<p><strong>ಸಿಂದಗಿ(ವಿಜಯಪುರ):</strong> ರಮೇಶ ಭೂಸನೂರ ಎರಡು ಬಾರಿ ಶಾಸಕರಾಗಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಸಾಕಷ್ಟು ದುಡಿದಿದ್ದಾರೆ. ಅವರನ್ನೇ ಈ ಸಲ ಆಯ್ಕೆ ಮಾಡುವುದಾಗಿ ಮತದಾರರುವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.</p>.<p>ಇಲ್ಲಿಯ ಬಿಜೆಪಿ ಅಭ್ಯರ್ಥಿ ಚುನಾವಣಾ ಪ್ರಚಾರ ಕಾರ್ಯಾಲಯದಲ್ಲಿ ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಭೂಸನೂರ ಅಧಿಕಾರದಲ್ಲಿರದಿದ್ದರೂ ಈ ಮೂರುವರೆ ವರ್ಷ ಜನಸೇವೆ ಮಾಡುವುದನ್ನು ನಿಲ್ಲಿಸಿಲ್ಲ. ಜನರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಈ ಹಿಂದಿನ ಅವರ ಅಧಿಕಾರದ 10 ವರ್ಷಗಳ ಅವಧಿಯಲ್ಲಿ ಮತಕ್ಷೇತ್ರದಲ್ಲಿ ನೀರಾವರಿ ಯೋಜನೆಗೆ ಸಾಕಷ್ಟು ಅನುದಾನ ಬಿಡುಗಡೆಗೊಳಿಸಿದ್ದಾರೆ. ಅಂದು ಬಾಕಿ ಉಳಿದ ನೀರಾವರಿ ಯೋಜನೆ ಇನ್ನೂ ಹಾಗೇ ಇದೆ ಅವುಗಳನ್ನು ಈ ಬಾರಿ ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಕಳೆದ 8-10 ದಿನಗಳಿಂದ ತಾವು ಪಾದಯಾತ್ರೆ ಕೈಗೊಂಡ ಗ್ರಾಮಗಳಲ್ಲಿ ಭೂಸನೂರ ಪರ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ತಿಳಿಸಿದರು.</p>.<p>ಈ ಭಾಗದ ಭೀಮಾ ತೀರದಲ್ಲಿ 2019 ರಲ್ಲಿ ಪ್ರವಾಹ ಉಂಟಾಗಿ 2256 ಹೆಕ್ಟೆರ್ ಪ್ರದೇಶದಲ್ಲಿನ ಕಬ್ಬು, ತೊಗರಿ, ಸೂರ್ಯಕಾಂತಿ, ಮೆಕ್ಕೆಜೋಳ, ಸಜ್ಜೆ, ಶೇಂಗಾ, ಹತ್ತಿ ಬೆಳೆಗಳು ನಾಶಗೊಂಡಿದ್ದು ಈಗಾಗಲೇ ₹ 3453.8 ಲಕ್ಷ ಪರಿಹಾರ ಹಣ ನೇರ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಸ್ವತ: ಎಲ್ಲ ಗ್ರಾಮಗಳಿಗೆ ಭೇಟಿ ನೀಡಿದಾಗ ಹಾಳಾಗಿರುವ ರಸ್ತೆ, ತಡೆಗೋಡೆ ಕಾಮಗಾರಿಗಳನ್ನು ಪ್ರಾರಂಭಿಸುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿರುವೆ. ಅದೇ ರೀತಿ 2020 ರ ಪ್ರವಾಹದ ಸಂದರ್ಭದಲ್ಲೂ 20952 ಹೆಕ್ಟೆರ್ ಕ್ಷೇತ್ರದಲ್ಲಿ ಬೆಳೆ ಹಾನಿಯಾಗಿರುವ ಬಗ್ಗೆ ಈಗಾಗಲೇ 28327 ರೈತರ 23758 ಹೆಕ್ಟೆರ್ ಪ್ರದೇಶದ ಜಮೀನುಗಳನ್ನು ತಂತ್ರಾಂಶದಲ್ಲಿ ದಾಖಲಿಸಲಾಗಿದೆ. ಪರಿಹಾರ ಶೀಘ್ರದಲ್ಲಿಯೇ ಜಮೆಯಾಗಲಿದೆ ಎಂದು ಹೇಳಿದರು.</p>.<p>ಮಹಾಪೂರದಿಂದ ಮುಳುಗಡೆಯಾಗಿರುವ ತಾರಾಪೂರ, ಬ್ಯಾಡಗಿಹಾಳ ಗ್ರಾಮದ ಸಂತ್ರಸ್ತರಿಗೆ 358 ಹಕ್ಕು ಪತ್ರಗಳನ್ನು ವಿತರಣೆ ಮಾಡಲಾಗಿದೆ. ಈ ಪುನರ್ವಸತಿ ಕೇಂದ್ರಗಳನ್ನು ಸುಸಜ್ಜಿತಗೊಳಿಸುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.</p>.<p>ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭೂಸನೂರ ಅವರನ್ನು ಗೆಲ್ಲಿಸಿದರೆ ಅಭಿವೃದ್ಧಿಗೆ ಕೈಜೋಡಿಸಿದಂತಾಗುತ್ತದೆ ಎಂದು ಸಚಿವೆ ಜೊಲ್ಲೆ ಮನವಿ ಮಾಡಿಕೊಂಡರು.</p>.