<p><strong>ವಿಜಯಪುರ:</strong> ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾರೀ ಸಂಖ್ಯೆಯಲ್ಲಿ ಮತದಾರರ ಹೆಸರು ತೆಗೆದು ಹಾಕಿರುವುದು ಸಂಶಯಕ್ಕೆ ಎಡೆ ಮಾಡಿದ್ದು, ಈ ಸಂಬಂಧ ನ್ಯಾಯಯುತ ಪರಿಶೀಲನೆ ನಡೆಯಬೇಕು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ನಿಯೋಗವು ಜಿಲ್ಲಾಧಿಕಾರಿ ಅವರನ್ನು ಆಗ್ರಹಿಸಿದೆ.</p>.<p>ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಶುಕ್ರವಾರಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ಅವರನ್ನು ಭೇಟಿ ಮಾಡಿ ಈ ಸಂಬಂಧ ಮನವಿ ಸಲ್ಲಿಸಿತು.</p>.<p>ಮಹಾನಗರ ಪಾಲಿಕೆ ಚುನಾವಣೆ ವೇಳೆ ಅಲ್ಪಸಂಖ್ಯಾತರು, ದಲಿತರು, ಕೊಳೆಗೇರಿ ನಿವಾಸಿಗಳು ಹಾಗೂ ಒಂದು ಪಕ್ಷದ ಪರ ಒಲವುಳ್ಳ ಸಾವಿರಾರು ಮತದಾರರನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ನ್ಯಾಯಯುತ ಪರಿಶೀಲನೆಯಾಗಬೇಕು ಎಂದು ಎಂ.ಬಿ.ಪಾಟೀಲ ಒತ್ತಾಯಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮತದಾರರ ಪಟ್ಟಿಯಿಂದ ಸಾವಿರಾರು ಸಂಖ್ಯೆಯಲ್ಲಿ ಮತದಾರರನ್ನು ಕೈಬಿಡುವ ಮುನ್ನಾ ನಿಯಮಗಳನ್ನು ಪಾಲಿಸದೇ ಇರುವುದು ಗಮನಕ್ಕೆ ಬಂದಿದೆ. ಹೆಸರು ತೆಗೆದುಹಾಕುವ ಮುನ್ನಾ ಸಂಬಂಧಿಸಿದ ಮತದಾರರಿಗೆ ನೋಟಿಸ್ ನೀಡಬೇಕು, ಅಕ್ಕಪಕ್ಕದ ಮನೆಯವರನ್ನು ವಿಚಾರಿಸಿ ಮಾಹಿತಿ ಪಡೆದ ಬಳಿಕ ಮುಂದಿನ ಕ್ರಮಕೈಗೊಳ್ಳಬೇಕು. ಆದರೆ, ಈ ಯಾವುದೇ ಪ್ರಕ್ರಿಯೆ ನಡೆದಿಲ್ಲ ಎಂಬ ಅನುಮಾನ ವ್ಯಕ್ತವಾಗಿದೆ ಎಂದರು.</p>.<p>ಪಾಲಿಕೆ ಚುನಾವಣೆ ವೇಳೆ ರಾಜಕೀಯ ಪಕ್ಷಗಳಿಗೆ ನೀಡಿರುವ ಮತದಾರರ ಪಟ್ಟಿಯೇ ಬೇರೆ, ಮತಗಟ್ಟೆ ಸಿಬ್ಬಂದಿಗೆ ನೀಡಿದ ಮತದಾರರ ಪಟ್ಟಿಯೇ ಬೇರೆ ಇದೆ. ಹೀಗಾಗಿಬಹಳಷ್ಟು ಜನ ಮತದಾನದಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರನ್ನು ವಿಚಾರಿಸಿದಾಗ ಮತದಾರರ ಪಟ್ಟಿ ಪರಿಷ್ಕರಣೆ 1, 2 ಮತ್ತು 3 ಮಾಡಿದ್ದೇವೆ. ಹೀಗಾಗಿ ವ್ಯತ್ಯಾಸ ಕಂಡುಬಂದಿದೆ ಎನ್ನುತ್ತಾರೆ. ಆದರೆ, ಆ ಪರಿಷ್ಕೃತ ಮತದಾರರ ಪಟ್ಟಿ ರಾಜಕೀಯ ಪಕ್ಷಗಳಿಗೆ ಲಭಿಸಿಲ್ಲ ಎಂದು ದೂರಿದರು.</p>.<p>ನಾಗಠಾಣ ಕ್ಷೇತ್ರದ ಮತದಾರರನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿದೆ ಎಂದರು.</p>.