ಜಲ್ಲಿ ಕಲ್ಲು ಕ್ರಷರ್ ಘಟಕದ ಸಮೀಪದ ರಸ್ತೆಯಲ್ಲಿ ನಿಂತಿದ್ದ ಮೋಹನ್ ನಾಯ್ಕ(45) ಎಂಬುವವರು ಸ್ಫೋಟದಿಂದ ಸಾವಿಗೀಡಾಗಿದ್ದಾರೆ. ಗಾಯಗೊಂಡಿರುವ ಗಿರೀಶ್ ಹಳ್ಳಿ ಹಾಗೂ ಸಚಿನ್ ಹಳ್ಳಿ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆಸ್ಪತ್ರೆ ಆವರಣದಲ್ಲಿ ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.