<p><strong>ವಿಜಯಪುರ: </strong>ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹದಿಂದ ಬಾಧಿತವಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮೊಟಕುಗೊಳಿಸಿದರು.</p>.<p>ಆಲಮಟ್ಟಿಯಲ್ಲಿ ಅಧಿಕಾರಿಗಳೊಂದಿಗೆ ನಡೆಯಬೇಕಾಗಿದ್ದ ಪ್ರವಾಹ ಪರಿಶೀಲನೆ ಸಭೆಯೂ ಸಿಎಂ ಬಾರದ ಕಾರಣ ರದ್ದುಗೊಂಡಿತು. ಸಿಎಂ ಬಾರದೇ ಇರುವುದಕ್ಕೆ ಜಿಲ್ಲೆಯ ಪ್ರವಾಹ ಸಂತ್ರಸ್ತರು ಬೇಸರ ವ್ಯಕ್ತಪಡಿಸಿದರು.</p>.<p>ಸಿಎಂ ಆಗಮನದ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡು ದಿನಗಳಿಂದ ಸಿದ್ದತೆ ಮಾಡಿಕೊಂಡಿದ್ದರು. ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಅಧಿಕಾರಿಗಳು ಆಲಮಟ್ಟಿಯಲ್ಲಿ ಠಿಕಾಣಿ ಹೂಡಿದ್ದರು. ಸಿಎಂಗೆ ಮನವಿ ಕೊಡಲು ಶಾಸಕರು, ಮುಖಂಡರು ಕಾದುಕುಳಿತಿದ್ದರು. ಸಭೆ ರದ್ದಾದ ಕಾರಣ ನಿರಾಸೆಯಿಂದ ತೆರಳಿದರು.</p>.<p>ಈ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಹವಾಮಾನ ವೈಪರೀತ್ಯದಿಂದ ಸಿಎಂ ವೈಮಾನಿಕ ಸಮೀಕ್ಷೆ ಸಾಧ್ಯವಾಗಿಲ್ಲ. ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತು ಸಿಎಂ ಗಮನಕ್ಕೆ ತರುತ್ತೇನೆ ಎಂದರು.</p>.<p>ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಂಬಂಧಿಸಿದಂತೆ ₹636 ಕೋಟಿ ಪರಿಹಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಭೀಮಾ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಮುಖ್ಯಮಂತ್ರಿ ಮೂಲಕ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದರು.</p>.<p>ಶಾಸಕ ಸೋಮನಗೌಡ ಪಾಟೀಲ ಸಾಸನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹದಿಂದ ಬಾಧಿತವಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮೊಟಕುಗೊಳಿಸಿದರು.</p>.<p>ಆಲಮಟ್ಟಿಯಲ್ಲಿ ಅಧಿಕಾರಿಗಳೊಂದಿಗೆ ನಡೆಯಬೇಕಾಗಿದ್ದ ಪ್ರವಾಹ ಪರಿಶೀಲನೆ ಸಭೆಯೂ ಸಿಎಂ ಬಾರದ ಕಾರಣ ರದ್ದುಗೊಂಡಿತು. ಸಿಎಂ ಬಾರದೇ ಇರುವುದಕ್ಕೆ ಜಿಲ್ಲೆಯ ಪ್ರವಾಹ ಸಂತ್ರಸ್ತರು ಬೇಸರ ವ್ಯಕ್ತಪಡಿಸಿದರು.</p>.<p>ಸಿಎಂ ಆಗಮನದ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡು ದಿನಗಳಿಂದ ಸಿದ್ದತೆ ಮಾಡಿಕೊಂಡಿದ್ದರು. ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಅಧಿಕಾರಿಗಳು ಆಲಮಟ್ಟಿಯಲ್ಲಿ ಠಿಕಾಣಿ ಹೂಡಿದ್ದರು. ಸಿಎಂಗೆ ಮನವಿ ಕೊಡಲು ಶಾಸಕರು, ಮುಖಂಡರು ಕಾದುಕುಳಿತಿದ್ದರು. ಸಭೆ ರದ್ದಾದ ಕಾರಣ ನಿರಾಸೆಯಿಂದ ತೆರಳಿದರು.</p>.<p>ಈ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಹವಾಮಾನ ವೈಪರೀತ್ಯದಿಂದ ಸಿಎಂ ವೈಮಾನಿಕ ಸಮೀಕ್ಷೆ ಸಾಧ್ಯವಾಗಿಲ್ಲ. ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತು ಸಿಎಂ ಗಮನಕ್ಕೆ ತರುತ್ತೇನೆ ಎಂದರು.</p>.<p>ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಂಬಂಧಿಸಿದಂತೆ ₹636 ಕೋಟಿ ಪರಿಹಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಭೀಮಾ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಮುಖ್ಯಮಂತ್ರಿ ಮೂಲಕ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದರು.</p>.<p>ಶಾಸಕ ಸೋಮನಗೌಡ ಪಾಟೀಲ ಸಾಸನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>