<p><strong>ವಿಜಯಪುರ: </strong>ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ಚಿಕಿತ್ಸೆಯಲ್ಲಿ ನಿರತ ವೈದ್ಯರ ಜತೆ ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವರ್ಚುವಲ್ ಸಭೆ ಮೂಲಕ ಸಮಾಲೋಚನೆ ನಡೆಸಿದರು.</p>.<p>ಕೋವಿಡ್-19 ಚಿಕಿತ್ಸೆಯಲ್ಲಿ ನಿರತವಾಗಿರುವ ವಿಜಯಪುರದ ಡಾ.ಮೀನಾಕ್ಷಿ ಮುತ್ತಪ್ಪನವರ ಈ ವರ್ಚುವಲ್ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.</p>.<p>ಎಷ್ಟು ದಿನಗಳಿಂದ ಕೋವಿಡ್ ಕರ್ತವ್ಯ ನಿರ್ವಹಿಸುತ್ತಿದ್ದೀರಿ ಎಂಬ ಮುಖ್ಯಮಂತ್ರಿಗಳ ಪ್ರಶ್ನೆಗೆ ಉತ್ತರಿಸಿದ ಮೀನಾಕ್ಷಿ ಮುತ್ತಪ್ಪನವರ, ಕಳೆದ ವರ್ಷ ಕೋವಿಡ್ ಪ್ರಾರಂಭದ ದಿನದಿಂದ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ದಿನದ 6 ಗಂಟೆಗಳ ಕಾಲ ಸರದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದರು.</p>.<p>ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವುದು, ರಕ್ತವನ್ನು ಲ್ಯಾಬ್ ಪರೀಕ್ಷೆಗೆ ಕಳುಹಿಸಿ ಬಂದಂತಹ ವರದಿ ಆಧರಿಸಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಹಗಲು ಹಾಗೂ ರಾತ್ರಿ ವೇಳೆಯಲ್ಲಿಯೂ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದು ತಿಳಿಸಿದರು.</p>.<p>ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದೀರಾ ಎಂಬ ಮುಖ್ಯಮಂತ್ರಿಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಶೀಲ್ಡ್ ವ್ಯಾಕ್ಸಿನ್ ಅನ್ನು ನಾಲ್ಕು ತಿಂಗಳ ಹಿಂದೆ ತೆಗೆದುಕೊಂಡಿದ್ದು, 2 ಡೋಸ್ ಪಡೆದಿರುವುದಾಗಿ ತಿಳಿಸಿದರು.</p>.<p>ನೀವು ಕರೋನಾ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೀರಿ, ಮನೆಯಲ್ಲಿ ಹೇಗೆ ಇರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಮೀನಾಕ್ಷಿ, ಮನೆಯಲ್ಲಿ ಐಸೋಲೇಷನ್ನಲ್ಲಿದ್ದು ಪ್ರತ್ಯೇಕ ಕೊಠಡಿಯತಲ್ಲಿ ಒಬ್ಬರೇ ಇರುವುದಾಗಿ ಹೇಳಿದರು.</p>.<p>ಆಸ್ಪತ್ರೆಯಿಂದ ಬಂದ ಕೂಡಲೇ ಸ್ಯಾನಿಟೈಸರ್ ಮಾಡಿಕೊಂಡು ಸ್ನಾನ ಮಾಡಿ, ನಂತರ ಒಬ್ಬರೇ ಅಡುಗೆಯನ್ನು ಮಾಡಿಕೊಳ್ಳುವುದಾಗಿ ಹೇಳಿದರು.</p>.<p>ಮನೆಯ ಸದಸ್ಯರಿಂದ ಅಂತರವನ್ನು ಕಾಯ್ದುಕೊಂಡು ಒಬ್ಬರೇ ಮುನ್ನೆಚ್ಚರಿಕೆಯಿಂದ ಇರುವುದಾಗಿ ತಿಳಿಸಿದರು.</p>.<p class="Subhead">ವೈದ್ಯಕೀಯ ಸಿಬ್ಬಂದಿ ಅಮೂಲ್ಯ ಆಸ್ತಿ:</p>.<p>ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಅಪಾಯವನ್ನು ಲೆಕ್ಕಿಸದೇ ಕಾರ್ಯದ ಒತ್ತಡದ ಮಧ್ಯೆಯೂ ನಿರಂತರವಾಗಿ ಕೆಲಸ ಮಾಡುತ್ತಿರುವ ವೈದ್ಯರು, ನರ್ಸ್ ಸೇರಿದಂತೆ ಎಲ್ಲ ವೈದ್ಯಕೀಯ ಸಿಬ್ಬಂದಿ ನಮ್ಮ ಅಮೂಲ್ಯ ಆಸ್ತಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದರು.</p>.<p>ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಸರ್ಕಾರ ಬದ್ಧವಿದೆ. ಸೋಂಕು ತೀವ್ರಗೊಳ್ಳುತ್ತಿರುವ ಈ ಸಂದರ್ಭದಲ್ಲಿ ವೈದ್ಯರು ಮಾನವೀಯತೆ ನೆಲೆಗಟ್ಟಿನಲ್ಲಿ ಕೆಲಸ ಮಾಡುವ ಮೂಲಕ ಸೋಂಕಿತರು ಹಾಗೂ ತಮ್ಮ ಜೀವ ರಕ್ಷಣೆಗೆ ಮುಂದಾಗಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ಚಿಕಿತ್ಸೆಯಲ್ಲಿ ನಿರತ ವೈದ್ಯರ ಜತೆ ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವರ್ಚುವಲ್ ಸಭೆ ಮೂಲಕ ಸಮಾಲೋಚನೆ ನಡೆಸಿದರು.