<p><strong>ವಿಜಯಪುರ:</strong> ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ನಾಲ್ಕನೇ ದಿನ ಪೂರೈಸಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.</p>.<p>ಸಾರಿಗೆ ಬಸ್ಗಳ ಸಂಚಾರವನ್ನು ಆರಂಭಿಸಲು ಅಧಿಕಾರಿಗಳು ಪರ್ಯಾಯ ಮಾರ್ಗಗಳ ಮೊರೆ ಹೋದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ನಿವೃತ್ತ ಚಾಲಕ, ನಿರ್ವಾಹಕರಿಗೆ ಕರೆ ಪತ್ರ ನೀಡಿದರೂ ಇದುವರೆಗೂ ಯಾರೊಬ್ಬರೂ ಕೆಲಸಕ್ಕೆ ಹಾಜರಾಗಿಲ್ಲ.</p>.<p class="Subhead">ಪ್ರೋತ್ಸಾಹ ಧನ:</p>.<p>ಮುಷ್ಕರ ಸಂದರ್ಭದಲ್ಲಿ ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗೆ ವೇತನದ ಜೊತೆಗೆ ದಿನವೊಂದಕ್ಕೆ ₹ 200 ಪ್ರೋತ್ಸಾಹಧನ ನೀಡಲಾಗುವುದು. ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ಹಾಜರಾಗಬೇಕು ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ವಿಭಾಗದ ವಿಭಾಗೀಯ ಸಂಚಾಲಕ ನಾರಾಯಣಪ್ಪ ಕುರುಬರ ಮನವಿ ಮಾಡಿದ್ದಾರೆ.</p>.<p class="Subhead">ಸುಳ್ಳು ಸುದ್ದಿ:</p>.<p>ವಿಜಯಪುರ ಘಟಕ 1,2 ಮತ್ತು 3 ಹಾಗೂ ಮುದ್ದೇಬಿಹಾಳ ಘಟಕದದ ವ್ಯವಸ್ಥಾಪಕರು ಕರ್ತವ್ಯಕ್ಕೆ ಬರುವ ಸಿಬ್ಬಂದಿಗಳನ್ನು ವಾಪಸ್ ಕಳುಹಿಸುತ್ತಿದ್ದಾರೆ ಎಂಬುದು ಶುದ್ಧ ಸುಳ್ಳು ಎಂದು ಕುರುಬರ ಹೇಳಿದರು.</p>.<p>ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರ ಮನೆ,ಮನೆಗೆ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ಅವರು ವಿನಂತಿಸಿದರು.</p>.<p class="Subhead">245 ಜನ ಹಾಜರು:</p>.<p>ಶನಿವಾರ 245 ಜನ ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿದ್ದು, ಒಟ್ಟು 40 ಬಸ್ಗಳು ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿವೆ ಎಂದು ಕುರುಬರ ತಿಳಿಸಿದರು.</p>.<p class="Subhead">ಖಾಸಗಿ ವಾಹನ ಕಾರ್ಯಾಚರಣೆ:</p>.<p>ನಗರ ಕೇಂದ್ರ ಬಸ್ ನಿಲ್ದಾಣದ ಫ್ಲಾಟ್ ಫಾರಂನಿಂದಲೇ ಖಾಸಗಿ ಬಸ್, ಕ್ರೂಸರ್, ಟಂಟಂ, ಆಟೊಗಳು ಕಾರ್ಯಾಚರಣೆ ನಡೆಸಿದವು. ಹುಬ್ಬಳ್ಳಿ, ಕಲಬುರ್ಗಿ ಸೇರಿದಂತೆ ಜಿಲ್ಲೆಯ ಸಿಂದಗಿ, ಇಂಡಿ, ಮುದ್ದೇಬಿಹಾಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ವಾಹನಗಳು ಸಂಚರಿಸಿದವು. ಮುಷ್ಕರದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆಯೂ ಕ್ಷೀಣವಾಗಿತ್ತು.</p>.<p>ಮುಷ್ಕರದ ಹಿನ್ನೆಲೆಯಲ್ಲಿ ಹಾಗೂ ಈ ನಡುವೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ನಗರದ ಮಾರುಕಟ್ಟೆಯಲ್ಲಿ ಯುಗಾದಿ ಹಬ್ಬದ ಖರೀದಿಯೂ ಕಳೆಗುಂದಿದೆ. ಅಂಗಡಿಕಾರರು ನಿರೀಕ್ಷಿತ ಪ್ರಮಾಣದ ವ್ಯಾಪಾರ, ವಹಿವಾಟು ಇಲ್ಲದೇ ಸಂಕಷ್ಟಕ್ಕೆ ಒಳಗಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ನಾಲ್ಕನೇ ದಿನ ಪೂರೈಸಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.