<p><strong>ವಿಜಯಪುರ</strong>: ಚಿಕ್ಕಗಲಗಲಿ ಗ್ರಾಮದ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನೂತನ ಜಾಕೆಟಿಂಗ್ ತಂತ್ರಜ್ಞಾನದ ಬ್ಯಾರೇಜ್ ತುಂಬಿ ಹರಿಯತೊಡಗಿದೆ.</p>.<p>ಶಾಸಕ ಎಂ.ಬಿ.ಪಾಟೀಲ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ವಿಜಯಪುರ ಮತ್ತು ಬಾಗಲಕೋಟೆ ಅವಳಿ ಜಿಲ್ಲೆಯ ರೈತರಿಗೆ ಅನುಕೂಲವಾಗಲು ನೂತನ ತಂತ್ರಜ್ಞಾನ ಬಳಸಿ, ಹಾಲಿ ಇದ್ದ ಬ್ಯಾರೇಜ್ನ್ನು ಬಲಪಡಿಸಿ, ಎತ್ತರಿಸುವ ಕಾಮಗಾರಿಗೆ ಹೆಚ್ಚಿನ ಮುತುವರ್ಜಿ ವಹಿಸಿ, ಚಾಲನೆ ನೀಡಿದ್ದರು.</p>.<p>ಈ ಕಾಮಗಾರಿಗೆ ₹ 54 ಕೋಟಿ ವೆಚ್ಚವಾಗಿದ್ದು, ಇದೀಗ ಮಳೆ ಹಾಗೂ ಮೇಲ್ಭಾಗದ ಹಿಪ್ಪರಗಿ ಆಣೆಕಟ್ಟಿನಿಂದ ನೀರು ಬಿಟ್ಟಿದ್ದರಿಂದ ಬ್ಯಾರೇಜ್ ಸಂಪೂರ್ಣ ಜಲಾವೃತವಾಗಿದೆ.</p>.<p>ಕಾಮಗಾರಿ ಪೂರ್ಣಗೊಂಡ ನಂತರ ಪ್ರಥಮ ಬಾರಿಗೆ ನೀರು ತುಂಬಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಗಂಗಾಪೂಜೆಯನ್ನು ಜೂನ್ 23 ಬೆಳಿಗ್ಗೆ 10ಕ್ಕೆ ಏರ್ಪಡಿಸಿದ್ದು, ಬ್ಯಾರೇಜ್ ರೂವಾರಿ ಎಂ.ಬಿ.ಪಾಟೀಲ ಅವರು ಗಂಗಾಪೂಜೆ ನೆರವೇರಿಸಲಿದ್ದಾರೆ ಎಂದು ಎಚ್.ಎಸ್.ಕೋರಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಚಿಕ್ಕಗಲಗಲಿ ಗ್ರಾಮದ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನೂತನ ಜಾಕೆಟಿಂಗ್ ತಂತ್ರಜ್ಞಾನದ ಬ್ಯಾರೇಜ್ ತುಂಬಿ ಹರಿಯತೊಡಗಿದೆ.</p>.<p>ಶಾಸಕ ಎಂ.ಬಿ.ಪಾಟೀಲ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ವಿಜಯಪುರ ಮತ್ತು ಬಾಗಲಕೋಟೆ ಅವಳಿ ಜಿಲ್ಲೆಯ ರೈತರಿಗೆ ಅನುಕೂಲವಾಗಲು ನೂತನ ತಂತ್ರಜ್ಞಾನ ಬಳಸಿ, ಹಾಲಿ ಇದ್ದ ಬ್ಯಾರೇಜ್ನ್ನು ಬಲಪಡಿಸಿ, ಎತ್ತರಿಸುವ ಕಾಮಗಾರಿಗೆ ಹೆಚ್ಚಿನ ಮುತುವರ್ಜಿ ವಹಿಸಿ, ಚಾಲನೆ ನೀಡಿದ್ದರು.</p>.<p>ಈ ಕಾಮಗಾರಿಗೆ ₹ 54 ಕೋಟಿ ವೆಚ್ಚವಾಗಿದ್ದು, ಇದೀಗ ಮಳೆ ಹಾಗೂ ಮೇಲ್ಭಾಗದ ಹಿಪ್ಪರಗಿ ಆಣೆಕಟ್ಟಿನಿಂದ ನೀರು ಬಿಟ್ಟಿದ್ದರಿಂದ ಬ್ಯಾರೇಜ್ ಸಂಪೂರ್ಣ ಜಲಾವೃತವಾಗಿದೆ.</p>.<p>ಕಾಮಗಾರಿ ಪೂರ್ಣಗೊಂಡ ನಂತರ ಪ್ರಥಮ ಬಾರಿಗೆ ನೀರು ತುಂಬಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಗಂಗಾಪೂಜೆಯನ್ನು ಜೂನ್ 23 ಬೆಳಿಗ್ಗೆ 10ಕ್ಕೆ ಏರ್ಪಡಿಸಿದ್ದು, ಬ್ಯಾರೇಜ್ ರೂವಾರಿ ಎಂ.ಬಿ.ಪಾಟೀಲ ಅವರು ಗಂಗಾಪೂಜೆ ನೆರವೇರಿಸಲಿದ್ದಾರೆ ಎಂದು ಎಚ್.ಎಸ್.ಕೋರಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>