ಸರ್ಕಾರ ಲಕ್ಷಾಂತರ ಹಣ ಖರ್ಚು ಮಾಡಿ ಶುದ್ಧ ಕುಡಿಯುವ ನೀರಿನ ಘಟಕಗಳು ಮಾಡಿದ್ದಾರೆ. ಆದರೆ ಅವುಗಳ ಉಪಯೋಗ ಜನಸಾಮಾನ್ಯರಿಗೆ ಸಿಗುತ್ತಿಲ್ಲ. ಇದರಿಂದ ಜನಸಾಮಾನ್ಯರಲ್ಲಿ ಅನಾರೋಗ್ಯ ಹೆಚ್ಚಾಗಿದೆ. ಸರ್ಕಾರ ಈ ಬಗ್ಗೆ ಲಕ್ಷ್ಯ ವಹಿಸಬೇಕು
-ಸೋಮು ನಿಂಬರಗಿಮಠ ವಕೀಲ
ಶಿರಶ್ಯಾಡ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನೀರಿನ ಘಟಕಗಳು ಸ್ಥಗಿತಗೊಂಡಿವೆ. ಈ ಕೂಡಲೇ ರಿಪೇರಿ ಮಾಡಿಸಬೇಕು
ಬಾಳು ಮುಳಜಿ ಅಧ್ಯಕ್ಷ ಕರವೇ ತಾಲ್ಲೂಕು ಘಟಕ ಇಂಡಿ
ಪಟ್ಟಣ ಸೇರಿ ಗ್ರಾಮೀಣ ಪ್ರದೇಶಗಳಲ್ಲಿಯ ಜನಸಾಮಾನ್ಯರ ಆರೋಗ್ಯದ ದೃಷ್ಠಿಯಿಂದ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಅಗತ್ಯವಿದೆ. ಕೆಟ್ಟು ಹೋಗಿರುವ ಘಟಕಗಳನ್ನು ಆದಷ್ಟು ಶೀಘ್ರ ದುರಸ್ತಿ ಮಾಡಿ ಜನರಿಗೆ ಬೇಸಿಗೆಯಲ್ಲಿ ನೀರಿನ ಕೊರತೆಯಾಗದಂತೆ ತಾಲ್ಲೂಕು ಆಡಳಿತ ಗಮನಿಸಬೇಕು
-ರಾಮಸಿಂಗ್ ಕನ್ನೊಳ್ಳಿಅಧ್ಯಕ್ಷ ಸ್ವಾಮಿ ವಿವೇಕಾನಂದ ಯುವ ಘಟಕ ಇಂಡಿ
ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿಯ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿವೆ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಬಗ್ಗೆ ಅಧಿಕಾರಿಗಳು ಲಕ್ಷ್ಯವಹಿಸಿ ಅವುಗಳನ್ನು ರಿಪೇರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು