<p><strong>ವಿಜಯಪುರ</strong>: ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದ ಲಕ್ಷಕ್ಕೂ ಅಧಿಕ ಮನೆಗಳಲ್ಲಿ ಮನೆಗೊಂದು ಗ್ರಂಥಾಲಯ ಅನುಷ್ಠಾನಗೊಳಿಸುವ ಗುರಿ ಹೊಂದಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಹೇಳಿದರು.</p>.<p>ನಗರದ ಸುಕೂನ್ ಬಡಾವಣೆಯ ಲೇಖಕ ರಾಮಕುಮಾರ ಅವರ ಮನೆಯಲ್ಲಿ ಬುಧವಾರ ‘ಮನೆಗೊಂದು ಗ್ರಂಥಾಲಯ’ದ ಅನುಷ್ಠಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಪುಸ್ತಕಗಳು ಮಾನವ ಜನಾಂಗದ ಆಸ್ತಿಯಾಗಬೇಕು. ಪ್ರತಿ ಮನೆಯಲ್ಲಿ ದೇವರ ಪೂಜಾ ಕೋಣೆ ಇರುವಂತೆ ಮನೆಗೊಂದು ಗ್ರಂಥಾಲಯವಿದ್ದರೆ ಆ ಮನೆ ಜ್ಞಾನದ ಸಂಪತ್ತಿನಿಂದ ಕೂಡುತ್ತದೆ. ಯುವ ಜನಾಂಗಕ್ಕೆ ದಾರಿದೀಪವಾಗುತ್ತದೆ. ಪುಸ್ತಕ ಓದುವ ಹವ್ಯಾಸ ಎಲ್ಲರೂ ಬೆಳೆಸಿಕೊಳ್ಳಬೇಕು’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ‘ವಿಜಯಪುರ ಜಿಲ್ಲೆ ಸಾಹಿತ್ಯ ಕ್ಷೇತ್ರದ ತವರೂರು. ಅಣ್ಣ ಬಸವಣ್ಣ ತನ್ನ ಜ್ಞಾನದಿಂದ ಜಗತ್ತಿಗೆ ಬೆಳಕನ್ನು ನೀಡಿದ್ದಾರೆ. ಹಲಸಂಗಿ ಗೆಳೆಯರ ಬಳಗದವರು ಜಾನಪದ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ’ ಎಂದು ಹೇಳಿದರು.</p>.<p>ಕನ್ನಡ ಪುಸ್ತಕ ಪ್ರಾಧಿಕಾರದ ಜಿಲ್ಲಾ ಸಮಿತಿಯ ಸದಸ್ಯ ಎ.ಎಚ್. ಕೊಳಮಲಿ ಮಾತನಾಡಿ, ‘ಪುಸ್ತಕಗಳ ಓದುನಿಂದ ಬೌದ್ಧಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಯಾಗುತ್ತದೆ’ ಎಂದು ಹೇಳಿದರು.</p>.<p>ಸಂಚಾಲಕ ಶಂಕರ ಬೈಚಬಾಳ, ಪ್ರಾಧಿಕಾರದ ಶ್ರೀನಿವಾಸ ಕರಿಯಪ್ಪ, ಶ್ರೀರಾಮಕುಮಾರ, ರವಿಕುಮಾರ, ಲಕ್ಷ್ಮಣ ಲಮಾಣಿ, ರಾಜಶೇಖರ ಕೌಲಗಿ, ಸಿದ್ದರಾಮ ಬಿರಾದಾರ, ರಾವಸಾಬ್ ಬಿರಾದಾರ, ಡಿ. ಜೋಸೆಫ್, ಸಿದ್ದಣ್ಣ ಸಾತಲಗಾಂವ, ಟಿ.ಆರ್. ಹಾವಿನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದ ಲಕ್ಷಕ್ಕೂ ಅಧಿಕ ಮನೆಗಳಲ್ಲಿ ಮನೆಗೊಂದು ಗ್ರಂಥಾಲಯ ಅನುಷ್ಠಾನಗೊಳಿಸುವ ಗುರಿ ಹೊಂದಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಹೇಳಿದರು.</p>.<p>ನಗರದ ಸುಕೂನ್ ಬಡಾವಣೆಯ ಲೇಖಕ ರಾಮಕುಮಾರ ಅವರ ಮನೆಯಲ್ಲಿ ಬುಧವಾರ ‘ಮನೆಗೊಂದು ಗ್ರಂಥಾಲಯ’ದ ಅನುಷ್ಠಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಪುಸ್ತಕಗಳು ಮಾನವ ಜನಾಂಗದ ಆಸ್ತಿಯಾಗಬೇಕು. ಪ್ರತಿ ಮನೆಯಲ್ಲಿ ದೇವರ ಪೂಜಾ ಕೋಣೆ ಇರುವಂತೆ ಮನೆಗೊಂದು ಗ್ರಂಥಾಲಯವಿದ್ದರೆ ಆ ಮನೆ ಜ್ಞಾನದ ಸಂಪತ್ತಿನಿಂದ ಕೂಡುತ್ತದೆ. ಯುವ ಜನಾಂಗಕ್ಕೆ ದಾರಿದೀಪವಾಗುತ್ತದೆ. ಪುಸ್ತಕ ಓದುವ ಹವ್ಯಾಸ ಎಲ್ಲರೂ ಬೆಳೆಸಿಕೊಳ್ಳಬೇಕು’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ‘ವಿಜಯಪುರ ಜಿಲ್ಲೆ ಸಾಹಿತ್ಯ ಕ್ಷೇತ್ರದ ತವರೂರು. ಅಣ್ಣ ಬಸವಣ್ಣ ತನ್ನ ಜ್ಞಾನದಿಂದ ಜಗತ್ತಿಗೆ ಬೆಳಕನ್ನು ನೀಡಿದ್ದಾರೆ. ಹಲಸಂಗಿ ಗೆಳೆಯರ ಬಳಗದವರು ಜಾನಪದ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ’ ಎಂದು ಹೇಳಿದರು.</p>.<p>ಕನ್ನಡ ಪುಸ್ತಕ ಪ್ರಾಧಿಕಾರದ ಜಿಲ್ಲಾ ಸಮಿತಿಯ ಸದಸ್ಯ ಎ.ಎಚ್. ಕೊಳಮಲಿ ಮಾತನಾಡಿ, ‘ಪುಸ್ತಕಗಳ ಓದುನಿಂದ ಬೌದ್ಧಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಯಾಗುತ್ತದೆ’ ಎಂದು ಹೇಳಿದರು.</p>.<p>ಸಂಚಾಲಕ ಶಂಕರ ಬೈಚಬಾಳ, ಪ್ರಾಧಿಕಾರದ ಶ್ರೀನಿವಾಸ ಕರಿಯಪ್ಪ, ಶ್ರೀರಾಮಕುಮಾರ, ರವಿಕುಮಾರ, ಲಕ್ಷ್ಮಣ ಲಮಾಣಿ, ರಾಜಶೇಖರ ಕೌಲಗಿ, ಸಿದ್ದರಾಮ ಬಿರಾದಾರ, ರಾವಸಾಬ್ ಬಿರಾದಾರ, ಡಿ. ಜೋಸೆಫ್, ಸಿದ್ದಣ್ಣ ಸಾತಲಗಾಂವ, ಟಿ.ಆರ್. ಹಾವಿನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>