<p><strong>ಸಿಂದಗಿ:</strong> ಪಟ್ಟಣದ ಸಾರಂಗಮಠದಲ್ಲಿ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಸದ್ವಿಚಾರಗೋಷ್ಠಿ-328 ಕಾರ್ಯಕ್ರಮದಲ್ಲಿ ಮಹಾದೇವಿ ಹಿರೇಮಠ ರಚಿತ ಸ್ವಾನುಭವ ವಚನ ಸಂಕಲನ ಕೃತಿ ಬಿಡುಗಡೆ ಮಾಡಲಾಯಿತು.</p>.<p>ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಕೃತಿ ಬಿಡುಗಡೆ ಮಾಡಿದರು. ಕೊಟ್ಟೂರು-ಡೋಣೂರ ಕಟ್ಟಿಮನಿ ಹಿರೇಮಠದ ಪೀಠಾಧ್ಯಕ್ಷ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಸ್ವಾನುಭವ ವಿಷಯದ ಕುರಿತು ಉಪನ್ಯಾಸ ನೀಡಿದರು.</p>.<p>ಲೇಖಕಿ ಮಹಾದೇವಿ ಹಿರೇಮಠ, ಪ್ರತಿಷ್ಠಾನದ ಸಂಚಾಲಕ ವಿ.ಡಿ.ವಸ್ತ್ರದ ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ನೂತನ ಅಧ್ಯಕ್ಷ ಚನ್ನಪ್ಪ ಕಟ್ಟಿ, ಕರ್ನಾಟಕ ಜಾನಪದ ಅಕಾಡೆಮಿ ನೂತನ ಸದಸ್ಯ ಎಂ.ಎಂ.ಪಡಶೆಟ್ಟಿ ಹಾಗೂ ಲೇಖಕಿ ಮಹಾದೇವಿ ಹಿರೇಮಠ ಅವರನ್ನು ಪ್ರಭು ಸಾರಂಗದೇವ ಶಿವಾಚಾರ್ಯರು ಗೌರವಿಸಿದರು.</p>.<p>ಮಕ್ಕಳ ಸಾಹಿತಿ ಹ.ಮ.ಪೂಜಾರ ಮತ್ತು ವರ್ತಕ ಮಹಾದೇವಪ್ಪ ಮುಂಡೇವಾಡಗಿ ಅವರಿಂದ ಸಮಸ್ತ ಭಕ್ತರಿಗೆ ದಾಸೋಹ ಸೇವೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ಪಟ್ಟಣದ ಸಾರಂಗಮಠದಲ್ಲಿ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಸದ್ವಿಚಾರಗೋಷ್ಠಿ-328 ಕಾರ್ಯಕ್ರಮದಲ್ಲಿ ಮಹಾದೇವಿ ಹಿರೇಮಠ ರಚಿತ ಸ್ವಾನುಭವ ವಚನ ಸಂಕಲನ ಕೃತಿ ಬಿಡುಗಡೆ ಮಾಡಲಾಯಿತು.</p>.<p>ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಕೃತಿ ಬಿಡುಗಡೆ ಮಾಡಿದರು. ಕೊಟ್ಟೂರು-ಡೋಣೂರ ಕಟ್ಟಿಮನಿ ಹಿರೇಮಠದ ಪೀಠಾಧ್ಯಕ್ಷ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಸ್ವಾನುಭವ ವಿಷಯದ ಕುರಿತು ಉಪನ್ಯಾಸ ನೀಡಿದರು.</p>.<p>ಲೇಖಕಿ ಮಹಾದೇವಿ ಹಿರೇಮಠ, ಪ್ರತಿಷ್ಠಾನದ ಸಂಚಾಲಕ ವಿ.ಡಿ.ವಸ್ತ್ರದ ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ನೂತನ ಅಧ್ಯಕ್ಷ ಚನ್ನಪ್ಪ ಕಟ್ಟಿ, ಕರ್ನಾಟಕ ಜಾನಪದ ಅಕಾಡೆಮಿ ನೂತನ ಸದಸ್ಯ ಎಂ.ಎಂ.ಪಡಶೆಟ್ಟಿ ಹಾಗೂ ಲೇಖಕಿ ಮಹಾದೇವಿ ಹಿರೇಮಠ ಅವರನ್ನು ಪ್ರಭು ಸಾರಂಗದೇವ ಶಿವಾಚಾರ್ಯರು ಗೌರವಿಸಿದರು.</p>.<p>ಮಕ್ಕಳ ಸಾಹಿತಿ ಹ.ಮ.ಪೂಜಾರ ಮತ್ತು ವರ್ತಕ ಮಹಾದೇವಪ್ಪ ಮುಂಡೇವಾಡಗಿ ಅವರಿಂದ ಸಮಸ್ತ ಭಕ್ತರಿಗೆ ದಾಸೋಹ ಸೇವೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>