿಗೆ ಹೋಗಲಿ. ಆದರೆ, ಅವರಿಗೆ ದೆಹಲಿಗೆ ಹೋಗುವ ತಾಕತ್ತು, ಧೈರ್ಯ ಇಲ್ಲ. ದೆಹಲಿಗೆ ಹೋಗಲು ಹೆದರಿಕೊಳ್ಳುತ್ತಾರೆ ಎಂದು ಕುಟುಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಗ್ಗಿದ್ದು, ಬಿಜೆಪಿಯವರು ಈಗ ಪ್ರವಾಸ ಕೈಗೊಂಡು ಏನು ವೀಕ್ಷಣೆ ಮಾಡುತ್ತಾರೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳು ವೈಮಾನಿಕ ಸಮೀಕ್ಷೆ ನಡೆಸಿದ ದಿನವೇ ಪರಿಹಾರವನ್ನೂ ಘೋಷಿಸಲಾಗಿದೆ. ಎನ್ ಡಿಆರ್ ಎಫ್ ಮಾರ್ಗಸೂಚಿಗಿಂತ ಹೆಚ್ಚುವರಿ ಪರಿಹಾರ ಸೇರಿ ಒಂದು ಹೆಕ್ಟೇರ್ಗೆ ಸುಮಾರು ₹17 ಸಾವಿರ ಪರಿಹಾರವನ್ನು ಘೋಷಿಸಲಾಗಿದೆ ಎಂದರು.</p>.<p>ಆಯಾ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಸಹ ಪರಿಸ್ಥಿತಿ ಅವಲೋಕಿಸಿದ್ದಾರೆ. ಈಗ ಪ್ರವಾಹ ತಗ್ಗಿದ್ದು, ಬಿಜೆಪಿಯವರು ಏನು ವೀಕ್ಷಣೆ ಮಾಡುತ್ತಾರೆ? ಇದು ರೈಲು ಹೋದ ನಂತರ ಟಿಕೆಟ್ ತೆಗೆಯಲು ಬರುವಂತಿದೆ ಎಂದು ವ್ಯಂಗ್ಯವಾಡಿದರು.</p>.<p>ಬಿಜೆಪಿಯಲ್ಲಿ ಆರ್.ಅಶೋಕ, ಬಿ.ವೈ.ವಿಜಯೇಂದ್ರ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ ಸೇರಿದಂತೆ 20 ಬಣಗಳು ಇವೆ. ಬಿಜೆಪಿಗೆ ಒಂದಲ್ಲ, ನೂರು ಬಾಗಿಲುಗಳು ಇವೆ. ನೆರೆ ಪ್ರದೇಶಗಳಿಗೆ ಯಾವ ಬಾಗಿಲಿನ ಬಿಜೆಪಿಯವರು ಬರುತ್ತಿದ್ದಾರೆ ಗೊತ್ತಿಲ್ಲ ಎಂದರು.</p>.<p>ಕೇಂದ್ರ ಸರ್ಕಾರದಿಂದ 14, 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಸುಮಾರು ₹60 ರಿಂದ ₹ 70 ಸಾವಿರ ಕೋಟಿ ಅನ್ಯಾಯವಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹5,800 ಕೋಟಿ ಅನುದಾನ ಘೋಷಿಸಿದ್ದರೂ ಇನ್ನೂ ಒಂದು ರೂಪಾಯಿ ಸಹ ಬಿಡುಗಡೆ ಮಾಡಿಲ್ಲ. ಹೀಗಾಗಿ ಬಿಜೆಪಿಯವರು ಮೊದಲು ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಿಸಲಿ ಎಂದರು.</p>.<p>ಎನ್ ಡಿಆರ್ ಎಫ್ ಮಾರ್ಗಸೂಚಿ ಪ್ರಕಾರ ಬೆಳೆ ಹಾನಿ ಪರಿಹಾರ ಬಹಳ ಕಡಿಮೆ ಇದೆ. ಒಣಬೇಸಾಯಕ್ಕೆ ಕೇವಲ ₹8,500 ನಿಗದಿಯಾಗಿದ್ದು, ಇದನ್ನು ₹20 ಸಾವಿರಕ್ಕೆ ಪರಿಷ್ಕರಣೆ ಮಾಡಿಸಲಿ. ಈ ನಿಟ್ಟಿನಲ್ಲಿ ಬಿಜೆಪಿಯವರು ದೆಹಲಿಗೆ ಹೋಗಲಿ. ಆದರೆ, ಅವರಿಗೆ ದೆಹಲಿಗೆ ಹೋಗುವ ತಾಕತ್ತು, ಧೈರ್ಯ ಇಲ್ಲ. ದೆಹಲಿಗೆ ಹೋಗಲು ಹೆದರಿಕೊಳ್ಳುತ್ತಾರೆ ಎಂದು ಕುಟುಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>