<p>ಖಾಸಗಿ ವ್ಯಕ್ತಿಯೊಬ್ಬ ಸರ್ಕಾರಿ ಅಧಿಕಾರಿ ಎಂದು ಸುಳ್ಳು ಹೇಳಿಕೊಂಡು ನಗರದ ವಿವಿಧ ವಾರ್ಡ್ಗಳಲ್ಲಿ ಮತದಾರರ ಮಾಹಿತಿ ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದಿದೆ. ಈ ಬಗ್ಗೆಯೂ ಪರಿಶೀಲನೆಯಾಗಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ತಿಳಿಸಿದ್ದೇವೆ ಎಂದರು.</p>.<p>ಮತದಾರರ ಪಟ್ಟಿಯಿಂದ ಹೆಸರು ತೆಗೆದಿರುವ ಬಗ್ಗೆ ಯಾರನ್ನೂ ಗುರಿ ಮಾಡುತ್ತಿಲ್ಲ, ವಿವಾದ ಮಾಡುವ ಉದ್ದೇಶವಿಲ್ಲ. ಆದರೆ, ಈ ಅನುಮಾನಗಳಿಗೆಪಾರದರ್ಶಕವಾದ ಸ್ಪಷ್ಟ ಉತ್ತರ ಬೇಕು. ತಪ್ಪುಗಳಾಗಿದ್ದರೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರ, ಮಾಜಿ ಶಾಸಕ ವಿಠ್ಠಲ ಕಟಕದೊಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ ಸಂಗಮೇಶ ಬಬಲೇಶ್ವರ, ಗಂಗಾಧರ ಸಂಬಣ್ಣಿ ಇದ್ದರು.</p>.<p>****</p>.<p>ಪಾಲಿಕೆ ಚುನಾವಣೆ ವೇಳೆ ಸಾವಿರಾರು ಸಂಖ್ಯೆಯ ಮತದಾರರು ಮತದಾನದ ಹಕ್ಕಿನಿಂದ ವಂಚಿತವಾಲು ಏನು ಕಾರಣ ಎಂಬ ಬಗ್ಗೆ ಒಂದು ವಾರದೊಳಗೆ ಜಿಲ್ಲಾಡಳಿತದಿಂದ ಸ್ಪಷ್ಟತೆ ಬೇಕು, ತಪ್ಪಿತಸ್ಥರ ವಿರುದ್ಧ ಕ್ರಮವಾಗಬೇಕು<br /><em><strong>–ಎಂ.ಬಿ.ಪಾಟೀಲ, ಅಧ್ಯಕ್ಷ, ಕೆಪಿಸಿಸಿ ಪ್ರಚಾರ ಸಮಿತಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾರೀ ಸಂಖ್ಯೆಯಲ್ಲಿ ಮತದಾರರ ಹೆಸರು ತೆಗೆದು ಹಾಕಿರುವುದು ಸಂಶಯಕ್ಕೆ ಎಡೆ ಮಾಡಿದ್ದು, ಈ ಸಂಬಂಧ ನ್ಯಾಯಯುತ ಪರಿಶೀಲನೆ ನಡೆಯಬೇಕು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ನಿಯೋಗವು ಜಿಲ್ಲಾಧಿಕಾರಿ ಅವರನ್ನು ಆಗ್ರಹಿಸಿದೆ.</p>.<p>ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಶುಕ್ರವಾರಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ಅವರನ್ನು ಭೇಟಿ ಮಾಡಿ ಈ ಸಂಬಂಧ ಮನವಿ ಸಲ್ಲಿಸಿತು.</p>.<p>ಮಹಾನಗರ ಪಾಲಿಕೆ ಚುನಾವಣೆ ವೇಳೆ ಅಲ್ಪಸಂಖ್ಯಾತರು, ದಲಿತರು, ಕೊಳೆಗೇರಿ ನಿವಾಸಿಗಳು ಹಾಗೂ ಒಂದು ಪಕ್ಷದ ಪರ ಒಲವುಳ್ಳ ಸಾವಿರಾರು ಮತದಾರರನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ನ್ಯಾಯಯುತ ಪರಿಶೀಲನೆಯಾಗಬೇಕು ಎಂದು ಎಂ.ಬಿ.