<p><strong>ಸಿಂದಗಿ:</strong> ಜೂನ್ 25 ರಿಂದ ಪ್ರಾರಂಭಗೊಳ್ಳುವ ಎಸ್ಸೆಸ್ಸೆಲ್ಸಿ ಪರೀಕ್ಷೆ ತುಂಬಾ ಎಚ್ಚರಿಕೆಯಿಂದ ನಡೆಸಬೇಕು. ಸಿಬ್ಬಂದಿ ಹಿಂದಿನಂತೆ ಪರೀಕ್ಷಾ ಪ್ರಕ್ರಿಯೆ ಎಂದು ನಡೆಸಿದರೆ ಸಾಲದು. ವಿದ್ಯಾರ್ಥಿಗಳ ಸುರಕ್ಷತೆ ತುಂಬಾ ಮುಖ್ಯವಾದುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಪ್ರಸನ್ನಕುಮಾರ ಹೇಳಿದರು.</p>.<p>ಇಲ್ಲಿಯ ಪದ್ಮರಾಜ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪ್ರಜಾವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರಿಗೆ ಭರವಸೆ ನೀಡಿದ್ದೇನೆ. ಈ ಭರವಸೆಯನ್ನು ಉಳಿಸಿಕೊಳ್ಳುವ ದಿಸೆಯಲ್ಲಿ ಪರೀಕ್ಷಾ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಪರಿಶುದ್ಧ, ಆರೋಗ್ಯಕರ, ಶಿಸ್ತು, ನಕಲುಮುಕ್ತ ಪರೀಕ್ಷೆ ನಡೆಯಬೇಕು ಎಂದು ಕೇಳಿಕೊಂಡರು.</p>.<p>ಪರೀಕ್ಷಾ ಕೊಠಡಿಯಲ್ಲಿ ಅಹಿತಕರ ಘಟನೆ ನಡೆದರೆ ಮುಖ್ಯ ಆಧಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಅಂತವರಿಗೆ 3ರಿಂದ5 ವರ್ಷದ ಶಿಕ್ಷೆ ಕಟ್ಟಿಟ್ಟ ಬುತ್ತಿ. ಪ್ರಶ್ನೆಪತ್ರಿಕೆ ಬಗ್ಗೆ ತುಂಬಾ ಜವಾಬ್ದಾರಿ ವಹಿಸಬೇಕು ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಸಂಜೀವಕುಮಾರ ದಾಸರ, ಪ್ರಸ್ತುತ ಪರೀಕ್ಷೆ ಎಲ್ಲರಿಗೂ ಒಂದು ಸವಾಲು. ಇದರಲ್ಲಿ ಗೆದ್ದು ಬರಬೇಕಿದೆ ಎಂದರು.</p>.<p>ಪೊಲೀಸ್ ಇನ್ಸ್ಪೆಕ್ಟರ್ ಸತೀಶಕುಮಾರ ಕಾಂಬಳೆ, ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ವ್ಯಾಪಕ ನಕಲು ನಡೆಯುತ್ತಿರುವ ಬಗ್ಗೆ ಸೂಚನೆ ಇದೆ. ಈ ಸಲ ಸಂಪೂರ್ಣ ನಕಲುಮುಕ್ತ ಪರೀಕ್ಷೆ ನಡೆಯಬೇಕು ಎಂದರು.</p>.<p>ಬಿಇಒ ಎಚ್.ಎಸ್.ನಗನೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಾಸ್ಕ್ ಮತ್ತು ಸಾನಿಟೈಸರ್ ವಿತರಣಾ ಕಾರ್ಯಕ್ರಮ ನಡೆಯಿತು.</p>.<p>ದೇವರಹಿಪ್ಪರಗಿ ತಹಶೀಲ್ದಾರ್ ವೈ.ಬಿ.ನಾಗಠಾಣ, ತಾಲ್ಲೂಕು ಪಂಚಾಯ್ತಿ ಇಒ ಸುನೀಲ ಮದ್ದಿನ, ಕ್ಷೇತ್ರ ಸಮನ್ವಾಯಾಧಿಕಾರಿ ಸಂತೋಷಕುಮಾರ ಬೀಳಗಿ, ದೈಹಿಕ ಶಿಕ್ಷಣಾಧಿಕಾರಿ ಎ.ಎಂ.