<p><strong>ವಿಜಯಪುರ: </strong>ನಗರದ ಜಿಲ್ಲಾ ಕ್ರೀಡಾಂಗಣದ ಬಾಕಿ ಇರುವ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಪಿ. ಸುನಿಲ್ಕುಮಾರ್ ಸೂಚಿಸಿದರು.</p>.<p>ನಗರದ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರುಮಾತನಾಡಿದರು.</p>.<p>ಕ್ರೀಡಾಂಗಣದ ಸಿಂಥೆಟಿಕ್ ಟ್ರ್ಯಾಕ್ನ ಮಧ್ಯದಲ್ಲಿ ಹುಲ್ಲು ಹಾಸಿಗೆ, ಸ್ಪಿಂಕ್ಲರ್ಸ್ ಅಳವಡಿಕೆ, ಟ್ರ್ಯಾಕ್ ಫೀಲ್ಡ್ ಇವೆಂಟ್ ಸಲಕರಣೆಗಳನ್ನು ಅಳವಡಿಸುವುದು ಮತ್ತು ಕ್ರೀಡಾಂಗಣದಿಂದ ಶಹಾಪೇಟೆ ಸಂಪರ್ಕಿಸುವ ಚರಂಡಿ ಕೆಲಸ ನಿರ್ವಹಿಸಲು ₹1.31ಕೋಟಿ ಅನುದಾನದ ಅವಕಾಶ ಮಾಡಿಕೊಂಡು ಕಾಮಗಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.</p>.<p>ಕನಕದಾಸ ಬಡಾವಣೆಯಲ್ಲಿ ನಿರ್ಮಿಸುತ್ತಿರುವ ಈಜುಕೊಳ ಕಾಮಗಾರಿಯನ್ನು ₹ 2.20 ಕೋಟಿ ವೆಚ್ಚದಲ್ಲಿ ವ್ಯವಸ್ಥಿತ ರೀತಿಯಲ್ಲಿ ಕೈಗೊಳ್ಳಬೇಕು. ಕಾಮಗಾರಿ ಪೂರ್ಣಗೊಂಡ ನಂತರ ಅದರ ಬಳಕೆಯ ಕ್ರೀಯಾ ಯೋಜನೆಯನ್ನು ವ್ಯವಸ್ಥಿತ ರೀತಿಯಲ್ಲಿ ಕೈಗೊಳ್ಳಬೇಕು ಎಂದರು.</p>.<p>ಕನಕದಾಸ ಬಡಾವಣೆಯಲ್ಲಿನ ಒಳಾಂಗಣ ಕ್ರೀಡಾಂಗಣದ ಕಾಮಗಾರಿಯಲ್ಲಿ ಯಾವುದೇ ರೀತಿಯಲ್ಲಿ ಲೋಪಗಳಾದಂತೆ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.</p>.<p>ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ವಾಲಿಬಾಲ್ ಅಂಕಣ ಕಾಮಗಾರಿಯು ಪೂರ್ಣಗೊಂಡಿದ್ದು, ಅನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು ಎಂದರು.</p>.<p>ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಲೋಣಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ನಗರದ ಜಿಲ್ಲಾ ಕ್ರೀಡಾಂಗಣದ ಬಾಕಿ ಇರುವ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಪಿ. ಸುನಿಲ್ಕುಮಾರ್ ಸೂಚಿಸಿದರು.</p>.<p>ನಗರದ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರುಮಾತನಾಡಿದರು.</p>.<p>ಕ್ರೀಡಾಂಗಣದ ಸಿಂಥೆಟಿಕ್ ಟ್ರ್ಯಾಕ್ನ ಮಧ್ಯದಲ್ಲಿ ಹುಲ್ಲು ಹಾಸಿಗೆ, ಸ್ಪಿಂಕ್ಲರ್ಸ್ ಅಳವಡಿಕೆ, ಟ್ರ್ಯಾಕ್ ಫೀಲ್ಡ್ ಇವೆಂಟ್ ಸಲಕರಣೆಗಳನ್ನು ಅಳವಡಿಸುವುದು ಮತ್ತು ಕ್ರೀಡಾಂಗಣದಿಂದ ಶಹಾಪೇಟೆ ಸಂಪರ್ಕಿಸುವ ಚರಂಡಿ ಕೆಲಸ ನಿರ್ವಹಿಸಲು ₹1.31ಕೋಟಿ ಅನುದಾನದ ಅವಕಾಶ ಮಾಡಿಕೊಂಡು ಕಾಮಗಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.</p>.<p>ಕನಕದಾಸ ಬಡಾವಣೆಯಲ್ಲಿ ನಿರ್ಮಿಸುತ್ತಿರುವ ಈಜುಕೊಳ ಕಾಮಗಾರಿಯನ್ನು ₹ 2.20 ಕೋಟಿ ವೆಚ್ಚದಲ್ಲಿ ವ್ಯವಸ್ಥಿತ ರೀತಿಯಲ್ಲಿ ಕೈಗೊಳ್ಳಬೇಕು. ಕಾಮಗಾರಿ ಪೂರ್ಣಗೊಂಡ ನಂತರ ಅದರ ಬಳಕೆಯ ಕ್ರೀಯಾ ಯೋಜನೆಯನ್ನು ವ್ಯವಸ್ಥಿತ ರೀತಿಯಲ್ಲಿ ಕೈಗೊಳ್ಳಬೇಕು ಎಂದರು.</p>.<p>ಕನಕದಾಸ ಬಡಾವಣೆಯಲ್ಲಿನ ಒಳಾಂಗಣ ಕ್ರೀಡಾಂಗಣದ ಕಾಮಗಾರಿಯಲ್ಲಿ ಯಾವುದೇ ರೀತಿಯಲ್ಲಿ ಲೋಪಗಳಾದಂತೆ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.</p>.<p>ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ವಾಲಿಬಾಲ್ ಅಂಕಣ ಕಾಮಗಾರಿಯು ಪೂರ್ಣಗೊಂಡಿದ್ದು, ಅನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು ಎಂದರು.</p>.<p>ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಲೋಣಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>