ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ವಿರುದ್ಧ ಜಾತಿ ನಿಂದನೆ ದೂರು: ಖಂಡನೆ

Last Updated 19 ಜೂನ್ 2022, 4:43 IST
ಅಕ್ಷರ ಗಾತ್ರ

ವಿಜಯಪುರ:ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಜಾತಿ ನಿಂದನೆ ದೂರು ದಾಖಲಿಸಿರುವುದು ಖಂಡನೀಯ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ರಾಜು ಅಲಗೂರ ಹೇಳಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಬಗ್ಗೆ ಅಪಾರ ಗೌರವ ಇರುವ ಹಾಗೂ ದಲಿತರ ಏಳಿಗೆಗೆ ಹಗಲಿರುಳು ಶ್ರಮಿಸುತ್ತಿರುವ ಸಿದ್ದರಾಮಯ್ಯ ವಿರುದ್ಧ ಸುಳ್ಳು ಜಾತಿ ನಿಂದನೆ ದೂರು ದಾಖಲಿಸಿರುವುದನ್ನು ತಕ್ಷಣ ಹಿಂಪಡೆಯಬೇಕು, ಇಲ್ಲವಾದರೆ ನಾರಾಯಣಸ್ವಾಮಿ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.‌

ಆರ್‌ಎಸ್‌ಎಸ್‌ನವರ ಚಡ್ಡಿಯನ್ನು ತಲೆ ಮೇಲೆ ಹೊತ್ತು ಪ್ರತಿಭಟನೆ ಮಾಡಿದ ಛಲವಾದಿ ನಾರಾಯಣಸ್ವಾಮಿ ಅವರ ಮನಸ್ಥಿತಿ, ಯೋಚನೆ ಯಾವ ಮಟ್ಟದಲ್ಲಿದೆ ಎಂಬುದನ್ನು ಸಿದ್ದರಾಮಯ್ಯ ಟೀಕಿಸಿದ್ದಾರೆಯೇ ಹೊರತು ಅವರ ಜಾತಿಯನ್ನು ನಿಂದಿಸಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಅಪಾರ್ಥ ಮಾಡಿಕೊಂಡು ದೂರು ದಾಖಲಿಸುವ ಮೂಲಕ ಆರ್‌ಎಸ್‌ಎಸ್‌, ಬಿಜೆಪಿಯವರನ್ನು ಮೆಚ್ಚಿಸಲು ನಾರಾಯಣಸ್ವಾಮಿ ಮುಂದಾಗಿದ್ದಾರೆಯೇ ಹೊರತು, ಇದರ ಉದ್ದೇಶ ಬೇರೇನೂ ಇಲ್ಲ ಎಂದರು.

ಮುಖಂಡರಾದ ಚಂದ್ರಶೇಖರ ಕೊಡಬಾಗಿ, ಸುರೇಶ ಘೋಣಸಗಿ, ಸಮದ್‌ ಸುತಾರಾ, ಸಾಹೇಬಗೌಡ ಬಿರಾದಾರ, ಭಾರತಿ ಹೊಸಮನಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT