ಬಿ.ಎಸ್.ಯಡಿಯೂರಪ್ಪ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ: ಗೋವಿಂದ ಕಾರಜೋಳ

ವಿಜಯಪುರ: ಮುಖ್ಯಮಂತ್ರಿ ಬದಲಾವಣೆ ಎಂಬುದು ಗಾಳಿ ಸುದ್ದಿ, ಮಾಧ್ಯಮಗಳ ಸೃಷ್ಟಿ. ಬಿ.ಎಸ್.ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ನಿರ್ದೇಶನಕಕ್ಕಾಗಿ ಕಾಯುತ್ತಿದ್ದೇವೆ. ಶೀಘ್ರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದರು.
ಬೇರೆ ಪಕ್ಷಗಳನ್ನು ತೊರೆದು ಬಿಜೆಪಿಗೆ ಬಂದಿರುವ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕು. ಖಂಡಿತಾ ಸಿಗಲಿದೆ ಎಂದು ಹೇಳಿದರು.
ಇದನ್ನೂ ಓದಿ: ಬಗೆಹರಿಯದ ಸಂಪುಟ ಕಗ್ಗಂಟು
ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರ್ಪಡೆಗೂಳಿಸುವ ಮುನ್ನ ಕಾನೂನು ಮತ್ತು ಸಂವಿಧಾನಾತ್ಮಕ ಚೌಕಟ್ಟಿನಲ್ಲಿ ಚರ್ಚಿಸಿ, ಅಡ್ವಕೇಟ್ ಜನರಲ್ ಅಭಿಪ್ರಾಯ ಪಡೆದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
'ನಾಗಠಾಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಕಾರಜೋಳ ತಡೆಯೊಡ್ಡಿದ್ದಾರೆ. ಅನುದಾನ ತಡೆಹಿಡಿದಿದ್ದಾರೆ. ನನಗೆ ಜೀವ ಬೆದರಿಕೆ ಇದೆ' ಎಂಬ ಶಾಸಕ ದೇವಾನಂದ ಚವ್ಹಾಣ ಅವರ ಆರೋಪವನ್ನು ಸುಳ್ಳು ಎಂದ ಕಾರಜೋಳ, ನಮ್ಮ ಸರ್ಕಾರದಲ್ಲಿ ಪ್ರತಿಯೊಬ್ಬ ಶಾಸಕರಿಗೂ ರಕ್ಷಣೆ ಇದೆ. ನಾಗಠಾಣ ಶಾಸಕರು ಭ್ರಮೆಯಲ್ಲಿದ್ದಾರೆ. ಜನರಿಂದ ಅವರು ದೂರವಾಗಿದ್ದಾರೆ. ಜನ ಅವರನ್ನು ಒಪ್ಪುತ್ತಿಲ್ಲ. ಹೀಗಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಪಿ.ರಾಜು, ಸಂಸದ ರಮೇಶ್ ಜಿಗಜಿಣಗಿ, ಮುಖಂಡರಾದ ವಿಜುಗೌಡ ಪಾಟೀಲ, ಆರ್.ಎಸ್.ಪಾಟೀಲ ಕೂಚಬಾಳ, ಎಸ್.ಕೆ.ಬೆಳ್ಳುಬ್ಬಿ ಮತ್ತಿತರರು ಇದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.