ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲಂಬೊ ಬಾಂಬ್‌ ಸ್ಫೋಟ; ಅಧಿಕೃತ ಮಾಹಿತಿಯಿಲ್ಲ: ಸಚಿವ ಎಂ.ಬಿ.ಪಾಟೀಲ

Last Updated 22 ಏಪ್ರಿಲ್ 2019, 12:30 IST
ಅಕ್ಷರ ಗಾತ್ರ

ವಿಜಯಪುರ:‘ಕೊಲಂಬೊದಲ್ಲಿ ನಡೆದ ಬಾಂಬ್‌ ಸ್ಫೋಟದಲ್ಲಿ ರಾಜ್ಯದ ನಾಗರಿಕರು ಮೃತಪಟ್ಟಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಸ್ಪಷ್ಟಪಡಿಸಿದರು.

‘ಇದು ಸೂಕ್ಷ್ಮ ವಿಚಾರ. ಹನುಮಂತರಾಯಪ್ಪ, ಎಂ.ರಂಗಪ್ಪ, ಲಕ್ಷ್ಮೀನಾರಾಯಣ, ಚಂದ್ರಶೇಖರ, ರಮೇಶ ಇನ್ನಿತರರ ಬಗ್ಗೆ ಸ್ಪಷ್ಟವಾದ ಮಾಹಿತಿ ಲಭ್ಯವಾಗುತ್ತಿಲ್ಲ. ನಿರಂತರವಾಗಿ ವಿದೇಶಾಂಗ ಸಚಿವಾಲಯದ ಸಂಪರ್ಕದಲ್ಲಿದ್ದೇವೆ’ ಎಂದು ಸೋಮವಾರ ಪತ್ರಕರ್ತರಿಗೆ ತಿಳಿಸಿದರು.

‘ಎಲ್ಲ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ. ಬೆಂಗಳೂರಿನ ದಾಸರಹಳ್ಳಿಯ ಏಳು ಜನರಿರುವ ಬಗ್ಗೆಯೂ ಮಾಹಿತಿಯಿದೆ. ಆದರೆ ಈ ವಿಷಯವನ್ನು ವಿದೇಶಾಂಗ ಇಲಾಖೆ ದೃಢಪಡಿಸಿಲ್ಲ. ಅಧಿಕೃತ ಮಾಹಿತಿ ದೊರೆಯುತ್ತಿದ್ದಂತೆ ತಿಳಿಸುತ್ತೇವೆ’ ಎಂದು ಹೇಳಿದರು.

‘ಬಾಂಬ್ ಸ್ಫೋಟ ಪ್ರಕರಣ ಖಂಡನೀಯ. ನಾಗರಿಕರನ್ನು ಕೇಂದ್ರವಾಗಿರಿಸಿಕೊಂಡು, ದಾಳಿ ನಡೆಸಿ ಅಮಾಯಕರ ಪ್ರಾಣ ತೆಗೆದಿರುವುದು ಅತ್ಯಂತ ಹೇಯ ಕೃತ್ಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT