ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಚಾಲಕ ಸಾವು ಪ್ರಕರಣ: ಸಿಬಿಐ ತನಿಖೆಗೆ ಯತ್ನಾಳ ಆಗ್ರಹ

Last Updated 15 ಜನವರಿ 2023, 8:22 IST
ಅಕ್ಷರ ಗಾತ್ರ

ವಿಜಯಪುರ: ಕಾರು ಚಾಲಕನ ಸಾವಿನ ಬಗ್ಗೆ ಸಚಿವ ಮುರುಗೇಶ ನಿರಾಣಿ ತಮ್ಮ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಸಿಐಬಿ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವುದಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.

ಸಂಪುಟದ ಸದಸ್ಯರು ಈ ರೀತಿ ಆರೋಪ ಮಾಡಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲಿ. ಇನ್ನೂ ಇಂತಹ ಆರೋಪದಿಂದ ಸರ್ಕಾರದ ಬಗ್ಗೆ ತಪ್ಪು ಸಂದೇಶ ಬರುತ್ತದೆ. ದೇಶದ ಜನತೆಗೆ ಇದರ ಬಗ್ಗೆ ಸತ್ಯಾಸತ್ಯತೇ ಗೊತ್ತಾಗಬೇಕಿದೆ ಎಂದರು.

24 ಗಂಟೆ ಒಳಗಾಗಿ ಸಿಬಿಐ ತನಿಖೆಗೆ ಶಿಫಾರಸು ಮಾಡಬೇಕು. ಅಲ್ಲವೇ, ಸುಳ್ಳು ಆರೋಪ ಮಾಡಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದರು.

ಯಾವುದೇ ವಿವಾದಾತ್ಮಕ ಹೇಳಿಕೆ ನೀಡದಂತೆ ಕೇಂದ್ರ ನಾಯಕರು, ಬಿಜೆಪಿ ವರಿಷ್ಠರು ಫೋನ್ ಮಾಡಿ ತಿಳಿಸಿದ್ದಾರೆ. ಅಲ್ಲದೇ, ಪಂಚಮಸಾಲಿ ಮೀಸಲಾತಿ ಬಗ್ಗೆ ಚರ್ಚಿಸುವ ಸಂಬಂಧ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಶೀಘ್ರದಲ್ಲೇ ದೆಹಲಿಗೆ ಹೋಗುತ್ತೇನೆ. ಕೇಂದ್ರದಿಂದ ಸಿಹಿ ಸುದ್ದಿ ಸಿಗುವ ಆಶಾಭಾವ ಇದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT