ವಿಜಯಪುರ:ತಾಳಿಕೋಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಸರಗಳ್ಳ, ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸೆಪ್ಟೆಂಬರ್ 1ರಂದು ರೇಣುಕಾ ಪಾಟೀಲ ಎಂಬುವವರು ಯಾದಗಿರಿ ಜಿಲ್ಲೆಯ ದೊರಹಳ್ಳಿಗೆ ತೆರಳಲು ಬಸ್ ಗಾಗಿ ಕಾಯುತ್ತಾ ಕುಳಿತಿದ್ದ ವೇಳೆ ಅವರ ಬಳಿಯೇ ಹೊಂಚುಹಾಕಿ ನಿಂತಿದ್ದ ಕಳ್ಳ ಏಕಾಏಕಿ ಕೊರಳಿಗೆ ಕೈಹಾಕಿ 38 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ.
ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.