ಮುದ್ದೇಬಿಹಾಳ: ತಾಲ್ಲೂಕಿನ ಢವಳಗಿ ಹಳ್ಳದ ಸಮೀಪದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.
ಕಾರು ಚಲಾಯಿಸುತ್ತಿದ್ದ ಮಸಬಿನಾಳದ ದೊಡ್ಡಯ್ಯ ರಾಚಯ್ಯ ಪುರಾಣಿಕಮಠ(37), ತಾಳಿಕೋಟಿ ತಾಲ್ಲೂಕಿನ ಜಲಪೂರದ ಪುಷ್ಪಾವತಿ ಶಿವಪುತ್ರಯ್ಯ ಹಿರೇಮಠ (55) ಮೃತರು. ಮಾಜಿ ಸೈನಿಕರಾಗಿದ್ದ ದೊಡ್ಡಯ್ಯ ಹಾಗೂ ಪುಷ್ಪಾವತಿ ಸಹೋದರ,ಸಹೋದರಿಯರು.
ಮದುವೆಗೆ ಹೋಗಿ ವಾಪಸ್ ಊರಿಗೆ ತೆರಳುವ ಸಂದರ್ಭದಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದಿತ್ತು. ಸ್ಥಳಕ್ಕೆ ಪಿಎಸ್ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.