<p><strong>ವಿಜಯಪುರ</strong>: ತಿಕೋಟಾ ತಾಲ್ಲೂಕಿನ ಬಾಬಾನಗರ ಗ್ರಾಮದಲ್ಲಿ ಬುಧವಾರ ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ವಿದ್ಯುತ್ ತಂತಿ ತಗುಲಿ ಸಹೋದರರಿಬ್ಬರು ಸಾವಿಗೀಡಾಗಿದ್ದಾರೆ.</p><p>ಶ್ರೀಕಾಂತ ದುಂಡಪ್ಪ ವಿಜಾಪುರ (29), ರಾಜಕುಮಾರ ದುಂಡಪ್ಪ ವಿಜಾಪುರ (31) ಸಾವಿಗೀಡಾದ ದುರ್ದೈವಿಗಳು. </p><p>ತೋಟದಲ್ಲಿ ಟಿಸಿಯಿಂದ ಕೊಳವೆಬಾವಿಗೆ ವಿದ್ಯುತ್ ಪೂರೈಸಲು ಎಳೆಯಲಾಗಿದ್ದ ತಂತಿ ತುಂಡಾಗಿ ದ್ರಾಕ್ಷಿ ಪಡದ ಕಬ್ಬಿಣದ ಆ್ಯಂಗಲ್ ಗೆ ವಿದ್ಯುತ್ ಪ್ರವಹಿಸಿದೆ.</p><p>ವಿದ್ಯುತ್ ತಗುಲಿ ಶ್ರೀಕಾಂತ ಕೆಳಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ಅಣ್ಣ ರಾಜಕುಮಾರ ತಮ್ಮನನ್ನು ರಕ್ಷಿಸಲು ಹೋದಾಗ ವಿದ್ಯುತ್ ತಗುಲಿ ಸಹೋದದರಿಬ್ಬರು ಸ್ಥಳದಲ್ಲೆ ಸಾವಿಗಿಡಾಗಿದ್ದಾರೆ ಎಂದು ತಿಕೋಟಾ ಪೋಲಿಸರು "ಪ್ರಜಾವಾಣಿ" ಗೆ ಮಾಹಿತಿ ನೀಡಿದರು.</p><p>ಬಾಬಾನಗರ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.</p><p>ಸ್ಥಳಕ್ಕೆ ತಿಕೋಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ತಿಕೋಟಾ ತಾಲ್ಲೂಕಿನ ಬಾಬಾನಗರ ಗ್ರಾಮದಲ್ಲಿ ಬುಧವಾರ ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ವಿದ್ಯುತ್ ತಂತಿ ತಗುಲಿ ಸಹೋದರರಿಬ್ಬರು ಸಾವಿಗೀಡಾಗಿದ್ದಾರೆ.</p><p>ಶ್ರೀಕಾಂತ ದುಂಡಪ್ಪ ವಿಜಾಪುರ (29), ರಾಜಕುಮಾರ ದುಂಡಪ್ಪ ವಿಜಾಪುರ (31) ಸಾವಿಗೀಡಾದ ದುರ್ದೈವಿಗಳು. </p><p>ತೋಟದಲ್ಲಿ ಟಿಸಿಯಿಂದ ಕೊಳವೆಬಾವಿಗೆ ವಿದ್ಯುತ್ ಪೂರೈಸಲು ಎಳೆಯಲಾಗಿದ್ದ ತಂತಿ ತುಂಡಾಗಿ ದ್ರಾಕ್ಷಿ ಪಡದ ಕಬ್ಬಿಣದ ಆ್ಯಂಗಲ್ ಗೆ ವಿದ್ಯುತ್ ಪ್ರವಹಿಸಿದೆ.</p><p>ವಿದ್ಯುತ್ ತಗುಲಿ ಶ್ರೀಕಾಂತ ಕೆಳಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ಅಣ್ಣ ರಾಜಕುಮಾರ ತಮ್ಮನನ್ನು ರಕ್ಷಿಸಲು ಹೋದಾಗ ವಿದ್ಯುತ್ ತಗುಲಿ ಸಹೋದದರಿಬ್ಬರು ಸ್ಥಳದಲ್ಲೆ ಸಾವಿಗಿಡಾಗಿದ್ದಾರೆ ಎಂದು ತಿಕೋಟಾ ಪೋಲಿಸರು "ಪ್ರಜಾವಾಣಿ" ಗೆ ಮಾಹಿತಿ ನೀಡಿದರು.</p><p>ಬಾಬಾನಗರ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.</p><p>ಸ್ಥಳಕ್ಕೆ ತಿಕೋಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>