ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ದೇವರಗೆಣ್ಣೂರ, ಸುತಗಂಡಿ, ಬಬಲಾದಿ, ಬಿದರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಒಂದು ವಾರದಿಂದ ಜಾನುವಾರುಗಳ ಮೇಲೆ ದಾಳಿ ಮಾಡಿ, ಒಂದು ಎಮ್ಮೆ ಕರು, ಆರು ಕುರಿಗಳನ್ನು ತಿಂದು ಹಾಕುವ ಮೂಲಕ ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆ ಶುಕ್ರವಾರ ಬೆಳಿಗ್ಗೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.