ಮಹಿಳಾ ವಿವಿ ಕುಲಸಚಿವೆ ಪ್ರೊ.ಆರ್.ಸುನಂದಮ್ಮ ಮಾತನಾಡಿ, ‘ಮೊದಲು ಅಕ್ಷರಗಳನ್ನು ಜೋಡಿಸುವ ಕಲೆಯನ್ನು ರೂಢಿಸಿಕೊಳ್ಳಬೇಕು, ಆಗ ಒಂದು ವಾಕ್ಯವನ್ನು ರಚಿಸಲು ಸಾಧ್ಯವಾಗುತ್ತದೆ. ಸವಲತ್ತುಗಳು ಸಿಕ್ಕಾಗ ಅನುಭವಿಸಿ, ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಬಳಸಿಕೊಳ್ಳದಿದ್ದರೆ ಮೂರ್ಖರಾಗುತ್ತೇವೆ. ಬದುಕನ್ನು ಕಟ್ಟಿಕೊಡುವುದು ನಮ್ಮ ಕಾಯಕ. ಆದ್ದರಿಂದ ನಾವು ನಿರಂತರ ಕಾಯಕದಲ್ಲಿ ತೊಡಗಬೇಕು’ ಎಂದು ಕಿವಿಮಾತು ಹೇಳಿದರು.