ವಿಜಯಪುರ: ಕೋವಿಡ್ ನಿರ್ವಹಣೆಗೆ ರಾಜ್ಯ ಸರ್ಕಾರ ಇದುವರೆಗೆ ಕೈಗೊಂಡಿರುವ ಕ್ರಮಗಳೇನು, ಎಷ್ಟು ಹಣ ಖರ್ಚು ಮಾಡಿದೆ ಮತ್ತು ವೈದ್ಯರು, ಆರೋಗ್ಯ ಸಿಬ್ಬಂದಿಗೆ ಏನೆಲ್ಲ ಮೂಲ ಸೌಲಭ್ಯ ಕಲ್ಪಿಸಿದೆ ಎಂಬುದರ ಕುರಿತು ಶ್ವೇತಪತ್ರ ಹೊರಡಿಸಬೇಕು ಹಾಗೂ ಈ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ, ಪ್ರಕಾಶ ರಾಠೋಡ ಆಗ್ರಹಿಸಿದರು.