ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಬಿಜೆಪಿ ಜನಸ್ವರಾಜ್‌ ಸಮಾವೇಶ ಇಂದು

Last Updated 19 ನವೆಂಬರ್ 2021, 22:30 IST
ಅಕ್ಷರ ಗಾತ್ರ

ವಿಜಯಪುರ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಗರದ ದರ್ಬಾರ್‌ ಹೈಸ್ಕೂಲ್ ಮೈದಾನದಲ್ಲಿ ನ.20ರಂದು ಮಧ್ಯಾಹ್ನ 3ಕ್ಕೆ ಜನ ಸ್ವರಾಜ್‌ ಸಮಾವೇಶ ನಡೆಯಲಿದೆ.

ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮಲು, ಶಶಿಕಲಾ ಜೊಲ್ಲೆ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಶ್ವಿನಿ ಅನಂತಕುಮಾರ, ಸಂಸದ ರಮೇಶ ಜಿಗಣಗಿ, ಜಿಲ್ಲೆಯ ಎಲ್ಲ ಶಾಸಕರು ಸಮಾವೇಶದಲ್ಲಿ ಭಾಗಿಯಾಗವಹಿಸಲಿದ್ದಾರೆ ಎಂದುಬಿಜೆಪಿ ಜಿಲ್ಲಾಧ್ಯಕ್ಷರಾದ ಆರ್.ಎಸ್.ಪಾಟೀಲ ಕೂಚಬಾಳ ತಿಳಿಸಿದ್ದಾರೆ.

ವೇದಿಕೆ ಸಿದ್ಧತೆಶುಕ್ರವಾರ ಪರಿಶೀಲಿಸಿದ ಅವರು, ಸಮಾವೇಶದಲ್ಲಿ ಮೂರು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ.ವೇದಿಕೆಯ ಮೇಲೆ 30 ಜನ ಮುಖಂಡರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಸಮಾವೇಶದಲ್ಲಿ ಪಾಲ್ಗೊಳ್ಳುವವರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಗ್ರಾಮ ಪಂಚಾಯ್ತಿ ಸದಸ್ಯರು, ನಗರ ಸಭೆ, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ, ಸಾವಿರಾರು ಜನರು ಹಾಗೂ ಬಿಜೆಪಿ ಕಾರ್ಯಕರ್ತರು ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ, ಬಸವರಾಜ ಬಿರಾದಾರ, ಬಿಜೆಪಿ ಮುಖಂಡರಾದ ಗೂಳಪ್ಪ ಶಟಗಾರ, ಭೀಮಾಶಂಕರ ಹದನೂರ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗುರ, ವಿಜಯ ಜೋಶಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT