<p><strong>ವಿಜಯಪುರ: </strong>ಕೋವಿಡ್ ನಿರ್ವಹಣೆಗೆ ರಾಜ್ಯ ಸರ್ಕಾರ ಇದುವರೆಗೆ ಕೈಗೊಂಡಿರುವ ಕ್ರಮಗಳೇನು, ಎಷ್ಟು ಹಣ ಖರ್ಚು ಮಾಡಿದೆ ಮತ್ತು ವೈದ್ಯರು, ಆರೋಗ್ಯ ಸಿಬ್ಬಂದಿಗೆ ಏನೆಲ್ಲ ಮೂಲ ಸೌಲಭ್ಯ ಕಲ್ಪಿಸಿದೆ ಎಂಬುದರ ಕುರಿತು ಶ್ವೇತಪತ್ರ ಹೊರಡಿಸಬೇಕು ಹಾಗೂ ಈ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ, ಪ್ರಕಾಶ ರಾಠೋಡ ಆಗ್ರಹಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿದರು.</p>.<p>ಬಳ್ಳಾರಿಯಲ್ಲಿ ಕೋವಿಡ್ನಿಂದ ಸತ್ತವರನ್ನು ಗೌರವಯುತವಾಗಿ ಸಂಸ್ಕಾರ ಮಾಡವಲ್ಲೂ ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದೇ ಶವಗಳನ್ನು ಗುಂಡಿಗೆ ಎಸೆದು ಅವಮಾನ ಮಾಡಿರುವುದು ಖಂಡನೀಯ ಎಂದರು.</p>.<p class="Subhead"><strong>ಕೇಂದ್ರ ವಿಫಲ:</strong>ಪ್ರಧಾನಿ ಮೋದಿ ಅವರ ಆಡಳಿತಾವಧಿಯಲ್ಲಿ ದೇಶದ ಅರ್ಥ ವ್ಯವಸ್ಥೆ ಸಂಪೂರ್ಣ ಕುಸಿದುಹೋಗಿದೆ. ವಿದೇಶಾಂಗ ನೀತಿ ಅನುಷ್ಠಾನದಲ್ಲೂ ವಿಫಲವಾಗಿದೆ. ಪರಿಣಾಮ ನೆರೆಹೊರೆಯ ದೇಶಗಳ ಬಾಂಧವ್ಯ ಸಂಪೂರ್ಣ ಹದಗೆಟ್ಟಿದೆ ಎಂದು ದೂರಿದರು.</p>.<p>ಜಿಡಿಪಿ ಮೈನಸ್ನತ್ತ ಸಾಗಿದೆ. ಪೆಟ್ರೋಲ್, ಡೀಸೆಲ್ ದರ ಹಿಂದೆಂದೂ ಕಾಣದಷ್ಟು ಏರಿಕೆಯಾಗಿದೆ. ಪರಿಣಾಮ ಬಡವರು, ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.</p>.<p>ಕೋವಿಡ್ ಸಂಕಷ್ಟ ನಿವಾರಣೆಗಾಗಿ ₹20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಆದರೆ, ಇದುವರೆಗೂ ಇದರ ಪ್ರಯೋಜನ ಯಾರಿಗೂ ತಲುಪಿಲ್ಲ. ಮೋದಿ ಅವರ ಅಚ್ಛೇದಿನ್ ಆಯೇಗಾ ಎಂಬುದು ಸುಳ್ಳಿನ ಕಂತೆ ಎಂದು ಟೀಕಿಸಿದರು.</p>.<p>ನೋಟು ರದ್ಧತಿಯಿಂದ ಕಾಂಗ್ರೆಸ್ನವರು ಸ್ವಿಸ್ ಬ್ಯಾಂಕಿನಲ್ಲಿ ಇಟ್ಟಿರುವ ಕಪ್ಪು ಹಣ ಹೊರತರುತ್ತೇನೆ ಎಂದು ಪ್ರಚಾರ ಮಾಡಿದರು. ಆದರೆ, ಇದುವರೆಗೂ ನಯಾಪೈಸೆ ತರಲು ಸಾಧ್ಯವಾಗಿಲ್ಲ. ಚುನಾವಣೆಯಲ್ಲಿ ಜನಸಾಮಾನ್ಯರಿಗೆ ನೀಡಿದ್ದ ಯಾವೊಂದು ಭರವಸೆಯೂ ಈಡೇರಿಲ್ಲ ಎಂದು ಹೇಳಿದರು.</p>.<p class="Subhead"><strong>ಬಿಜೆಪಿಗೆ ತಕ್ಕ ಪಾಠ:</strong>ವಿಜಯಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಸಂದರ್ಭದಲ್ಲಿ ಆಪರೇಷನ್ ಕಮಲದ ಮೂಲಕಕಾಂಗ್ರೆಸ್ನ ಮೂವರು ಸದಸ್ಯರನ್ನು ಸೆಳೆದಿದ್ದ ಬಿಜೆಪಿಯ ತಂತ್ರಕ್ಕೆ ಪ್ರತಿಯಾಗಿ ಆ ಪಕ್ಷದ ನಾಲ್ವರು ಸದಸ್ಯರನ್ನು ಕಾಂಗ್ರೆಸ್ಗೆ ಸೆಳೆಯುವ ಮೂಲಕ ತಕ್ಕ ಪಾಠ ಕಲಿಸಿದ್ದೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಕೋವಿಡ್ ನಿರ್ವಹಣೆಗೆ ರಾಜ್ಯ ಸರ್ಕಾರ ಇದುವರೆಗೆ ಕೈಗೊಂಡಿರುವ ಕ್ರಮಗಳೇನು, ಎಷ್ಟು ಹಣ ಖರ್ಚು ಮಾಡಿದೆ ಮತ್ತು ವೈದ್ಯರು, ಆರೋಗ್ಯ ಸಿಬ್ಬಂದಿಗೆ ಏನೆಲ್ಲ ಮೂಲ ಸೌಲಭ್ಯ ಕಲ್ಪಿಸಿದೆ ಎಂಬುದರ ಕುರಿತು ಶ್ವೇತಪತ್ರ ಹೊರಡಿಸಬೇಕು ಹಾಗೂ ಈ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ, ಪ್ರಕಾಶ ರಾಠೋಡ ಆಗ್ರಹಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿದರು.</p>.<p>ಬಳ್ಳಾರಿಯಲ್ಲಿ ಕೋವಿಡ್ನಿಂದ ಸತ್ತವರನ್ನು ಗೌರವಯುತವಾಗಿ ಸಂಸ್ಕಾರ ಮಾಡವಲ್ಲೂ ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದೇ ಶವಗಳನ್ನು ಗುಂಡಿಗೆ ಎಸೆದು ಅವಮಾನ ಮಾಡಿರುವುದು ಖಂಡನೀಯ ಎಂದರು.</p>.<p class="Subhead"><strong>ಕೇಂದ್ರ ವಿಫಲ:</strong>ಪ್ರಧಾನಿ ಮೋದಿ ಅವರ ಆಡಳಿತಾವಧಿಯಲ್ಲಿ ದೇಶದ ಅರ್ಥ ವ್ಯವಸ್ಥೆ ಸಂಪೂರ್ಣ ಕುಸಿದುಹೋಗಿದೆ. ವಿದೇಶಾಂಗ ನೀತಿ ಅನುಷ್ಠಾನದಲ್ಲೂ ವಿಫಲವಾಗಿದೆ. ಪರಿಣಾಮ ನೆರೆಹೊರೆಯ ದೇಶಗಳ ಬಾಂಧವ್ಯ ಸಂಪೂರ್ಣ ಹದಗೆಟ್ಟಿದೆ ಎಂದು ದೂರಿದರು.</p>.<p>ಜಿಡಿಪಿ ಮೈನಸ್ನತ್ತ ಸಾಗಿದೆ. ಪೆಟ್ರೋಲ್, ಡೀಸೆಲ್ ದರ ಹಿಂದೆಂದೂ ಕಾಣದಷ್ಟು ಏರಿಕೆಯಾಗಿದೆ. ಪರಿಣಾಮ ಬಡವರು, ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.</p>.<p>ಕೋವಿಡ್ ಸಂಕಷ್ಟ ನಿವಾರಣೆಗಾಗಿ ₹20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಆದರೆ, ಇದುವರೆಗೂ ಇದರ ಪ್ರಯೋಜನ ಯಾರಿಗೂ ತಲುಪಿಲ್ಲ. ಮೋದಿ ಅವರ ಅಚ್ಛೇದಿನ್ ಆಯೇಗಾ ಎಂಬುದು ಸುಳ್ಳಿನ ಕಂತೆ ಎಂದು ಟೀಕಿಸಿದರು.</p>.<p>ನೋಟು ರದ್ಧತಿಯಿಂದ ಕಾಂಗ್ರೆಸ್ನವರು ಸ್ವಿಸ್ ಬ್ಯಾಂಕಿನಲ್ಲಿ ಇಟ್ಟಿರುವ ಕಪ್ಪು ಹಣ ಹೊರತರುತ್ತೇನೆ ಎಂದು ಪ್ರಚಾರ ಮಾಡಿದರು. ಆದರೆ, ಇದುವರೆಗೂ ನಯಾಪೈಸೆ ತರಲು ಸಾಧ್ಯವಾಗಿಲ್ಲ. ಚುನಾವಣೆಯಲ್ಲಿ ಜನಸಾಮಾನ್ಯರಿಗೆ ನೀಡಿದ್ದ ಯಾವೊಂದು ಭರವಸೆಯೂ ಈಡೇರಿಲ್ಲ ಎಂದು ಹೇಳಿದರು.</p>.<p class="Subhead"><strong>ಬಿಜೆಪಿಗೆ ತಕ್ಕ ಪಾಠ:</strong>ವಿಜಯಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಸಂದರ್ಭದಲ್ಲಿ ಆಪರೇಷನ್ ಕಮಲದ ಮೂಲಕಕಾಂಗ್ರೆಸ್ನ ಮೂವರು ಸದಸ್ಯರನ್ನು ಸೆಳೆದಿದ್ದ ಬಿಜೆಪಿಯ ತಂತ್ರಕ್ಕೆ ಪ್ರತಿಯಾಗಿ ಆ ಪಕ್ಷದ ನಾಲ್ವರು ಸದಸ್ಯರನ್ನು ಕಾಂಗ್ರೆಸ್ಗೆ ಸೆಳೆಯುವ ಮೂಲಕ ತಕ್ಕ ಪಾಠ ಕಲಿಸಿದ್ದೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>