<p><strong>ಮುದ್ದೇಬಿಹಾಳ:</strong> ‘ಆನೆಕಾಲು ರೋಗ ಇರುವವರಿಗೆ ಕಚ್ಚಿದ ಸೊಳ್ಳೆ, ಆರೋಗ್ಯವಂತರಿಗೆ ಕಚ್ಚಿದರೆ ರೋಗ ಹರಡುತ್ತದೆ. ಸೊಳ್ಳೆ ಕಚ್ಚಿ 5ರಿಂದ 7 ವರ್ಷಗಳವರೆಗೆ ಸೋಂಕಿರುವುದು ತಿಳಿಯುವುದಿಲ್ಲ’ ಎಂದು ಆರೋಗ್ಯ ನಿರೀಕ್ಷಕ ಎಂ.ಎಸ್. ಗೌಡರ ಹೇಳಿದರು.</p>.<p>ಪಟ್ಟಣದ ಮೇಲಿನ ಓಣಿಯಲ್ಲಿ ಮಂಗಳವಾರ ಆರೋಗ್ಯ ಇಲಾಖೆಯಿಂದ ಆನೆಕಾಲು ರೋಗ ಸಮೀಕ್ಷೆಯ ಅಂಗವಾಗಿ ರಕ್ತಲೇಪನ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಪರೀಕ್ಷೆಯಲ್ಲಿ ಸೋಂಕು ಪತ್ತೆಯಾದಲ್ಲಿ ಡಿಇಸಿ ಮಾತ್ರೆಗಳ ಮೂಲಕ ಅದನ್ನು ನಿಯಂತ್ರಿಸಬಹುದು. 101 ಜನರ ರಕ್ತ ಲೇಪನಗಳನ್ನು ಸಂಗ್ರಹಿಸಿದ್ದು, ಅವುಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ತಲುಪಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>‘ಜನವಸತಿ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು’ ಎಂದು ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಹೇಳಿದರು.</p>.<p>ಆರೋಗ್ಯ ಇಲಾಖೆಯ ಸಿಬ್ಬಂದಿ ಎಸ್.ಆರ್. ಸಜ್ಜನ, ಇಸ್ಮಾಯಿಲ್ ವಾಲೀಕಾರ, ಆಶಾ ಕಾರ್ಯಕರ್ತೆಯರಾದ ಅಕ್ಕಮ್ಮ ಸಂಗಾರೆಡ್ಡಿ, ಮಹಾಲಿಂಗಮ್ಮ ಕಡಿ, ಸಾವಿತ್ರಿ ಹಿರೇಮಠ, ನಸೀಮಾಬೇಗಂ ಯಕಿನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ:</strong> ‘ಆನೆಕಾಲು ರೋಗ ಇರುವವರಿಗೆ ಕಚ್ಚಿದ ಸೊಳ್ಳೆ, ಆರೋಗ್ಯವಂತರಿಗೆ ಕಚ್ಚಿದರೆ ರೋಗ ಹರಡುತ್ತದೆ. ಸೊಳ್ಳೆ ಕಚ್ಚಿ 5ರಿಂದ 7 ವರ್ಷಗಳವರೆಗೆ ಸೋಂಕಿರುವುದು ತಿಳಿಯುವುದಿಲ್ಲ’ ಎಂದು ಆರೋಗ್ಯ ನಿರೀಕ್ಷಕ ಎಂ.ಎಸ್. ಗೌಡರ ಹೇಳಿದರು.</p>.<p>ಪಟ್ಟಣದ ಮೇಲಿನ ಓಣಿಯಲ್ಲಿ ಮಂಗಳವಾರ ಆರೋಗ್ಯ ಇಲಾಖೆಯಿಂದ ಆನೆಕಾಲು ರೋಗ ಸಮೀಕ್ಷೆಯ ಅಂಗವಾಗಿ ರಕ್ತಲೇಪನ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಪರೀಕ್ಷೆಯಲ್ಲಿ ಸೋಂಕು ಪತ್ತೆಯಾದಲ್ಲಿ ಡಿಇಸಿ ಮಾತ್ರೆಗಳ ಮೂಲಕ ಅದನ್ನು ನಿಯಂತ್ರಿಸಬಹುದು. 101 ಜನರ ರಕ್ತ ಲೇಪನಗಳನ್ನು ಸಂಗ್ರಹಿಸಿದ್ದು, ಅವುಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ತಲುಪಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>‘ಜನವಸತಿ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು’ ಎಂದು ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಹೇಳಿದರು.</p>.<p>ಆರೋಗ್ಯ ಇಲಾಖೆಯ ಸಿಬ್ಬಂದಿ ಎಸ್.ಆರ್. ಸಜ್ಜನ, ಇಸ್ಮಾಯಿಲ್ ವಾಲೀಕಾರ, ಆಶಾ ಕಾರ್ಯಕರ್ತೆಯರಾದ ಅಕ್ಕಮ್ಮ ಸಂಗಾರೆಡ್ಡಿ, ಮಹಾಲಿಂಗಮ್ಮ ಕಡಿ, ಸಾವಿತ್ರಿ ಹಿರೇಮಠ, ನಸೀಮಾಬೇಗಂ ಯಕಿನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>