ಪಾಟೀಲ ಒತ್ತಾಯಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮತದಾರರ ಪಟ್ಟಿಯಿಂದ ಸಾವಿರಾರು ಸಂಖ್ಯೆಯಲ್ಲಿ ಮತದಾರರನ್ನು ಕೈಬಿಡುವ ಮುನ್ನಾ ನಿಯಮಗಳನ್ನು ಪಾಲಿಸದೇ ಇರುವುದು ಗಮನಕ್ಕೆ ಬಂದಿದೆ. ಹೆಸರು ತೆಗೆದುಹಾಕುವ ಮುನ್ನಾ ಸಂಬಂಧಿಸಿದ ಮತದಾರರಿಗೆ ನೋಟಿಸ್ ನೀಡಬೇಕು, ಅಕ್ಕಪಕ್ಕದ ಮನೆಯವರನ್ನು ವಿಚಾರಿಸಿ ಮಾಹಿತಿ ಪಡೆದ ಬಳಿಕ ಮುಂದಿನ ಕ್ರಮಕೈಗೊಳ್ಳಬೇಕು. ಆದರೆ, ಈ ಯಾವುದೇ ಪ್ರಕ್ರಿಯೆ ನಡೆದಿಲ್ಲ ಎಂಬ ಅನುಮಾನ ವ್ಯಕ್ತವಾಗಿದೆ ಎಂದರು.</p>.<p>ಪಾಲಿಕೆ ಚುನಾವಣೆ ವೇಳೆ ರಾಜಕೀಯ ಪಕ್ಷಗಳಿಗೆ ನೀಡಿರುವ ಮತದಾರರ ಪಟ್ಟಿಯೇ ಬೇರೆ, ಮತಗಟ್ಟೆ ಸಿಬ್ಬಂದಿಗೆ ನೀಡಿದ ಮತದಾರರ ಪಟ್ಟಿಯೇ ಬೇರೆ ಇದೆ. ಹೀಗಾಗಿಬಹಳಷ್ಟು ಜನ ಮತದಾನದಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರನ್ನು ವಿಚಾರಿಸಿದಾಗ ಮತದಾರರ ಪಟ್ಟಿ ಪರಿಷ್ಕರಣೆ 1, 2 ಮತ್ತು 3 ಮಾಡಿದ್ದೇವೆ. ಹೀಗಾಗಿ ವ್ಯತ್ಯಾಸ ಕಂಡುಬಂದಿದೆ ಎನ್ನುತ್ತಾರೆ. ಆದರೆ, ಆ ಪರಿಷ್ಕೃತ ಮತದಾರರ ಪಟ್ಟಿ ರಾಜಕೀಯ ಪಕ್ಷಗಳಿಗೆ ಲಭಿಸಿಲ್ಲ ಎಂದು ದೂರಿದರು.</p>.<p>ನಾಗಠಾಣ ಕ್ಷೇತ್ರದ ಮತದಾರರನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿದೆ ಎಂದರು.</p>.<p>ಖಾಸಗಿ ವ್ಯಕ್ತಿಯೊಬ್ಬ ಸರ್ಕಾರಿ ಅಧಿಕಾರಿ ಎಂದು ಸುಳ್ಳು ಹೇಳಿಕೊಂಡು ನಗರದ ವಿವಿಧ ವಾರ್ಡ್ಗಳಲ್ಲಿ ಮತದಾರರ ಮಾಹಿತಿ ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದಿದೆ. ಈ ಬಗ್ಗೆಯೂ ಪರಿಶೀಲನೆಯಾಗಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ತಿಳಿಸಿದ್ದೇವೆ ಎಂದರು.</p>.<p>ಮತದಾರರ ಪಟ್ಟಿಯಿಂದ ಹೆಸರು ತೆಗೆದಿರುವ ಬಗ್ಗೆ ಯಾರನ್ನೂ ಗುರಿ ಮಾಡುತ್ತಿಲ್ಲ, ವಿವಾದ ಮಾಡುವ ಉದ್ದೇಶವಿಲ್ಲ. ಆದರೆ, ಈ ಅನುಮಾನಗಳಿಗೆಪಾರದರ್ಶಕವಾದ ಸ್ಪಷ್ಟ ಉತ್ತರ ಬೇಕು. ತಪ್ಪುಗಳಾಗಿದ್ದರೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರ, ಮಾಜಿ ಶಾಸಕ ವಿಠ್ಠಲ ಕಟಕದೊಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ ಸಂಗಮೇಶ ಬಬಲೇಶ್ವರ, ಗಂಗಾಧರ ಸಂಬಣ್ಣಿ ಇದ್ದರು.</p>.<p>****</p>.<p>ಪಾಲಿಕೆ ಚುನಾವಣೆ ವೇಳೆ ಸಾವಿರಾರು ಸಂಖ್ಯೆಯ ಮತದಾರರು ಮತದಾನದ ಹಕ್ಕಿನಿಂದ ವಂಚಿತವಾಲು ಏನು ಕಾರಣ ಎಂಬ ಬಗ್ಗೆ ಒಂದು ವಾರದೊಳಗೆ ಜಿಲ್ಲಾಡಳಿತದಿಂದ ಸ್ಪಷ್ಟತೆ ಬೇಕು, ತಪ್ಪಿತಸ್ಥರ ವಿರುದ್ಧ ಕ್ರಮವಾಗಬೇಕು<br /><em><strong>–ಎಂ.ಬಿ.ಪಾಟೀಲ, ಅಧ್ಯಕ್ಷ, ಕೆಪಿಸಿಸಿ ಪ್ರಚಾರ ಸಮಿತಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>