ನಾಲತವಾಡದ ಶ್ರೀ ಶರಣ ವಿರೇಶ್ವರ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮುದ್ದೇಬಿಹಾಳ ವಿಧಾನ ಸಭಾ ಮತಕ್ಷೇತ್ರದ ಬೇರೆ ಬೇರೆ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರೂ ಆದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಜಲ ಸಚಿವರಾದ ಗೋವಿಂದ ಎಂ ಕಾರಜೋಳ, ಬಿ. ಶ್ರೀರಾಮುಲು, ವಿ. ಸೋಮಣ್ಣ, ಡಾ. ಅಶ್ವತ್ಥನಾರಾಯಣ ಸಿ.ಎನ್, ಆನಂದ ಸಿಂಗ್, ಕೋಟಾ ಶ್ರೀನಿವಾಸ ಪೂಜಾರಿ, ಬೈರತಿ ಬಸವರಾಜ,ಡಾ. ಕೆ.ಸುಧಾಕರ್, ಶಶಿಕಲಾ ಜೊಲ್ಲೆ, ಎಂ.ಟಿ.ಬಿ ನಾಗರಾಜ್ , ಡಾ.ನಾರಾಯಣ ಗೌಡ, ಬಿ.ಸಿ. ನಾಗೇಶ, ವಿ.ಸುನಿಲ್ಕುಮಾರ್, ಜಿ.ಸಿ.ಮಾಧುಸ್ವಾಮಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.