<p>ಲಲಿತಾ ಭೂಸನೂರ, ಶಿಲ್ಪಾ ಕುದರಗೊಂಡ, ಮಲ್ಲಮ್ಮ ಜೋಗೂರ, ವಿಜುಗೌಡ ಪಾಟೀಲ, ಈರಣ್ಣ ರಾವೂರ, ಘಟಕಾಂಬಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ(ವಿಜಯಪುರ):</strong> ರಮೇಶ ಭೂಸನೂರ ಎರಡು ಬಾರಿ ಶಾಸಕರಾಗಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಸಾಕಷ್ಟು ದುಡಿದಿದ್ದಾರೆ. ಅವರನ್ನೇ ಈ ಸಲ ಆಯ್ಕೆ ಮಾಡುವುದಾಗಿ ಮತದಾರರುವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.</p>.<p>ಇಲ್ಲಿಯ ಬಿಜೆಪಿ ಅಭ್ಯರ್ಥಿ ಚುನಾವಣಾ ಪ್ರಚಾರ ಕಾರ್ಯಾಲಯದಲ್ಲಿ ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಭೂಸನೂರ ಅಧಿಕಾರದಲ್ಲಿರದಿದ್ದರೂ ಈ ಮೂರುವರೆ ವರ್ಷ ಜನಸೇವೆ ಮಾಡುವುದನ್ನು ನಿಲ್ಲಿಸಿಲ್ಲ. ಜನರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಈ ಹಿಂದಿನ ಅವರ ಅಧಿಕಾರದ 10 ವರ್ಷಗಳ ಅವಧಿಯಲ್ಲಿ ಮತಕ್ಷೇತ್ರದಲ್ಲಿ ನೀರಾವರಿ ಯೋಜನೆಗೆ ಸಾಕಷ್ಟು ಅನುದಾನ ಬಿಡುಗಡೆಗೊಳಿಸಿದ್ದಾರೆ. ಅಂದು ಬಾಕಿ ಉಳಿದ ನೀರಾವರಿ ಯೋಜನೆ ಇನ್ನೂ ಹಾಗೇ ಇದೆ ಅವುಗಳನ್ನು ಈ ಬಾರಿ ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಕಳೆದ 8-10 ದಿನಗಳಿಂದ ತಾವು ಪಾದಯಾತ್ರೆ ಕೈಗೊಂಡ ಗ್ರಾಮಗಳಲ್ಲಿ ಭೂಸನೂರ ಪರ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ತಿಳಿಸಿದರು.</p>.<p>ಈ ಭಾಗದ ಭೀಮಾ ತೀರದಲ್ಲಿ 2019 ರಲ್ಲಿ ಪ್ರವಾಹ ಉಂಟಾಗಿ 2256 ಹೆಕ್ಟೆರ್ ಪ್ರದೇಶದಲ್ಲಿನ ಕಬ್ಬು, ತೊಗರಿ, ಸೂರ್ಯಕಾಂತಿ, ಮೆಕ್ಕೆಜೋಳ, ಸಜ್ಜೆ, ಶೇಂಗಾ, ಹತ್ತಿ ಬೆಳೆಗಳು ನಾಶಗೊಂಡಿದ್ದು ಈಗಾಗಲೇ ₹ 3453.8 ಲಕ್ಷ ಪರಿಹಾರ ಹಣ ನೇರ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಸ್ವತ: ಎಲ್ಲ ಗ್ರಾಮಗಳಿಗೆ ಭೇಟಿ ನೀಡಿದಾಗ ಹಾಳಾಗಿರುವ ರಸ್ತೆ, ತಡೆಗೋಡೆ ಕಾಮಗಾರಿಗಳನ್ನು ಪ್ರಾರಂಭಿಸುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿರುವೆ. ಅದೇ ರೀತಿ 2020 ರ ಪ್ರವಾಹದ ಸಂದರ್ಭದಲ್ಲೂ 20952 ಹೆಕ್ಟೆರ್ ಕ್ಷೇತ್ರದಲ್ಲಿ ಬೆಳೆ ಹಾನಿಯಾಗಿರುವ ಬಗ್ಗೆ ಈಗಾಗಲೇ 28327 ರೈತರ 23758 ಹೆಕ್ಟೆರ್ ಪ್ರದೇಶದ ಜಮೀನುಗಳನ್ನು ತಂತ್ರಾಂಶದಲ್ಲಿ ದಾಖಲಿಸಲಾಗಿದೆ. ಪರಿಹಾರ ಶೀಘ್ರದಲ್ಲಿಯೇ ಜಮೆಯಾಗಲಿದೆ ಎಂದು ಹೇಳಿದರು.</p>.<p>ಮಹಾಪೂರದಿಂದ ಮುಳುಗಡೆಯಾಗಿರುವ ತಾರಾಪೂರ, ಬ್ಯಾಡಗಿಹಾಳ ಗ್ರಾಮದ ಸಂತ್ರಸ್ತರಿಗೆ 358 ಹಕ್ಕು ಪತ್ರಗಳನ್ನು ವಿತರಣೆ ಮಾಡಲಾಗಿದೆ. ಈ ಪುನರ್ವಸತಿ ಕೇಂದ್ರಗಳನ್ನು ಸುಸಜ್ಜಿತಗೊಳಿಸುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.</p>.<p>ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭೂಸನೂರ ಅವರನ್ನು ಗೆಲ್ಲಿಸಿದರೆ ಅಭಿವೃದ್ಧಿಗೆ ಕೈಜೋಡಿಸಿದಂತಾಗುತ್ತದೆ ಎಂದು ಸಚಿವೆ ಜೊಲ್ಲೆ ಮನವಿ ಮಾಡಿಕೊಂಡರು.</p>.<p>ಲಲಿತಾ ಭೂಸನೂರ, ಶಿಲ್ಪಾ ಕುದರಗೊಂಡ, ಮಲ್ಲಮ್ಮ ಜೋಗೂರ, ವಿಜುಗೌಡ ಪಾಟೀಲ, ಈರಣ್ಣ ರಾವೂರ, ಘಟಕಾಂಬಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>