</p>.<p>ಸಾರಿಗೆ ಬಸ್ಗಳ ಸಂಚಾರವನ್ನು ಆರಂಭಿಸಲು ಅಧಿಕಾರಿಗಳು ಪರ್ಯಾಯ ಮಾರ್ಗಗಳ ಮೊರೆ ಹೋದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ನಿವೃತ್ತ ಚಾಲಕ, ನಿರ್ವಾಹಕರಿಗೆ ಕರೆ ಪತ್ರ ನೀಡಿದರೂ ಇದುವರೆಗೂ ಯಾರೊಬ್ಬರೂ ಕೆಲಸಕ್ಕೆ ಹಾಜರಾಗಿಲ್ಲ.</p>.<p class="Subhead">ಪ್ರೋತ್ಸಾಹ ಧನ:</p>.<p>ಮುಷ್ಕರ ಸಂದರ್ಭದಲ್ಲಿ ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗೆ ವೇತನದ ಜೊತೆಗೆ ದಿನವೊಂದಕ್ಕೆ ₹ 200 ಪ್ರೋತ್ಸಾಹಧನ ನೀಡಲಾಗುವುದು. ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ಹಾಜರಾಗಬೇಕು ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ವಿಭಾಗದ ವಿಭಾಗೀಯ ಸಂಚಾಲಕ ನಾರಾಯಣಪ್ಪ ಕುರುಬರ ಮನವಿ ಮಾಡಿದ್ದಾರೆ.</p>.<p class="Subhead">ಸುಳ್ಳು ಸುದ್ದಿ:</p>.<p>ವಿಜಯಪುರ ಘಟಕ 1,2 ಮತ್ತು 3 ಹಾಗೂ ಮುದ್ದೇಬಿಹಾಳ ಘಟಕದದ ವ್ಯವಸ್ಥಾಪಕರು ಕರ್ತವ್ಯಕ್ಕೆ ಬರುವ ಸಿಬ್ಬಂದಿಗಳನ್ನು ವಾಪಸ್ ಕಳುಹಿಸುತ್ತಿದ್ದಾರೆ ಎಂಬುದು ಶುದ್ಧ ಸುಳ್ಳು ಎಂದು ಕುರುಬರ ಹೇಳಿದರು.</p>.<p>ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರ ಮನೆ,ಮನೆಗೆ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ಅವರು ವಿನಂತಿಸಿದರು.</p>.<p class="Subhead">245 ಜನ ಹಾಜರು:</p>.<p>ಶನಿವಾರ 245 ಜನ ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿದ್ದು, ಒಟ್ಟು 40 ಬಸ್ಗಳು ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿವೆ ಎಂದು ಕುರುಬರ ತಿಳಿಸಿದರು.</p>.<p class="Subhead">ಖಾಸಗಿ ವಾಹನ ಕಾರ್ಯಾಚರಣೆ:</p>.<p>ನಗರ ಕೇಂದ್ರ ಬಸ್ ನಿಲ್ದಾಣದ ಫ್ಲಾಟ್ ಫಾರಂನಿಂದಲೇ ಖಾಸಗಿ ಬಸ್, ಕ್ರೂಸರ್, ಟಂಟಂ, ಆಟೊಗಳು ಕಾರ್ಯಾಚರಣೆ ನಡೆಸಿದವು. ಹುಬ್ಬಳ್ಳಿ, ಕಲಬುರ್ಗಿ ಸೇರಿದಂತೆ ಜಿಲ್ಲೆಯ ಸಿಂದಗಿ, ಇಂಡಿ, ಮುದ್ದೇಬಿಹಾಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ವಾಹನಗಳು ಸಂಚರಿಸಿದವು. ಮುಷ್ಕರದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆಯೂ ಕ್ಷೀಣವಾಗಿತ್ತು.</p>.<p>ಮುಷ್ಕರದ ಹಿನ್ನೆಲೆಯಲ್ಲಿ ಹಾಗೂ ಈ ನಡುವೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ನಗರದ ಮಾರುಕಟ್ಟೆಯಲ್ಲಿ ಯುಗಾದಿ ಹಬ್ಬದ ಖರೀದಿಯೂ ಕಳೆಗುಂದಿದೆ. ಅಂಗಡಿಕಾರರು ನಿರೀಕ್ಷಿತ ಪ್ರಮಾಣದ ವ್ಯಾಪಾರ, ವಹಿವಾಟು ಇಲ್ಲದೇ ಸಂಕಷ್ಟಕ್ಕೆ ಒಳಗಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>