ಅಂದು ಸಹ ಮಕ್ಕಳ ರಕ್ಷಣೆಗೆ ವಾರಾನುಗಟ್ಟಲೇ ಜಿಲ್ಲಾಡಳಿತದ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದ್ದರೂ ಮಕ್ಕಳನ್ನು ಜೀವಂತವಾಗಿ ಹೊರ ತರಲು ಸಾಧ್ಯವಾಗಿರಲಿಲ್ಲ.
ಜಾಗೃತಿ: ತೆರೆದ ಕೊಳವೆಬಾವಿಗಳಿಗೆ ಮಕ್ಕಳು ಬಿದ್ದು ದುರಂತ ಸಂಭವಿಸಿದ ಬಳಿಕ ಜಿಲ್ಲಾಡಳಿತ ಜನರಲ್ಲಿ ಈ ಕುರಿತು ಸಾಕಷ್ಟು ಜಾಗೃತಿ ಮೂಡಿಸಿತ್ತು. ನೀರು ಬರದೇ ವಿಫಲವಾಗಿರುವ ಕೊಳವೆಬಾವಿಗಳನ್ನು ಕಡ್ಡಾಯವಾಗಿ ಮುಚ್ಚಬೇಕು, ತೆರೆದಿಡುವಂತಿಲ್ಲ. ಒಂದು ವೇಳೆ ತೆರೆದಿಟ್ಟರೆ ಅಂತವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು. ಇಷ್ಟಾದರೂ ಜನ ಮತ್ತು ಅಧಿಕಾರಿಗಳು ಮೈಮರೆತಿರುವ ಪರಿಣಾಮ ಮತ್ತೆ ದುರಂತವೊಂದು ಸಂಭವಿಸಿದೆ.