</p>.<p>ಕೋವಿಡ್-19 ಚಿಕಿತ್ಸೆಯಲ್ಲಿ ನಿರತವಾಗಿರುವ ವಿಜಯಪುರದ ಡಾ.ಮೀನಾಕ್ಷಿ ಮುತ್ತಪ್ಪನವರ ಈ ವರ್ಚುವಲ್ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.</p>.<p>ಎಷ್ಟು ದಿನಗಳಿಂದ ಕೋವಿಡ್ ಕರ್ತವ್ಯ ನಿರ್ವಹಿಸುತ್ತಿದ್ದೀರಿ ಎಂಬ ಮುಖ್ಯಮಂತ್ರಿಗಳ ಪ್ರಶ್ನೆಗೆ ಉತ್ತರಿಸಿದ ಮೀನಾಕ್ಷಿ ಮುತ್ತಪ್ಪನವರ, ಕಳೆದ ವರ್ಷ ಕೋವಿಡ್ ಪ್ರಾರಂಭದ ದಿನದಿಂದ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ದಿನದ 6 ಗಂಟೆಗಳ ಕಾಲ ಸರದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದರು.</p>.<p>ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವುದು, ರಕ್ತವನ್ನು ಲ್ಯಾಬ್ ಪರೀಕ್ಷೆಗೆ ಕಳುಹಿಸಿ ಬಂದಂತಹ ವರದಿ ಆಧರಿಸಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಹಗಲು ಹಾಗೂ ರಾತ್ರಿ ವೇಳೆಯಲ್ಲಿಯೂ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದು ತಿಳಿಸಿದರು.</p>.<p>ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದೀರಾ ಎಂಬ ಮುಖ್ಯಮಂತ್ರಿಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಶೀಲ್ಡ್ ವ್ಯಾಕ್ಸಿನ್ ಅನ್ನು ನಾಲ್ಕು ತಿಂಗಳ ಹಿಂದೆ ತೆಗೆದುಕೊಂಡಿದ್ದು, 2 ಡೋಸ್ ಪಡೆದಿರುವುದಾಗಿ ತಿಳಿಸಿದರು.</p>.<p>ನೀವು ಕರೋನಾ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೀರಿ, ಮನೆಯಲ್ಲಿ ಹೇಗೆ ಇರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಮೀನಾಕ್ಷಿ, ಮನೆಯಲ್ಲಿ ಐಸೋಲೇಷನ್ನಲ್ಲಿದ್ದು ಪ್ರತ್ಯೇಕ ಕೊಠಡಿಯತಲ್ಲಿ ಒಬ್ಬರೇ ಇರುವುದಾಗಿ ಹೇಳಿದರು.</p>.<p>ಆಸ್ಪತ್ರೆಯಿಂದ ಬಂದ ಕೂಡಲೇ ಸ್ಯಾನಿಟೈಸರ್ ಮಾಡಿಕೊಂಡು ಸ್ನಾನ ಮಾಡಿ, ನಂತರ ಒಬ್ಬರೇ ಅಡುಗೆಯನ್ನು ಮಾಡಿಕೊಳ್ಳುವುದಾಗಿ ಹೇಳಿದರು.</p>.<p>ಮನೆಯ ಸದಸ್ಯರಿಂದ ಅಂತರವನ್ನು ಕಾಯ್ದುಕೊಂಡು ಒಬ್ಬರೇ ಮುನ್ನೆಚ್ಚರಿಕೆಯಿಂದ ಇರುವುದಾಗಿ ತಿಳಿಸಿದರು.</p>.<p class="Subhead">ವೈದ್ಯಕೀಯ ಸಿಬ್ಬಂದಿ ಅಮೂಲ್ಯ ಆಸ್ತಿ:</p>.<p>ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಅಪಾಯವನ್ನು ಲೆಕ್ಕಿಸದೇ ಕಾರ್ಯದ ಒತ್ತಡದ ಮಧ್ಯೆಯೂ ನಿರಂತರವಾಗಿ ಕೆಲಸ ಮಾಡುತ್ತಿರುವ ವೈದ್ಯರು, ನರ್ಸ್ ಸೇರಿದಂತೆ ಎಲ್ಲ ವೈದ್ಯಕೀಯ ಸಿಬ್ಬಂದಿ ನಮ್ಮ ಅಮೂಲ್ಯ ಆಸ್ತಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದರು.</p>.<p>ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಸರ್ಕಾರ ಬದ್ಧವಿದೆ. ಸೋಂಕು ತೀವ್ರಗೊಳ್ಳುತ್ತಿರುವ ಈ ಸಂದರ್ಭದಲ್ಲಿ ವೈದ್ಯರು ಮಾನವೀಯತೆ ನೆಲೆಗಟ್ಟಿನಲ್ಲಿ ಕೆಲಸ ಮಾಡುವ ಮೂಲಕ ಸೋಂಕಿತರು ಹಾಗೂ ತಮ್ಮ ಜೀವ ರಕ್ಷಣೆಗೆ ಮುಂದಾಗಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>