<p><strong>ವಿಜಯಪುರ:</strong> ರಾಷ್ಟ್ರೀಯ ಹಸಿರು ಪೀಠ ನ್ಯಾಯಾಲಯವುಜಿಲ್ಲೆಯ ಭೀಮಾ ನದಿ ಪಾತ್ರದಲ್ಲಿ ಮರಳು ಗಣಿಗಾರಿಕೆಗೆ ನೀಡಿದ್ದ ತಡೆಯಾಜ್ಞೆ ತೆರವಾಗಿದ್ದು, ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆಎಂದು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ತಿಳಿಸಿದ್ದಾರೆ.</p>.<p>ತಡೆಯಾಜ್ಞೆ ಇದ್ದ ಕಾರಣಕ್ಕೆ ಭೀಮಾ ನದಿ ಪಾತ್ರದಲ್ಲಿ ಇದುವರೆಗೂ ಯಾವುದೇ ಮರಳಿನ ಬ್ಲಾಕ್ಗಳನ್ನು ಗುರುತಿಸಲು ಇದುವರೆಗೆ ಸಾಧ್ಯವಾಗಿರಲಿಲ್ಲ ಎಂದು ಹೇಳಿದ್ದಾರೆ.</p>.<p>ಪ್ರಸ್ತುತ ಹಸಿರು ನ್ಯಾಯ ಪೀಠವು ಮಾರ್ಗಸೂಚಿಗಳ ಅನ್ವಯ ಮರಳು ಗಣಿಗಾರಿಕೆ ಮಾಡಲು ಅವಕಾಶ ನೀಡಿರುವುದರಿಂದ ಸರ್ಕಾರದ ಹೊಸ ಮರಳು ನೀತಿ-2020ರಂತೆ ಮರಳು ಗಣಿಗಾರಿಕೆ ನಡೆಸಲು ಕ್ರಮಕೈಗೊಳ್ಳಲಾಗಿದೆ ಎಂದರು.</p>.<p>ಚಡಚಣ ತಾಲ್ಲೂಕಿನ ಉಮರಾಣಿ, ಇಂಡಿ ತಾಲ್ಲೂಕಿನ ಗುಬ್ಬೇವಾಡ ಮತ್ತು ಶಿರಗೂರ, ಪಡನೂರ ಮತ್ತು ಬರಗುಡಿ, ಆಲಮೇಲ ತಾಲ್ಲೂಕಿನ ದೇವಣಗಾಂವ, ಬಗಲೂರ ಸೇರಿದಂತೆ ಒಟ್ಟು ಐದು ಮರಳಿನ ಬ್ಲಾಕ್ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಹೂಳಿನೊಂದಿಗಿರುವ ಮರಳು ತೆಗೆಯಲು ಹಟ್ಟಿ ಗೋಲ್ಡ್ ಮೈನ್ಸ್ಗೆ ಹಸ್ತಾಂತರಿಸಲು ತೀರ್ಮಾನಿಸಲಾಗಿದ್ದು, ಸದ್ಯದಲ್ಲಿಯೇ ಜಿಲ್ಲೆಯ ಮರಳಿನ ಕೊರತೆಯು ನಿವಾರಣೆಯಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ರಾಷ್ಟ್ರೀಯ ಹಸಿರು ಪೀಠ ನ್ಯಾಯಾಲಯವುಜಿಲ್ಲೆಯ ಭೀಮಾ ನದಿ ಪಾತ್ರದಲ್ಲಿ ಮರಳು ಗಣಿಗಾರಿಕೆಗೆ ನೀಡಿದ್ದ ತಡೆಯಾಜ್ಞೆ ತೆರವಾಗಿದ್ದು, ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆಎಂದು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ತಿಳಿಸಿದ್ದಾರೆ.</p>.<p>ತಡೆಯಾಜ್ಞೆ ಇದ್ದ ಕಾರಣಕ್ಕೆ ಭೀಮಾ ನದಿ ಪಾತ್ರದಲ್ಲಿ ಇದುವರೆಗೂ ಯಾವುದೇ ಮರಳಿನ ಬ್ಲಾಕ್ಗಳನ್ನು ಗುರುತಿಸಲು ಇದುವರೆಗೆ ಸಾಧ್ಯವಾಗಿರಲಿಲ್ಲ ಎಂದು ಹೇಳಿದ್ದಾರೆ.</p>.<p>ಪ್ರಸ್ತುತ ಹಸಿರು ನ್ಯಾಯ ಪೀಠವು ಮಾರ್ಗಸೂಚಿಗಳ ಅನ್ವಯ ಮರಳು ಗಣಿಗಾರಿಕೆ ಮಾಡಲು ಅವಕಾಶ ನೀಡಿರುವುದರಿಂದ ಸರ್ಕಾರದ ಹೊಸ ಮರಳು ನೀತಿ-2020ರಂತೆ ಮರಳು ಗಣಿಗಾರಿಕೆ ನಡೆಸಲು ಕ್ರಮಕೈಗೊಳ್ಳಲಾಗಿದೆ ಎಂದರು.</p>.<p>ಚಡಚಣ ತಾಲ್ಲೂಕಿನ ಉಮರಾಣಿ, ಇಂಡಿ ತಾಲ್ಲೂಕಿನ ಗುಬ್ಬೇವಾಡ ಮತ್ತು ಶಿರಗೂರ, ಪಡನೂರ ಮತ್ತು ಬರಗುಡಿ, ಆಲಮೇಲ ತಾಲ್ಲೂಕಿನ ದೇವಣಗಾಂವ, ಬಗಲೂರ ಸೇರಿದಂತೆ ಒಟ್ಟು ಐದು ಮರಳಿನ ಬ್ಲಾಕ್ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಹೂಳಿನೊಂದಿಗಿರುವ ಮರಳು ತೆಗೆಯಲು ಹಟ್ಟಿ ಗೋಲ್ಡ್ ಮೈನ್ಸ್ಗೆ ಹಸ್ತಾಂತರಿಸಲು ತೀರ್ಮಾನಿಸಲಾಗಿದ್ದು, ಸದ್ಯದಲ್ಲಿಯೇ ಜಿಲ್ಲೆಯ ಮರಳಿನ ಕೊರತೆಯು ನಿವಾರಣೆಯಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>