<p><strong>ಇಂಡಿ:</strong> ತಾಲ್ಲೂಕಿನ ಬರಗುಡಿಯಿಂದ ಲಚ್ಯಾಣ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ನೀರಿನ ಟ್ಯಾಂಕ್ ಹತ್ತಿರದ ಪಕ್ಕದ ಹೊಲದಲ್ಲಿ ಸಿದ್ರಾಮ ದೊಂಡಿಬಾ ಕ್ಷತ್ರಿ (31) ಎಂಬುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕತ್ತು ಸೀಳಿ ಕೊಲೆ ಮಾಡಿದ್ದಾರೆ.</p><p>ಆರೋಪಿಗಳಾದ ಅದೇ ಗ್ರಾಮದ ಲಾಲ್ಯಾ ಅಲಿಯಾಸ್ ರಜನಿಕಾಂತ ಗಿರಣಿವಡ್ಡರ, ಪರಸು ದಶರಥ ಕ್ಷತ್ರಿ, ಸರ್ಜನ ಸಿದ್ದಾರಾಮ ಕ್ಷತ್ರಿ, ಕಾಂತಪ್ಪ ಗಜಪ್ಪ ಕ್ಷತ್ರಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.<br> ಆರೋಪಿಗಳು ಮತ್ತು ಕೊಲೆಯಾದ ವ್ಯಕ್ತಿ ಪರಸ್ಪರ ಸಂಬಂಧಿಗಳಾಗಿದ್ದಾರೆ. ಹಳೇ ವೈಷಮ್ಯದಿಂದ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.</p><p>ಮಾರಕಾಸ್ತ್ರಗಳಿಂದ ಹೊಡೆದು ಶನಿವಾರ ರಾತ್ರಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಡಿವೈಎಸ್ಪಿ ಸದಾಶಿವ ಕಟ್ಟಿಮನಿ, ಪಿಎಸ್ಐ ರಾಜು ಮಮದಾಪುರ ಭೇಟಿ ನೀಡಿ ಪರಿಶೀಲಿಸಿದರು. ಇಂಡಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ:</strong> ತಾಲ್ಲೂಕಿನ ಬರಗುಡಿಯಿಂದ ಲಚ್ಯಾಣ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ನೀರಿನ ಟ್ಯಾಂಕ್ ಹತ್ತಿರದ ಪಕ್ಕದ ಹೊಲದಲ್ಲಿ ಸಿದ್ರಾಮ ದೊಂಡಿಬಾ ಕ್ಷತ್ರಿ (31) ಎಂಬುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕತ್ತು ಸೀಳಿ ಕೊಲೆ ಮಾಡಿದ್ದಾರೆ.</p><p>ಆರೋಪಿಗಳಾದ ಅದೇ ಗ್ರಾಮದ ಲಾಲ್ಯಾ ಅಲಿಯಾಸ್ ರಜನಿಕಾಂತ ಗಿರಣಿವಡ್ಡರ, ಪರಸು ದಶರಥ ಕ್ಷತ್ರಿ, ಸರ್ಜನ ಸಿದ್ದಾರಾಮ ಕ್ಷತ್ರಿ, ಕಾಂತಪ್ಪ ಗಜಪ್ಪ ಕ್ಷತ್ರಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.<br> ಆರೋಪಿಗಳು ಮತ್ತು ಕೊಲೆಯಾದ ವ್ಯಕ್ತಿ ಪರಸ್ಪರ ಸಂಬಂಧಿಗಳಾಗಿದ್ದಾರೆ. ಹಳೇ ವೈಷಮ್ಯದಿಂದ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.</p><p>ಮಾರಕಾಸ್ತ್ರಗಳಿಂದ ಹೊಡೆದು ಶನಿವಾರ ರಾತ್ರಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಡಿವೈಎಸ್ಪಿ ಸದಾಶಿವ ಕಟ್ಟಿಮನಿ, ಪಿಎಸ್ಐ ರಾಜು ಮಮದಾಪುರ ಭೇಟಿ ನೀಡಿ ಪರಿಶೀಲಿಸಿದರು. ಇಂಡಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>