ಬಿರಾದಾರ, ಸುದೀರ ಕಮತಗಿ ಇದ್ದರು. ಆನಂದ ಮಾಡಗಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ಜೂನ್ 25 ರಿಂದ ಪ್ರಾರಂಭಗೊಳ್ಳುವ ಎಸ್ಸೆಸ್ಸೆಲ್ಸಿ ಪರೀಕ್ಷೆ ತುಂಬಾ ಎಚ್ಚರಿಕೆಯಿಂದ ನಡೆಸಬೇಕು. ಸಿಬ್ಬಂದಿ ಹಿಂದಿನಂತೆ ಪರೀಕ್ಷಾ ಪ್ರಕ್ರಿಯೆ ಎಂದು ನಡೆಸಿದರೆ ಸಾಲದು. ವಿದ್ಯಾರ್ಥಿಗಳ ಸುರಕ್ಷತೆ ತುಂಬಾ ಮುಖ್ಯವಾದುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಪ್ರಸನ್ನಕುಮಾರ ಹೇಳಿದರು.</p>.<p>ಇಲ್ಲಿಯ ಪದ್ಮರಾಜ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪ್ರಜಾವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರಿಗೆ ಭರವಸೆ ನೀಡಿದ್ದೇನೆ. ಈ ಭರವಸೆಯನ್ನು ಉಳಿಸಿಕೊಳ್ಳುವ ದಿಸೆಯಲ್ಲಿ ಪರೀಕ್ಷಾ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಪರಿಶುದ್ಧ, ಆರೋಗ್ಯಕರ, ಶಿಸ್ತು, ನಕಲುಮುಕ್ತ ಪರೀಕ್ಷೆ ನಡೆಯಬೇಕು ಎಂದು ಕೇಳಿಕೊಂಡರು.</p>.<p>ಪರೀಕ್ಷಾ ಕೊಠಡಿಯಲ್ಲಿ ಅಹಿತಕರ ಘಟನೆ ನಡೆದರೆ ಮುಖ್ಯ ಆಧಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಅಂತವರಿಗೆ 3ರಿಂದ5 ವರ್ಷದ ಶಿಕ್ಷೆ ಕಟ್ಟಿಟ್ಟ ಬುತ್ತಿ. ಪ್ರಶ್ನೆಪತ್ರಿಕೆ ಬಗ್ಗೆ ತುಂಬಾ ಜವಾಬ್ದಾರಿ ವಹಿಸಬೇಕು ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಸಂಜೀವಕುಮಾರ ದಾಸರ, ಪ್ರಸ್ತುತ ಪರೀಕ್ಷೆ ಎಲ್ಲರಿಗೂ ಒಂದು ಸವಾಲು. ಇದರಲ್ಲಿ ಗೆದ್ದು ಬರಬೇಕಿದೆ ಎಂದರು.</p>.<p>ಪೊಲೀಸ್ ಇನ್ಸ್ಪೆಕ್ಟರ್ ಸತೀಶಕುಮಾರ ಕಾಂಬಳೆ, ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ವ್ಯಾಪಕ ನಕಲು ನಡೆಯುತ್ತಿರುವ ಬಗ್ಗೆ ಸೂಚನೆ ಇದೆ. ಈ ಸಲ ಸಂಪೂರ್ಣ ನಕಲುಮುಕ್ತ ಪರೀಕ್ಷೆ ನಡೆಯಬೇಕು ಎಂದರು.</p>.<p>ಬಿಇಒ ಎಚ್.ಎಸ್.ನಗನೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಾಸ್ಕ್ ಮತ್ತು ಸಾನಿಟೈಸರ್ ವಿತರಣಾ ಕಾರ್ಯಕ್ರಮ ನಡೆಯಿತು.</p>.<p>ದೇವರಹಿಪ್ಪರಗಿ ತಹಶೀಲ್ದಾರ್ ವೈ.ಬಿ.ನಾಗಠಾಣ, ತಾಲ್ಲೂಕು ಪಂಚಾಯ್ತಿ ಇಒ ಸುನೀಲ ಮದ್ದಿನ, ಕ್ಷೇತ್ರ ಸಮನ್ವಾಯಾಧಿಕಾರಿ ಸಂತೋಷಕುಮಾರ ಬೀಳಗಿ, ದೈಹಿಕ ಶಿಕ್ಷಣಾಧಿಕಾರಿ ಎ.ಎಂ.ಬಿರಾದಾರ, ಸುದೀರ ಕಮತಗಿ ಇದ್ದರು. ಆನಂದ ಮಾಡಗಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>