ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಎಮ್ಮೆ ಕರು, ಆರು ಕುರಿಗಳನ್ನು ತಿಂದು ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ

Last Updated 5 ಜೂನ್ 2020, 4:05 IST
ಅಕ್ಷರ ಗಾತ್ರ
ADVERTISEMENT
""

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ದೇವರಗೆಣ್ಣೂರ, ಸುತಗಂಡಿ, ಬಬಲಾದಿ, ಬಿದರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಒಂದು ವಾರದಿಂದ ಜಾನುವಾರುಗಳ ಮೇಲೆ ದಾಳಿ ಮಾಡಿ, ಒಂದು ಎಮ್ಮೆ ಕರು, ಆರು ಕುರಿಗಳನ್ನು ತಿಂದು ಹಾಕುವ ಮೂಲಕ ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆ ಶುಕ್ರವಾರ ಬೆಳಿಗ್ಗೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಹಿಡಿಯಲು ನಾಲ್ಕು ಸ್ಥಳಗಳಲ್ಲಿ ಬೋನ್ ಇರಿಸಿ ಮೇಕೆಯನ್ನು ಕಟ್ಟಿಹಾಕಿದ್ದರು. ಮೇಕೆ ತಿನ್ನಲು ಹೋಗಿ ಬೋನಿಗೆ ಬಿದ್ದಿದೆ. ಚಿರತೆಯ ಚಲನವಲನ ಗಮನಿಸಲು ಎಂಟು ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದರು. ಅಲ್ಲದೇ, ಅರಣ್ಯ ಇಲಾಖೆ ಸಿಬ್ಬಂದಿ ಹಗಲು, ರಾತ್ರಿ ಗಸ್ತು ತಿರುಗುತ್ತಿದ್ದರು.

ದೇವರಗೆಣ್ಣೂರ, ಸುತಗಂಡಿ, ಬಬಲಾದಿ, ಬಿದರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾತ್ರಿ ವೇಳೆ ಯಾರೂ ಸಂಚರಿಸದಂತೆ ಹಾಗೂ ಜಮೀನುಗಳಿಗೆ ಒಂಟಿಯಾಗಿ ತೆರಳದಂತೆ ಅರಣ್ಯ ಇಲಾಖೆ ಸಿಬ್ಬಂದಿ ಡಂಗೂರ ಸಾರಿದ್ದರು.

ವಿಜಯಪುರ ವಲಯ ಅರಣ್ಯ ಅಧಿಕಾರಿಗಳಾದ ಸರೀನಾ ಸಿಕ್ಕಲಗಾರ ಮತ್ತು ಪ್ರಭುಲಿಂಗ ನೇತೃತ್ವದಲ್ಲಿ ಬೀಡುಬಿಟ್ಟಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ಕೊನೆಗೂ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೃಷ್ಣಾ ನದಿ ತೀರದ ಬೀಳಗಿ ತಾಲ್ಲೂಕಿನ ಚಿಂಕಾರ ವನ್ಯ ಜೀವಿಧಾಮದಿಂದ ಆಹಾರ ಅರಸಿ ಈ ಚಿರತೆ ಲಾಕ್ ಡೌನ್ ಅವಧಿಯಲ್ಲಿ ಬಂದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT