<p><strong>ದೇವರಹಿಪ್ಪರಗಿ</strong>: ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಕಾರು ಅಪಘಾತದಲ್ಲಿ ತಾಯಿ, ಮಗ ಮೃತಪಟ್ಟ ಘಟನೆ ಗುರುವಾರ ಜರುಗಿದೆ.</p>.<p>ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಇಟ್ಟಿಗೆ ಭಟ್ಟಿಯ ಹತ್ತಿರ ವೇಗವಾಗಿ ಹೋಗುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದು ಅಪಘಾತವಾಗಿದೆ. ಸ್ಥಳದಲ್ಲಿಯೇ ಅಂಬರೀಷ ಮಲಕಣ್ಣ ಆರಿಗೇರಿ (25) ಮೃತಪಟ್ಟರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ತಾಯಿ ಇಂದಿರಾಬಾಯಿ ಮಲಕಣ್ಣ ಆರಿಗೇರಿ (50) ಮೃತಪಟ್ಟಿದ್ದಾರೆ.</p>.<p>ಮೂಲತ ಅಫಜಲಪುರ ಪಟ್ಟಣದವರಾದ ಆರಿಗೇರಿ ಕುಟುಂಬದವರು ಶಿಕ್ಷಣಕ್ಕಾಗಿ ದೇವರಹಿಪ್ಪರಗಿಯಲ್ಲಿ ಮನೆ ಮಾಡಿಕೊಂಡಿದ್ದು, ವಿಜಯಪುರ ಖಾಸಗಿ ಆಸ್ಪತ್ರೆಗೆ ತನ್ನ ಅಜ್ಜಿಯ ಕಣ್ಣಿನ ಚಿಕಿತ್ಸೆಗಾಗಿ ಅಂಬರೀಶ ತನ್ನ ತಾಯಿ, ಅಣ್ಣನೊಂದಿಗೆ ಕಾರಿನಲ್ಲಿ ಹೋಗುತ್ತಿದ್ದರು.</p>.<p>ಪಟ್ಟಣ ಬಿಟ್ಟು ಕೆಲವೇ ಕಿ.ಮೀ ಅಂತರದಲ್ಲಿ ಹೆದ್ದಾರಿಯಲ್ಲಿ ಅಡ್ಡ ಬಂದ ಕುದುರೆಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಕಾರು ಉರುಳಿಬಿದ್ದು ಘಟನೆ ಸಂಭವಿಸಿತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವರಹಿಪ್ಪರಗಿ</strong>: ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಕಾರು ಅಪಘಾತದಲ್ಲಿ ತಾಯಿ, ಮಗ ಮೃತಪಟ್ಟ ಘಟನೆ ಗುರುವಾರ ಜರುಗಿದೆ.</p>.<p>ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಇಟ್ಟಿಗೆ ಭಟ್ಟಿಯ ಹತ್ತಿರ ವೇಗವಾಗಿ ಹೋಗುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದು ಅಪಘಾತವಾಗಿದೆ. ಸ್ಥಳದಲ್ಲಿಯೇ ಅಂಬರೀಷ ಮಲಕಣ್ಣ ಆರಿಗೇರಿ (25) ಮೃತಪಟ್ಟರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ತಾಯಿ ಇಂದಿರಾಬಾಯಿ ಮಲಕಣ್ಣ ಆರಿಗೇರಿ (50) ಮೃತಪಟ್ಟಿದ್ದಾರೆ.</p>.<p>ಮೂಲತ ಅಫಜಲಪುರ ಪಟ್ಟಣದವರಾದ ಆರಿಗೇರಿ ಕುಟುಂಬದವರು ಶಿಕ್ಷಣಕ್ಕಾಗಿ ದೇವರಹಿಪ್ಪರಗಿಯಲ್ಲಿ ಮನೆ ಮಾಡಿಕೊಂಡಿದ್ದು, ವಿಜಯಪುರ ಖಾಸಗಿ ಆಸ್ಪತ್ರೆಗೆ ತನ್ನ ಅಜ್ಜಿಯ ಕಣ್ಣಿನ ಚಿಕಿತ್ಸೆಗಾಗಿ ಅಂಬರೀಶ ತನ್ನ ತಾಯಿ, ಅಣ್ಣನೊಂದಿಗೆ ಕಾರಿನಲ್ಲಿ ಹೋಗುತ್ತಿದ್ದರು.</p>.<p>ಪಟ್ಟಣ ಬಿಟ್ಟು ಕೆಲವೇ ಕಿ.ಮೀ ಅಂತರದಲ್ಲಿ ಹೆದ್ದಾರಿಯಲ್ಲಿ ಅಡ್ಡ ಬಂದ ಕುದುರೆಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಕಾರು ಉರುಳಿಬಿದ್ದು ಘಟನೆ ಸಂಭವಿಸಿತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>